ಸಾಂದರ್ಭಿಕ ಚಿತ್ರ 
ರಾಜ್ಯ

ಮಹದಾಯಿ ವಿವಾದ : ಪ್ರಧಾನಿ ಮೋದಿ ಭೇಟಿಗಾಗಿ ದೆಹಲಿಗೆ ರೈತ ನಿಯೋಗ ಪ್ರಯಾಣ

ಕಳಸಾ ಬಂಡೂರಿ ಹಾಗೂ ಮಹದಾಯಿ ನಾಲಾ ವಿವಾದ ಪರಿಹಾರಕ್ಕೆ ಪ್ರಧಾನಿ ನರೇಂದ್ರಮೋದಿ ಭೇಟಿ ಹಿನ್ನೆಲೆಯಲ್ಲಿ ರೈತ ನಿಯೋಗವೊಂದು ದೆಹಲಿಗೆ ಪ್ರಯಾಣ ಬೆಳೆಸಿದೆ.

ಹುಬ್ಬಳ್ಳಿ: ಕಳಸಾ ಬಂಡೂರಿ ಹಾಗೂ ಮಹದಾಯಿ ನಾಲಾ ವಿವಾದ ಪರಿಹಾರಕ್ಕೆ  ಪ್ರಧಾನಿ ನರೇಂದ್ರಮೋದಿ ಭೇಟಿ ಹಿನ್ನೆಲೆಯಲ್ಲಿ ರೈತ ನಿಯೋಗವೊಂದು ದೆಹಲಿಗೆ  ಪ್ರಯಾಣ ಬೆಳೆಸಿದೆ.

ಪ್ರಧಾನಮಂತ್ರಿಗಳಿಂದ ರೈತರಿಗೆ ಬುಲಾವ್ ಹಿನ್ನಲೆ ಪ್ರಧಾನಿ ಮೋದಿಯ ಭೇಟಿಗೆ ರೈತರು ಸಿದ್ಧವಾಗಿದ್ದು,   14 ಅಥವಾ 15 ರಂದು ಪ್ರಧಾನಿ ಮೋದಿಯವರನ್ನ ರೈತರ‌ ನಿಯೋಗ ಭೇಟಿಯಾಗಲಿದೆ. ಇದೇ ವೇಳೆ ಕೇಂದ್ರ ಹೆದ್ದಾರಿ ಖಾತೆ ಸಚಿವ ನಿತಿನ್ ಗಡ್ಕರಿ ಅವರೊಂದಿಗೂ ರೈತ ನಿಯೋಗ ಮಾತುಕತೆ ನಡೆಸಲಿದೆ.

ನಿವೃತ್ತ ನ್ಯಾಯಮೂರ್ತಿ ಎನ್. ವೆಂಕಟಾಚಲಯ್ಯ ನೇತೃತ್ವದಲ್ಲಿ ರಾಜ್ಯದ ರೈತರ‌ ನಿಯೋಗ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿಯಾಗಲಿದೆ. ಬೆಂಗಳೂರಿನ ಸಹ್ಯಾದ್ರಿ ಜನ-ಜಲ ಸೊಸೈಟಿ ಹಾಗೂ ಸಹಯೋಗ, ಮಹದಾಯಿ ಮಹಾವೇದಿಕೆ ಸಹಯೋಗದಲ್ಲಿ ಈ ಭೇಟಿ ನಡೆಯಲಿದೆ ಎಂದು ತಿಳಿದುಬಂದಿದೆ.

ಹುಬ್ಬಳ್ಳಿ, ಧಾರವಾಡ, ರಾಮದುರ್ಗ, ನರಗುಂದ ಸೇರಿದಂತೆ ರಾಜ್ಯದ 23 ಜನ ರೈತರು ದಿಲ್ಲಿಗೆ ತೆರಳಲಿದ್ದಾರೆ. ಇಂದು ಹುಬ್ಬಳ್ಳಿಯಿಂದ ಬೆಂಗಳೂರಿಗೆ ರೈತರು ಪ್ರಯಾಣ ಬೆಳೆಸಿದ್ದು, ನಾಳೆ ಬೆಂಗಳೂರಿನಿಂದ ವಿಮಾನದ ಮೂಲಕ ದಿಲ್ಲಿಗೆ ತೆರಳಲಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೇಶಕ್ಕೆ ಸ್ವಾತಂತ್ರ್ಯ ಬಂದ 79 ವರ್ಷಗಳ ನಂತರ 'ವಂದೇ ಮಾತರಂ' ಚರ್ಚೆಯ ಅಗತ್ಯವೇನಿತ್ತು?: ಪ್ರಿಯಾಂಕಾ ಗಾಂಧಿ; Video

ಅಪ್ಪಿತಪ್ಪಿ ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿಯಾದರೆ ಅವರ ಸಂಪುಟಕ್ಕೆ ಸೇರಲ್ಲ: Congress ಶಾಸಕ ಕೆ.ಎನ್ ರಾಜಣ್ಣ

KPS ಶಾಲೆ ತೆರೆಯಲು ಕನ್ನಡ ಮಾಧ್ಯಮ ಶಾಲೆಗಳಿಗೆ ಬೀಗ: 'ಕನ್ನಡ ನನ್ನ ರಕ್ತ'ದಲ್ಲಿದೆ ಎಂದ ಶಿಕ್ಷಣ ಸಚಿವರು!

ಬೀದರ್: 'ಹಿಂದೂ' ಎನ್ನುವುದು ಧರ್ಮವೇ ಅಲ್ಲ, ಅದೊಂದು ಕೆಟ್ಟ ಬೈಗುಳ; ನಿವೃತ್ತ ನ್ಯಾಯಮೂರ್ತಿ

ನಿಮ್ಮ ಪತ್ನಿ ಭಾರತೀಯಳಲ್ಲವೇ? ವಲಸೆ ವಿಚಾರವಾಗಿ ಮತ್ತೆ 'ಅಪಹಾಸ್ಯ'ಕ್ಕೀಡಾದ ಅಮೆರಿಕಾದ ಉಪಾಧ್ಯಕ್ಷ ಜೆಡಿ ವ್ಯಾನ್ಸ್!

SCROLL FOR NEXT