ಸಾಂದರ್ಭಿಕ ಚಿತ್ರ 
ರಾಜ್ಯ

ಮಹದಾಯಿ ವಿವಾದ : ಪ್ರಧಾನಿ ಮೋದಿ ಭೇಟಿಗಾಗಿ ದೆಹಲಿಗೆ ರೈತ ನಿಯೋಗ ಪ್ರಯಾಣ

ಕಳಸಾ ಬಂಡೂರಿ ಹಾಗೂ ಮಹದಾಯಿ ನಾಲಾ ವಿವಾದ ಪರಿಹಾರಕ್ಕೆ ಪ್ರಧಾನಿ ನರೇಂದ್ರಮೋದಿ ಭೇಟಿ ಹಿನ್ನೆಲೆಯಲ್ಲಿ ರೈತ ನಿಯೋಗವೊಂದು ದೆಹಲಿಗೆ ಪ್ರಯಾಣ ಬೆಳೆಸಿದೆ.

ಹುಬ್ಬಳ್ಳಿ: ಕಳಸಾ ಬಂಡೂರಿ ಹಾಗೂ ಮಹದಾಯಿ ನಾಲಾ ವಿವಾದ ಪರಿಹಾರಕ್ಕೆ  ಪ್ರಧಾನಿ ನರೇಂದ್ರಮೋದಿ ಭೇಟಿ ಹಿನ್ನೆಲೆಯಲ್ಲಿ ರೈತ ನಿಯೋಗವೊಂದು ದೆಹಲಿಗೆ  ಪ್ರಯಾಣ ಬೆಳೆಸಿದೆ.

ಪ್ರಧಾನಮಂತ್ರಿಗಳಿಂದ ರೈತರಿಗೆ ಬುಲಾವ್ ಹಿನ್ನಲೆ ಪ್ರಧಾನಿ ಮೋದಿಯ ಭೇಟಿಗೆ ರೈತರು ಸಿದ್ಧವಾಗಿದ್ದು,   14 ಅಥವಾ 15 ರಂದು ಪ್ರಧಾನಿ ಮೋದಿಯವರನ್ನ ರೈತರ‌ ನಿಯೋಗ ಭೇಟಿಯಾಗಲಿದೆ. ಇದೇ ವೇಳೆ ಕೇಂದ್ರ ಹೆದ್ದಾರಿ ಖಾತೆ ಸಚಿವ ನಿತಿನ್ ಗಡ್ಕರಿ ಅವರೊಂದಿಗೂ ರೈತ ನಿಯೋಗ ಮಾತುಕತೆ ನಡೆಸಲಿದೆ.

ನಿವೃತ್ತ ನ್ಯಾಯಮೂರ್ತಿ ಎನ್. ವೆಂಕಟಾಚಲಯ್ಯ ನೇತೃತ್ವದಲ್ಲಿ ರಾಜ್ಯದ ರೈತರ‌ ನಿಯೋಗ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿಯಾಗಲಿದೆ. ಬೆಂಗಳೂರಿನ ಸಹ್ಯಾದ್ರಿ ಜನ-ಜಲ ಸೊಸೈಟಿ ಹಾಗೂ ಸಹಯೋಗ, ಮಹದಾಯಿ ಮಹಾವೇದಿಕೆ ಸಹಯೋಗದಲ್ಲಿ ಈ ಭೇಟಿ ನಡೆಯಲಿದೆ ಎಂದು ತಿಳಿದುಬಂದಿದೆ.

ಹುಬ್ಬಳ್ಳಿ, ಧಾರವಾಡ, ರಾಮದುರ್ಗ, ನರಗುಂದ ಸೇರಿದಂತೆ ರಾಜ್ಯದ 23 ಜನ ರೈತರು ದಿಲ್ಲಿಗೆ ತೆರಳಲಿದ್ದಾರೆ. ಇಂದು ಹುಬ್ಬಳ್ಳಿಯಿಂದ ಬೆಂಗಳೂರಿಗೆ ರೈತರು ಪ್ರಯಾಣ ಬೆಳೆಸಿದ್ದು, ನಾಳೆ ಬೆಂಗಳೂರಿನಿಂದ ವಿಮಾನದ ಮೂಲಕ ದಿಲ್ಲಿಗೆ ತೆರಳಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಳ್ಳಿ, ಕಳ್ಳಿ' ಅಂತಾ ಘೋಷಣೆ ಕೂಗಿ ಮಮತಾ ಬ್ಯಾನರ್ಜಿ ಕಾರಿನ ಮೇಲೆ ಕಲ್ಲು ತೂರಾಟ, ಕೆಸರು ಎರಚಿ ಆಕ್ರೋಶ! ಭಯಾನಕ Video

ಸಂಪುಟ ವಿಸ್ತರಣೆ ಬಿಕ್ಕಟ್ಟು ಶಮನಕ್ಕೆ ಸಿಎಂ ಡಿಕೆ.ಶಿವಕುಮಾರ್ ದೆಹಲಿಗೆ ದೌಡು: ಹೈಕಮಾಂಡ್‌ ಜೊತೆ ಮಹತ್ವದ ಚರ್ಚೆ..!

ಬಿಡದಿ ಟೌನ್‌ಶಿಪ್‌ ಯೋಜನೆ ಬಗ್ಗೆ BJP-JDS ಅಪಪ್ರಚಾರ, ರೈತರ ಭೂಮಿ ಬಲವಂತವಾಗಿ ಪಡೆಯಲ್ಲ: ಸಚಿವ ಯತೀಂದ್ರ

ಖಾತೆ ಹಂಚಿಕೆಗೂ ಮುನ್ನ ಸಚಿವ ನಾಗೇಂದ್ರಗೆ ಸಂಕಷ್ಟ! ವಿಶೇಷ ನ್ಯಾಯಾಲಯದ ಜಾಮೀನು ಷರತ್ತು ಉಲ್ಲಂಘಿಸಿದ ಆರೋಪ

ಮುಂಬೈ: ಬಾಲಿವುಡ್ ನಟಿಯ ಮೇಲೆ ಅತ್ಯಾಚಾರ ಆರೋಪ; 73 ವರ್ಷದ ಖ್ಯಾತ ಸಿನಿಮಾ ಡೈರೆಕ್ಟರ್ ಬಂಧನ!