ಮೈಸೂರು ವಿವಿ 
ರಾಜ್ಯ

ಕರ್ನಾಟಕದ ವಿಶ್ವವಿದ್ಯಾಲಯಗಳಿಗೆ 467 ಕೋಟಿ ರೂ. ಹೆಚ್ಚಿನ ಅನುದಾನ ಮಂಜೂರು

ಈ ವರ್ಷದ ರಾಷ್ಟ್ರೀಯ ಉಚ್ಚತರ್ ಶಿಕ್ಷಾ ಅಭಿಯಾನ- ಆರ್ ಯುಎಸ್ ಎ ಅಡಿಯಲ್ಲಿ ಕರ್ನಾಟಕ ಸಿಂಹಪಾಲು ಪಡೆದುಕೊಂಡಿದೆ. ದೇಶದಲ್ಲಿಯೇ ಅತಿ ಹೆಚ್ಚಿನ ಅನುದಾನವನ್ನು ಕರ್ನಾಟಕಕ್ಕೆ ಮಂಜೂರು ಆಗಿದೆ.

ಬೆಂಗಳೂರು: ಈ ವರ್ಷದ ರಾಷ್ಟ್ರೀಯ  ಉಚ್ಚತರ್ ಶಿಕ್ಷಾ ಅಭಿಯಾನ- ಆರ್ ಯುಎಸ್ ಎ ಅಡಿಯಲ್ಲಿ  ಕರ್ನಾಟಕ ಸಿಂಹಪಾಲು ಪಡೆದುಕೊಂಡಿದೆ. ದೇಶದಲ್ಲಿಯೇ ಅತಿ ಹೆಚ್ಚಿನ ಅನುದಾನ ಕರ್ನಾಟಕಕ್ಕೆ ಮಂಜೂರು ಆಗಿದೆ.
ರಾಜ್ಯಸರ್ಕಾರ ನಡೆಸುತ್ತಿರುವ ವಿಶ್ವವಿದ್ಯಾಲಯ ಮಾತ್ರವಲ್ಲವೇ, ಸರ್ಕಾರ ಮತ್ತು ಸ್ವಾಯತ್ತ  ಕಾಲೇಜುಗಳಿಗೂ ಈ ಬಾರಿ  ಆರ್ ಯುಎಸ್ ಎ ನಿಧಿಯಲ್ಲಿ ಹಂಚಿಕೆ ಮಾಡಲಾಗಿದೆ.
ಈ ಮಧ್ಯೆ ಸಂಶೋಧನೆ ಮತ್ತು ಅನ್ವೇಷಣೆಗಾಗಿ ಮೈಸೂರು ವಿವಿಗೆ 50 ಕೋಟಿ, ಬೆಂಗಳೂರು ವಿವಿಗೆ 20 ಕೋಟಿ ರೂ. ಹಂಚಿಕೆ ಮಾಡಲಾಗಿದೆ.   ರಾಜ್ಯದಲ್ಲಿನ 113ಕ್ಕೂ ಹೆಚ್ಚು ಪದವಿ ಕಾಲೇಜುಗಳಿಗೆ  ತಲಾ 2 ಕೋಟಿ ರೂಪಾಯಿ ಬಿಡುಗಡೆಯಾಗಿದೆ.
ಮೂಲಸೌಕರ್ಯ ಅಭಿವೃದ್ದಿ, ದುರಸ್ತಿ ಕೆಲಸ, ಪ್ರಾಯೋಗಾಲಯ ಸೌಕರ್ಯ ಮತ್ತು ವಿವಿ ಆವರಣದಲ್ಲಿ  ಉತ್ತಮ ನೆಟ್ ವರ್ಕಿಂಗ್ ಸೌಲಭ್ಯ ಕ್ಕಾಗಿ ಈ ಹಣ ಹಂಚಿಕೆಯಾಗಿದೆ ಎಂದು  ಉನ್ನತ ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ. 
ಆರ್ ಯುಎಸ್ ಎ ನಿಧಿಯಡಿ ಅನುದಾನ ಪಡೆಯಲು ವಿಶ್ವವಿದ್ಯಾಲಯಗಳು ನ್ಯಾಕ್ ನಿಂದ 2.5 ರಷ್ಟು ಅಂಕಗಳನ್ನು ಪಡೆದಿರಬೇಕಾಗುತ್ತದೆ ಎಂಬ ಮಾರ್ಗಸೂತ್ರ  ರೂಪಿಸಲಾಗಿದೆ.
 ಅದರಂತೆ ಮೈಸೂರು ವಿಶ್ವ ವಿದ್ಯಾಲಯ ನ್ಯಾಕ್ ನಿಂದ 3.47 ರಷ್ಟು ಅಂಕ ಪಡೆದಿದ್ದು,  100 ಕೋಟಿ ಅನುದಾನದಿಂದ  ವಂಚಿತವಾಗಿದೆ. ಇದನ್ನು ಪಡೆಯಲು 3.51 ಅಂಕಗಳ ಅಗತ್ಯವಿದೆ.
ನ್ಯಾಕ್ ನಿಂದ ಮಾನ್ಯತೆ ಪಡೆಯದ ಕೆಲ ವಿಶ್ವವಿದ್ಯಾಲಯಗಳು ಅನುದಾನ ಪಡೆಯಲು ಅರ್ಹರಿಲ್ಲ. ಬೆಳಗಾವಿಯ   ವಿಶ್ವೇಶ್ವರಯ್ಯ ತಾಂತ್ರಿಕ ವಿವಿ, ರಾಣಿ ಚೆನ್ನಮ್ಮ ವಿವಿ ಮತ್ತಿತರ ವಿಶ್ವವಿದ್ಯಾಲಯಗಳಿಗೆ ಇದು ಅನ್ವಯವಾಗುವುದಿಲ್ಲ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬಂಗಾಳದಲ್ಲಿ CAA, UCC ತ್ವರಿತ ಅನುಷ್ಠಾನ; ಮಾತುವಾ, ನಮಸುದ್ರರಿಗೆ ಪೌರತ್ವ ನೀಡುತ್ತೇವೆ: ಪ್ರಧಾನಿ ಮೋದಿ

ಹಾರ್ಮುಜ್ ತೆರೆಯಲು ಇರಾನ್ ಪರದಾಟ: ಜಲಸಂಧಿ ನಿರ್ಬಂಧಿಸಲು ತಾನೇ ನೆಟ್ಟ ಮೈನ್ಸ್ ಹುಡುಕಲು ವಿಫಲ; ಹಾಗಾದ್ರೆ ಮುಂದೇನು?

ಇಸ್ಲಾಮಾಬಾದ್‌ಗೆ ಆಗಮಿಸಿದ ಜೆಡಿ ವ್ಯಾನ್ಸ್ ವಿಮಾನಕ್ಕೆ ಪಾಕ್‌ನ ಐದು ಎಫ್-16 ಎಸ್ಕಾರ್ಟ್; Video ನೋಡಿ

ಹಾಡಹಗಲೇ, ನಡುರಸ್ತೆಯಲ್ಲಿ ಲಾಯರ್ ಗೆ ಗುಂಡಿಕ್ಕಿ ಹತ್ಯೆ, ಬೈಕ್ ಸ್ಟಾರ್ಟ್ ಆಗದೇ ಹಂತಕರ ಪರದಾಟ! Video

Viral Video: 'ರೀಲ್ಸ್‌ಗಾಗಿ ಮಗುವಿನ ಪ್ರಾಣವನ್ನೇ ಪಣಕ್ಕಿಟ್ಟ ತಂದೆ'; ಬಾಲ್ಕನಿಯಿಂದ ಜಿಗಿದ ಬಾಲಕ, ಅಪ್ಪನ ಹುಚ್ಚಾಟಕ್ಕೆ ತೀವ್ರ ಆಕ್ರೋಶ!

SCROLL FOR NEXT