ಶಾಲಿನಿ ರಜನೀಶ್ 
ರಾಜ್ಯ

ಕರ್ನಾಟಕದ 101 ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳ ಪ್ರಾರಂಭಕ್ಕೆ ಶಿಕ್ಷಣ ಇಲಾಖೆ ತೀರ್ಮಾನ

ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳನ್ನು ಪ್ರಾರಂಭಿಸಬೇಕೆನ್ನುವ ಪೋಷಕರ ಬಹುಕಾಲದ ಒತ್ತಾಯ ಕಡೆಗೂ ಪೂರ್ಣಗೊಳ್ಳುತ್ತಿದೆ.

ಬೆಂಗಳೂರು: ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳನ್ನು ಪ್ರಾರಂಭಿಸಬೇಕೆನ್ನುವ ಪೋಷಕರ ಬಹುಕಾಲದ ಒತ್ತಾಯ ಕಡೆಗೂ ಪೂರ್ಣಗೊಳ್ಳುತ್ತಿದೆ. ರಾಜ್ಯದ ಪ್ರಾಥಮಿಕ ಮತ್ತು ಮಾಧ್ಯಮಿಕ ಶಿಕ್ಷಣ ಇಲಾಖೆ ರಾಜ್ಯ ಸರ್ಕಾರಿ ಶಾಲೆಗಳಲ್ಲಿ ಒಟ್ಟು 101 ಪೂರ್ವ ಪ್ರಾಥಮಿಕ ತರಗತಿಗಳನ್ನು ತೆರೆಯಲು ನಿರ್ಧರಿಸಿದೆ.
ಇದೇ ವರ್ಷ ರಾಜ್ಯದ 13 ಶೈಕ್ಷಣಿಕ ಜಿಲ್ಲೆಗಳ 101 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಎಲ್ ಕೆಜಿ, ಯುಕೆಜಿ ಸೇರಿದಂತೆ  ಪೂರ್ವ ಪ್ರಾಥಮಿಕ ತರಗತಿಗಳನ್ನು ಪರಿಚಯಿಸಲಾಗುತ್ತದೆ.
"ಸರ್ಕಾರಿ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳನ್ನು ತೆರೆದರೆ ಒಂದನೇ ತರಗತಿಗೆ ಸರ್ಕಾರಿ ಶಾಲೆಗೆ ಸೇರುವ ಮಕ್ಕಳ ಸಂಖ್ಯೆಯನ್ನು ಹೆಚ್ಚಿಸಬಹುದು ಎನ್ನುವುದು ನಮ್ಮ ನಿರೀಕ್ಷೆಯಾಗಿದೆ" ಪ್ರಾಥಮಿಕ ಮತ್ತು ಮಾಧ್ಯಮಿಕ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಶಾಲಿನಿ ರಜನೀಶ್ ಹೇಳಿದ್ದಾರೆ.
"ಪೂರ್ವ-ಪ್ರಾಥಮಿಕ ತರಗತಿಗಳಿಗೆ ಭಾರೀ ಬೇಡಿಕೆಯಿದೆ. ಹಲವಾರು ಶಾಲಾ ಅಭಿವೃದ್ಧಿ ಮತ್ತು ಮೇಲ್ವಿಚಾರಣಾ ಸಮಿತಿಗಳು ಮತ್ತು ಶಿಕ್ಷಕರ ಸಂಘಗಳು ಈ ಸಂಬಂಧ ಬೇಡಿಕೆ ಇಟ್ಟಿದೆ.ಇವರುಗಳು ತಾವು ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಕರ ವೆಚ್ಚ ಭರಿಸುವ ಭರವಸೆಯನ್ನೂ ಸಹ ನಿಡಿದ್ದಾರೆ. ಇದೀಗ ಪೂರ್ವ ಪ್ರಾಥಮಿಕ ತರಗತಿಗೆ ಪಠ್ಯಕ್ರಮ ಸಹ ಸಿದ್ದವಾಗಿದೆ. ರಾಜ್ಯದಲ್ಲಿ ತೆರೆಯಲಾಗುವ 101 ಶಾಲಾ ತರಗತಿಗಳಿಗೆ ಒಂದು ಶಾಲೆಗೆ ಒಬ್ಬರಂತೆ ಶಿಕ್ಷಕರ ನೇಮಕ ಮಾಡಲಾಗುತ್ತದೆ" ಅವರು ವಿವರಿಸಿದರು.
ಸರ್ಕಾರಿ ಶಾಲೆ ಸಮೀಪದಲ್ಲಿರುವ ಅಂಗನವಾಡಿಗಳನ್ನು ಇದರಲ್ಲಿ ವಿಲೀನಗೊಳಿಸಲು ಸರ್ಕಾರ ನಿರ್ಧರಿಸಿದೆ ಎಂದ ನಿರ್ದೇಶಕಿ ಶಾಲಿನಿ ರಜನೀಶ್ "ನಾವು ಈಗಾಗಲೇ 5,000 ಕ್ಕಿಂತ ಹೆಚ್ಚು ಅಂಗನವಾಡಿಗಳನ್ನು ಗುರುತಿಸಿದ್ದೇವೆ, ಅದನ್ನು ಪ್ರಾಥಮಿಕ ಶಾಲೆಗಳೊಂದಿಗೆ ಸಂಯೋಜಿಸಲು ನಿರ್ಧರಿಸಲಾಗುವುದು" ಎಂದು ಹೇಳಿದರು

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

SCROLL FOR NEXT