ಸಾಂದರ್ಭಿಕ ಚಿತ್ರ 
ರಾಜ್ಯ

ಮಹದಾಯಿ ವಿವಾದ : ಪ್ರಧಾನಿ ಮೋದಿ ಭೇಟಿಗಾಗಿ ದೆಹಲಿಗೆ ರೈತ ನಿಯೋಗ ಪ್ರಯಾಣ

ಕಳಸಾ ಬಂಡೂರಿ ಹಾಗೂ ಮಹದಾಯಿ ನಾಲಾ ವಿವಾದ ಪರಿಹಾರಕ್ಕೆ ಪ್ರಧಾನಿ ನರೇಂದ್ರಮೋದಿ ಭೇಟಿ ಹಿನ್ನೆಲೆಯಲ್ಲಿ ರೈತ ನಿಯೋಗವೊಂದು ದೆಹಲಿಗೆ ಪ್ರಯಾಣ ಬೆಳೆಸಿದೆ.

ಹುಬ್ಬಳ್ಳಿ: ಕಳಸಾ ಬಂಡೂರಿ ಹಾಗೂ ಮಹದಾಯಿ ನಾಲಾ ವಿವಾದ ಪರಿಹಾರಕ್ಕೆ  ಪ್ರಧಾನಿ ನರೇಂದ್ರಮೋದಿ ಭೇಟಿ ಹಿನ್ನೆಲೆಯಲ್ಲಿ ರೈತ ನಿಯೋಗವೊಂದು ದೆಹಲಿಗೆ  ಪ್ರಯಾಣ ಬೆಳೆಸಿದೆ.

ಪ್ರಧಾನಮಂತ್ರಿಗಳಿಂದ ರೈತರಿಗೆ ಬುಲಾವ್ ಹಿನ್ನಲೆ ಪ್ರಧಾನಿ ಮೋದಿಯ ಭೇಟಿಗೆ ರೈತರು ಸಿದ್ಧವಾಗಿದ್ದು,   14 ಅಥವಾ 15 ರಂದು ಪ್ರಧಾನಿ ಮೋದಿಯವರನ್ನ ರೈತರ‌ ನಿಯೋಗ ಭೇಟಿಯಾಗಲಿದೆ. ಇದೇ ವೇಳೆ ಕೇಂದ್ರ ಹೆದ್ದಾರಿ ಖಾತೆ ಸಚಿವ ನಿತಿನ್ ಗಡ್ಕರಿ ಅವರೊಂದಿಗೂ ರೈತ ನಿಯೋಗ ಮಾತುಕತೆ ನಡೆಸಲಿದೆ.

ನಿವೃತ್ತ ನ್ಯಾಯಮೂರ್ತಿ ಎನ್. ವೆಂಕಟಾಚಲಯ್ಯ ನೇತೃತ್ವದಲ್ಲಿ ರಾಜ್ಯದ ರೈತರ‌ ನಿಯೋಗ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿಯಾಗಲಿದೆ. ಬೆಂಗಳೂರಿನ ಸಹ್ಯಾದ್ರಿ ಜನ-ಜಲ ಸೊಸೈಟಿ ಹಾಗೂ ಸಹಯೋಗ, ಮಹದಾಯಿ ಮಹಾವೇದಿಕೆ ಸಹಯೋಗದಲ್ಲಿ ಈ ಭೇಟಿ ನಡೆಯಲಿದೆ ಎಂದು ತಿಳಿದುಬಂದಿದೆ.

ಹುಬ್ಬಳ್ಳಿ, ಧಾರವಾಡ, ರಾಮದುರ್ಗ, ನರಗುಂದ ಸೇರಿದಂತೆ ರಾಜ್ಯದ 23 ಜನ ರೈತರು ದಿಲ್ಲಿಗೆ ತೆರಳಲಿದ್ದಾರೆ. ಇಂದು ಹುಬ್ಬಳ್ಳಿಯಿಂದ ಬೆಂಗಳೂರಿಗೆ ರೈತರು ಪ್ರಯಾಣ ಬೆಳೆಸಿದ್ದು, ನಾಳೆ ಬೆಂಗಳೂರಿನಿಂದ ವಿಮಾನದ ಮೂಲಕ ದಿಲ್ಲಿಗೆ ತೆರಳಲಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಭಾರತದ ಮೇಲೆ ಬೆರಳು ತೋರಿಸೋದು ನಿಮ್ಮ ಹಳೆಯ ಚಾಳಿ, ಆರೋಪ ಮಾಡೋದು ಬಿಟ್ಟು ಆಂತರಿಕ ಭದ್ರತಾ ವೈಫಲ್ಯಗಳತ್ತ ಗಮನಹರಿಸಿ: ಪಾಕ್'ಗೆ ಭಾರತ ತಿರುಗೇಟು

ದಕ್ಷಿಣ ಪಿನಾಕಿನಿ ಜಲವಿವಾದ ಪ್ರಕರಣ: ನ್ಯಾಯಮಂಡಳಿ ಸ್ಥಾಪಿಸುವಂತೆ ಕೇಂದ್ರಕ್ಕೆ ಸುಪ್ರೀಂಕೋರ್ಟ್ ನಿರ್ದೇಶನ

ಪತಿಯ ಅಂತ್ಯಕ್ರಿಯೆ ಪೂರ್ಣಗೊಳ್ಳುವ ಮೊದಲೇ ಸುನೇತ್ರಾ ಪವಾರ್ DCM ಆಗಿ ನೇಮಕಗೊಂಡಿರುವುದರ ಹಿಂದೆ ಬಿಜೆಪಿ 'ಮಾಸ್ಟರ್ ಮೈಂಡ್' ಕೈವಾಡ!

‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’: ಮೈಲಾರಲಿಂಗನ ಕಾರ್ಣಿಕ, ರೈತರ ಸಂತಸ? Video

ಬಲೂಚಿಸ್ತಾನದಲ್ಲಿ ಉಗ್ರರ ವಿರುದ್ಧ ಭಾರಿ ಕಾರ್ಯಾಚರಣೆ: 145 ಭಯೋತ್ಪಾದಕರ ಹತ್ಯೆಗೈದಿದ್ದೇವೆಂದ ಪಾಕಿಸ್ತಾನ, ಭಾರತ-ಆಫ್ಘನ್ ವಿರುದ್ಧ ಗಂಭೀರ ಆರೋಪ

SCROLL FOR NEXT