ಕೆ.ಆರ್ ನಗರ ತಾಲೂಕಿನಲ್ಲಿ ತುಂಬಿ ಹರಿಯುತ್ತಿರುವ ಕಾವೇರಿ ನದಿ 
ರಾಜ್ಯ

ಕಬಿನಿ ಜಲಾಶಯದಿಂದ ತಮಿಳುನಾಡಿಗೆ 15,000 ಕ್ಯೂಸೆಕ್ಸ್ ನೀರು ಬಿಡುಗಡೆ ಮಾಡಿದ ಸರ್ಕಾರ

ಕಬಿನಿ ಜಲಾಶಯದಿಂದ ತಮಿಳುನಾಡು ರಾಜ್ಯಕ್ಕೆ 15,000 ಕ್ಯೂಸೆಕ್ಸ್ ನೀರನ್ನು ರಾಜ್ಯ ನೀರಾವರಿ ಇಲಾಖೆ ಗುರುವಾರ ಬಿಡುಗಡೆ ಮಾಡಿದೆ ಎಂದು ತಿಳಿದುಬಂದಿದೆ...

ಮೈಸೂರು; ಕಬಿನಿ ಜಲಾಶಯದಿಂದ ತಮಿಳುನಾಡು ರಾಜ್ಯಕ್ಕೆ 15,000 ಕ್ಯೂಸೆಕ್ಸ್ ನೀರನ್ನು ರಾಜ್ಯ ನೀರಾವರಿ ಇಲಾಖೆ ಗುರುವಾರ ಬಿಡುಗಡೆ ಮಾಡಿದೆ ಎಂದು ತಿಳಿದುಬಂದಿದೆ. 
ಮೈಸೂರು ಜಿಲ್ಲೆಯಲ್ಲಿ ಕೆಲ ದಿನಗಳಿಂದ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು, ಇದರ ಪರಿಣಾಮ ಕಬಿನಿ ಜಲಾಶಯದ ಒಳ ಹರಿವು ಹೆಚ್ಚಾಗಿದೆ. ಜಲಾಶಯದ ಒಳ ಹರಿವು 30,000 ಕ್ಯೂಸೆಕ್ಸ್ ಆಘಿದೆ. ಜಲಾಶಯ ಪ್ರದೇಶದಲ್ಲಿ ಹೆಚ್ಚಾಗಿ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ 2,284 ಅಡಿ ನೀರಿನ ಸಂಗ್ರಹ ಸಾಮರ್ಥ್ಯವನ್ನು ಹೊಂದಿರುವ ಕಬಿನಿ ಅಣೆಕಟ್ಟಿನಲ್ಲಿ ಈಗಾಗಲೇ 2,280 ಅಡಿ ನೀರು ಸಂಗ್ರಹವಾಗಿದೆ. 
ಹೊರ ಹರಿವು ಗರಿಷ್ಟ ಮಟ್ಟ ತಲುಪಲು ಇನ್ನು ಕೇವಲ 4 ಸಾವಿರ ಕ್ಯೂಸೆಕ್ಸ್ ಇದ್ದು, ಈ ಹಿನ್ನಲೆಯಲ್ಲಿ ಕಬಿನಿ ಜಲಾಶಯದಿಂದ ತಮಿಳುನಾಡು ರಾಜ್ಯಕ್ಕೆ 15,000 ಕ್ಯೂಸೆಕ್ಸ್ ನೀರನ್ನು ನೀರಾವರಿ ಇಲಾಖೆ ಬಿಡುಗಡೆ ಮಾಡಿದೆ ಎಂದು ವರದಿಗಳು ತಿಳಿಸಿವೆ.
ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲೂಕಿನಲ್ಲಿರುವ ಕಬಿನಿ ಜಲಾಶಯದಿಂದ ನೀರನ್ನು ಬಿಡುಗಡೆ ಮಾಡಲಾಗಿದೆ. ರಾಜ್ಯದಲ್ಲಿ ಈ ಬಾರಿ ಮುಂಗಾರು ಮಳೆಯ ಅಬ್ಬರ ಜೋರಾಗಿಯೇ ಇದ್ದು ಜಲಾಶಯಗಳು ತುಂಬಿ ಹರಿಯುತ್ತಿವೆ. ಈ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಹಿ ಇಲಾಖೆ ಹೆಚ್ಚುವರಿ ನೀರನ್ನು ನದಿಗಳಿಗೆ ಬಿಡುಗಡೆ ಮಾಡುತ್ತಿದೆ ಎಂದು ಹೇಳಲಾಗುತ್ತಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

ಮನೆ ಮುಂದೆ ನಿಲ್ಲಿಸೋ ವಾಹನಗಳಿಗೆ ಪಾರ್ಕಿಂಗ್ ಶುಲ್ಕಕ್ಕೆ ರಾಮಲಿಂಗಾರೆಡ್ಡಿ ತೀವ್ರ ಆಕ್ಷೇಪ; CM ಡಿಕೆಶಿಗೆ ಪತ್ರ

'30 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ,ಇನ್ನು ಸಾಧ್ಯವಿಲ್ಲ': ನಿವೃತ್ತಿಯ ಸುಳಿವು ನೀಡಿದ ಕೇಂದ್ರ ಸಚಿವ ನಿತಿನ್ ಗಡ್ಕರಿ; ಹೊಸ ಪೀಳಿಗೆಗೆ ದಾರಿ ಮಾಡಿಕೊಡುವ ಇಂಗಿತ!