ಶಂಕಿತ ಆರೋಪಿಗಳ ಚಿತ್ರ 
ರಾಜ್ಯ

ಗೌರಿ ಲಂಕೇಶ್ ಹತ್ಯೆ ಪ್ರಕರಣ: ಶಂಕಿತರ ಎಸ್ ಐಟಿ ಕಸ್ಟಡಿ ಅವಧಿ ವಿಸ್ತರಣೆ

ಪತ್ರಕರ್ತೆ ಹಾಗೂ ಸಾಮಾಜಿಕ ಹೋರಾಟಗಾರ್ತಿ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಬಂಧಿತ ಆರೋಪಿ ಸುಜಿತ್ ಕುಮಾರ್ ಹಾಗೂ ಮೂವರು ಶಂಕಿತ ಆರೋಪಿಗಳ ಎಸ್ ಐಟಿ ಕಸ್ಟಡಿ ಅವಧಿಯನ್ನು ನಾಲ್ಕು ದಿನಗಳ ಕಾಲ ವಿಸ್ತರಿಸಿ ಮೂರನೇ ಎಸಿಎಂಎಂ ನ್ಯಾಯಾಲಯ ತೀರ್ಪು ನೀಡಿದೆ.

ಬೆಂಗಳೂರು: ಪತ್ರಕರ್ತೆ ಹಾಗೂ ಸಾಮಾಜಿಕ ಹೋರಾಟಗಾರ್ತಿ  ಗೌರಿ ಲಂಕೇಶ್  ಹತ್ಯೆ ಪ್ರಕರಣದ  ಬಂಧಿತ ಆರೋಪಿ  ಸುಜಿತ್ ಕುಮಾರ್  ಹಾಗೂ  ಮೂವರು ಶಂಕಿತ  ಆರೋಪಿಗಳ  ಎಸ್ ಐಟಿ ಕಸ್ಟಡಿ ಅವಧಿಯನ್ನು  ನಾಲ್ಕು  ದಿನಗಳ ಕಾಲ ವಿಸ್ತರಿಸಿ  ಮೂರನೇ  ಎಸಿಎಂಎಂ ನ್ಯಾಯಾಲಯ ತೀರ್ಪು ನೀಡಿದೆ.
ಈ ಪ್ರಕರಣದ ಪ್ರಮುಖ ಆರೋಪಿ  ಸುಜಿತ್ ಕುಮಾರ್  ಆಲಿಯಾಸ್ ಪ್ರವೀಣ್,  ಹಾಗೂ ಶಂಕಿತರಾದ ಅಮೊಲ್ ಕಾಳೆ,  ಅಮಿತ್ ದಿವಾಕರ್  ,  ಮನೋಹರ್ ದುಂಡಾಪ್ಪ ಯಾದವ್  ಅವರ ಎಸ್ ಐಟಿ ವಿಚಾರಣಾ ಅವಧಿ ನಿನ್ನೆಗೆ ಅಂತ್ಯಗೊಂಡಿತ್ತು. ಇದರಿಂದಾಗಿ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು.
ವಿಶೇಷ ತನಿಖಾ ದಳ  ಶಂಕಿತರಿದ್ದ ಸ್ಥಳಕ್ಕೆ ಭೇಟಿ ನೀಡಿದ್ದಾಗ ಅವರು ಶೂಟಿಂಗ್ ತರಬೇತಿ ಪಡೆಯುತ್ತಿದ್ದರು. ಬಂಧಿತ ಸುಜಿತ್ ಕುಮಾರ್ ಹಾಗೂ ಶಂಕಿತರ ಪೊಲೀಸ್ ಕಸ್ಟಡಿ ಅವಧಿಯನ್ನು  ನಾಲ್ಕು ದಿನಗಳ ಕಾಲ ವಿಸ್ತರಿಸಬೇಕೆಂದು  ಸಹಾಯಕ ಪಬ್ಲಿಕ್ ಪ್ರಾಸಿಕ್ಯೂಟರ್  ನಿರ್ಮಲಾ ರಾಣಿ  ನ್ಯಾಯಾಲಯದ ಬಳಿ ಮನವಿ ಮಾಡಿಕೊಂಡರು.
ಆದರೆ, ಈ ವಾದಕ್ಕೆ ತೀವ್ರ  ಆಕ್ಷೇಪ ವ್ಯಕ್ತಪಡಿಸಿದ ವಕೀಲ ಎನ್. ಪಿ. ಅಮೃತೇಶ್,  ಆರೋಪಿಗಳನ್ನು ಕಾನೂನುಬಾಹಿರವಾಗಿ  ಬಂಧಿಸಲಾಗಿದೆ.  ವಿಚಾರಣೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದೆ. ಆದರೆ, ಅವರನ್ನು ಬೇರೆ ಪ್ರಕರಣಗಳಲ್ಲಿ ತೋರಿಸಲಾಗುತ್ತಿದೆ. ಗರಿಷ್ಠ ವಿಚಾರಣಾ ಅವಧಿ ಈಗಾಗಲೇ ಮುಗಿದಿದೆ ಎಂದರು.
 ಆರೋಪಿಗಳು  ಬಂದೂಕು ತರಬೇತಿ ಪಡೆಯುತ್ತಿದ್ದ  ಬೆಳಗಾವಿ ಹಾಗೂ ಮೈಸೂರಿಗೆ  ಕರೆದುಕೊಂಡು ಹೋಗಬೇಕಿದೆ ಎಂದು ಪಾಸಿಕ್ಯೂಸನ್  ನ್ಯಾಯಾಲಕ್ಕೆ ಮನವಿ ಮಾಡಿಕೊಂಡರು. ಈ ಪ್ರಕರಣದ ತನಿಖಾ ವರದಿ ಹಾಗೂ  ತಪಿತಸ್ಥನ ಹೇಳಿಕೆಯನ್ನು ಎಸ್ ಐಟಿ  ಮುಚ್ಚಿದ ಲಕೋಟೆಯಲ್ಲಿ ನ್ಯಾಯಾಲಯಕ್ಕೆ ಸಲ್ಲಿಸಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT