ಚಾರ್ಮಾಡಿ ಘಾಟಿ ರಸ್ತೆಯಲ್ಲಿ ಭೂ ಕುಸಿತ 
ರಾಜ್ಯ

ಚಾರ್ಮಾಡಿ ಘಾಟಿಯಲ್ಲಿ ಭೂ ಕುಸಿತ: ಪೊಲೀಸರಿಂದ ಪ್ರಯಾಣಿಕರಿಗೆ ಬಿಸ್ಕೆಟ್, ನೀರು ಪೂರೈಕೆ

ಬೆಳ್ತಂಗಡಿ ತಾಲ್ಲೂಕಿನ ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಬೃಹತ್ ಪ್ರಮಾಣದಲ್ಲಿ ಗುಡ್ಡ ಕುಸಿದು ನಿನ್ನೆ ...

ಮಂಗಳೂರು: ಬೆಳ್ತಂಗಡಿ ತಾಲ್ಲೂಕಿನ ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಬೃಹತ್ ಪ್ರಮಾಣದಲ್ಲಿ ಗುಡ್ಡ ಕುಸಿದು ನಿನ್ನೆ ರಾತ್ರಿಯಿಂದ ಮಂಗಳೂರು-ಬೆಂಗಳೂರು ನಡುವೆ ವಾಹನ ಸಂಚಾರ ಸ್ಥಗಿತಗೊಂಡಿದ್ದು ಪೊಲೀಸರು ಪ್ರಯಾಣಿಕರ ನೆರವಿಗೆ ಧಾವಿಸಿದ್ದಾರೆ.

ರಸ್ತೆಗೆ ಬಿದ್ದಿರುವ ಕಲ್ಲು ಬಂಡೆಗಳು ಮತ್ತು ಮಣ್ಣನ್ನು ತೆಗೆಯಲು ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ಮತ್ತು ಸ್ಥಳೀಯರು ಸತತ ಕಾರ್ಯೋನ್ಮುಖರಾಗಿದ್ದಾರೆ. ರಸ್ತೆ ಬದಿಯಲ್ಲಿ ನೂರಾರು ವಾಹನಗಳು ಚಲಿಸಲಾಗದೆ ನಿಂತಿವೆ. ಕೆಲ ದಿನಗಳಿಂದ ಸತತ ಮಳೆಯಿಂದಾಗಿ ಚಾರ್ಮಾಡಿ ಘಾಟಿಯಲ್ಲಿ ಗುಡ್ಡದಿಂದ ಮಣ್ಣು ಮತ್ತು ಬಂಡೆಗಳು ಕುಸಿದು ಬೀಳುತ್ತಿದ್ದು ಇಂದು ಬೆಳಗ್ಗೆ ಕೂಡ ಎರಡು ಕಡೆಗಳಲ್ಲಿ ಭೂ ಕುಸಿತವಾಗಿದೆ. ಘಾಟಿಯ ಎರಡು ಮತ್ತು ಮೂರನೇ ತಿರುವಿನಲ್ಲಿ ಭೂ ಕುಸಿತದಿಂದಾಗಿ ಸಂಚಾರ ನಿರ್ಬಂಧವಾಗಿದೆ.

ಪ್ರಯಾಣಿಕರಿಗೆ ಬಿಸ್ಕತ್ತು ಮತ್ತು ನೀರನ್ನು ಪೂರೈಸಲಾಗಿದೆ. ಮಕ್ಕಳು, ಹಿರಿಯ ವ್ಯಕ್ತಿಗಳು ಹಸಿವಿನಿಂದ ನರಳುತ್ತಿದ್ದಾರೆ. ರಸ್ತೆಯಿಂದ ಕಲ್ಲು ಮಣ್ಣುಗಳನ್ನು ಆದಷ್ಟು ಶೀಘ್ರವೇ ತೆರವುಗೊಳಿಸುವಲ್ಲಿ ನಿರತರಾಗಿದ್ದೇವೆ ಎಂದು ದಕ್ಷಿಣ ಕನ್ನಡ ಜಿಲ್ಲೆ ಪೊಲೀಸ್ ವರಿಷ್ಠ ರವಿಕಾಂತೇಗೌಡ ತಿಳಿಸಿದ್ದಾರೆ. ಧರ್ಮಸ್ಥಳ ಮತ್ತು ಬೆಳ್ತಂಗಡಿ ಪೊಲೀಸರು ಸ್ಥಳಕ್ಕೆ ಧಾವಿಸಿ ಕಾರ್ಯನಿರತರಾಗಿದ್ದಾರೆ.

ರಸ್ತೆ ಕಾಮಾರಿ ಹಿನ್ನಲೆಯಲ್ಲಿ ಶಿರಾಡಿ ಘಾಟಿ ಕೂಡ ಸದ್ಯಕ್ಕೆ ಮುಚ್ಚಿರುವುದರಿಂದ ಸಂಚಾರ ದಟ್ಟಣೆ ಅಧಿಕವಾಗಿದೆ. ಚಾರ್ಮಾಡಿ ಘಾಟಿಗೆ ಬದಲು ಬೇರೆ ಮಾರ್ಗವನ್ನು ಮಂಗಳೂರಿನಿಂದ ಬೆಂಗಳೂರಿಗೆ ಹೋಗುವವರು ಬಳಸುವಂತೆ ಪೊಲೀಸರು ಮನವಿ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

ಅಭಿಷೇಕ್ ಶರ್ಮಾನನ್ನು ಮೂರೇ ಎಸೆತಗಳಲ್ಲಿ ಔಟ್ ಮಾಡುತ್ತೇನೆ: ಪಾಕ್ ನ 152.65 kmph ವೇಗಿಯ ಉದ್ಧಟತನದ ಮಾತು

ಡಿಕೆ ಶಿವಕುಮಾರ್ ಇದ್ದ ವೇದಿಕೆಯಲ್ಲೇ ಹೈಡ್ರಾಮಾ: RSS ಸಮವಸ್ತ್ರದಲ್ಲಿ ಬಿಜೆಪಿ ಶಾಸಕ ಮುನಿರತ್ನ ಧರಣಿ! Video

SCROLL FOR NEXT