ಸಾಂದರ್ಭಿಕ ಚಿತ್ರ 
ರಾಜ್ಯ

ವೈದ್ಯಕೀಯ ಶಿಕ್ಷಣ ಇಲಾಖೆ ಆಸ್ಪತ್ರೆಗಳಲ್ಲಿ ಸಿಸಿಟಿವಿ ಕ್ಯಾಮರಾ ಅಳವಡಿಕೆಗೆ ಸೂಚನೆ

ರಾಜ್ಯ ವೈದ್ಯಕೀಯ ಶಿಕ್ಷಣ ಇಲಾಖೆಯ ಅಧೀನದಲ್ಲಿ ಬರುವ ಸರ್ಕಾರಿ ಆಸ್ಪತ್ರೆಗಳಲಲಿ ಸಿಸಿಟಿವಿ ...

ಬೆಂಗಳೂರು: ರಾಜ್ಯ ವೈದ್ಯಕೀಯ ಶಿಕ್ಷಣ ಇಲಾಖೆಯ ಅಧೀನದಲ್ಲಿ ಬರುವ ಸರ್ಕಾರಿ ಆಸ್ಪತ್ರೆಗಳಲಲಿ ಸಿಸಿಟಿವಿ ಕ್ಯಾಮರಾಗಳು, ಸಿಬ್ಬಂದಿಗೆ ಬಯೋ ಮೆಟ್ರಿಕ್ ಹಾಜರಿ ವ್ಯವಸ್ಥೆ ಮತ್ತು ರೋಗಿಗಳ ದಾಖಲಾತಿ ಕೌಂಟರ್ ನ್ನು ಇನ್ನು 75 ದಿನಗಳೊಳಗೆ ಅಳವಡಿಸಬೇಕೆಂದು ನಿರ್ದೇಶಿಸಲಾಗಿದೆ.

ರೋಗಿಗಳು ಮತ್ತು ಅವರ ಪಾಲಕರಿಂದ ಬರುತ್ತಿರುವ ದೂರುಗಳನ್ನು ಆಧರಿಸಿ ಈ ಕ್ರಮಕ್ಕೆ ಮುಂದಾಗಿವೆ. ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರು ಮತ್ತು ಸಿಬ್ಬಂದಿ ಸಮಯಕ್ಕೆ ಸರಿಯಾಗಿ ಬರುವುದಿಲ್ಲ ಎಂಬ ಆರೋಪದ ಹಿನ್ನೆಲೆಯಲ್ಲಿ ರಾಜ್ಯ ವೈದ್ಯಕೀಯ ಶಿಕ್ಷಣ ಸಚಿವ ಡಿ ಕೆ ಶಿವಕುಮಾರ್ ಇಲಾಖೆಯ ಅಧಿಕಾರಿಗಳಿಗೆ ಆದೇಶ ನೀಡಿ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.

ಇತ್ತೀಚೆಗೆ ಬೆಂಗಳೂರಿನ ಸರ್ಕಾರಿ ಆಸ್ಪತ್ರೆಗೆ ವೈದ್ಯಕೀಯ ಶಿಕ್ಷಣ ಸಚಿವರು ಭೇಟಿ ನೀಡಿದ್ದ ಸಂದರ್ಭದಲ್ಲಿ ತಮ್ಮ ನಿಗದಿತ ಸಮಯಕ್ಕಿಂತ ಒಂದು ಗಂಟೆ ಕಳೆದರೂ ಕೂಡ ಹಲವು ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾಗಿರಲಿಲ್ಲ. ಭೇಟಿ ನಂತರ ಸುದ್ದಿಗಾರರ ಜೊತೆ ಮಾತನಾಡಿದ್ದ ಸಚಿವ ಡಿಕೆಶಿ.ಸಮಯಕ್ಕೆ ಸರಿಯಾಗಿ ವೈದ್ಯರು ಮತ್ತು ಸಿಬ್ಬಂದಿ ಆಸ್ಪತ್ರೆಯಲ್ಲಿರುವುದು ಮುಖ್ಯವಾಗುತ್ತದೆ.

ಸಿಬ್ಬಂದಿಗಳು ಆಸ್ಪತ್ರೆಯಲ್ಲಿ ಇಲ್ಲದಿದ್ದರೆ ರೋಗಿಗಳಿಗೆ ಚಿಕಿತ್ಸೆ ಪಡೆಯಲು, ಆಸ್ಪತ್ರೆಗೆ ದಾಖಲಾಗಲು ಅನನುಕೂಲವಾಗುತ್ತದೆ. ಇದಕ್ಕಾಗಿ ಸಿಬ್ಬಂದಿ ಮತ್ತು ವೈದ್ಯರ ಮೇಲೆ ನಿಗಾವಹಿಸಲು ಬಯೋಮೆಟ್ರಿಕ್ ಹಾಜರಿ ವ್ಯವಸ್ಥೆ, ಸಿಸಿಟಿವಿ ಕ್ಯಾಮರಾಗಳನ್ನು ಅಳವಡಿಸಲು ಆದೇಶ ನೀಡಿದ್ದೇನೆ ಎಂದು ಹೇಳಿದ್ದರು.

ಆದರೆ ಆಸ್ಪತ್ರೆಯ ಅಧಿಕಾರಿಗಳು ಹೇಳುವ ಪ್ರಕಾರ ಸಿಸಿಟಿವಿ ಕ್ಯಾಮರಾ ವ್ಯವಸ್ಥೆ ಮತ್ತು ಬಯೋಮೆಟ್ರಿಕ್ ಈಗಾಗಲೇ ಇದ್ದು ಅವುಗಳ ನಿಗಾವಹಿಸುವಿಕೆಯಲ್ಲಿ ಕೊರತೆಯಿದೆ. ಕೆಲವು ಆಸ್ಪತ್ರೆಗಳಲ್ಲಿ ಸಿಸಿಟಿವಿ ಕ್ಯಾಮರಾ ಮತ್ತು ಬಯೋಮೆಟ್ರಿಕ್ ವ್ಯವಸ್ಥೆ ಕೆಟ್ಟುಹೋಗಿದೆ. ಆದರೆ ಎಲ್ಲಾ ವೈದ್ಯಕೀಯ ಕಾಲೇಜು ಆಸ್ಪತ್ರೆಗಳಲ್ಲಿ ಈ ವ್ಯವಸ್ಥೆಗಳಿವೆ. ಅವುಗಳ ಸರಿಯಾದ ನಿರ್ವಹಣೆಯಾಗಬೇಕಷ್ಟೆ ಎಂದು ಇಲಾಖೆಯ ಹಿರಿಯ ಅಧಿಕಾರಿಗಳು ಹೇಳುತ್ತಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಂದಿಕೊಳ್ಳಲು ಸಾಧ್ಯವಿಲ್ಲ ಎಂದು ಯಾರು ಹೇಳಿದ್ದು?': ಅಮೆರಿಕ ವ್ಯಾಪಾರ ಒಪ್ಪಂದದ ಅನಿಶ್ಚಿತತೆ ನಡುವೆಯೇ ಹೊಸ ಮಾರುಕಟ್ಟೆಗಳತ್ತ ಭಾರತ ಕಣ್ಣು!

ಯುವನಿಧಿಗೆ ನಿರುದ್ಯೋಗಿ ವಿದ್ಯಾರ್ಥಿಗಳ ನೋಂದಣಿ ನೋಡ್ತಿದ್ದರೆ ಆತಂಕಕಾರಿ, ಶಿಕ್ಷಣದಲ್ಲಿ ಬದಲಾವಣೆ ಅಗತ್ಯ: ವಿಟಿಯು ಉಪಕುಲಪತಿ

ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ, ವಿಡಿಯೋ ಹರಿಬಿಟ್ಟ ಆರೋಪಿಗಳು: ಹುಬ್ಬಳ್ಳಿ ಪೊಲೀಸರಿಂದ ಮೂವರ ಬಂಧನ!

ದಾವಣಗೆರೆ: ಮಕ್ಕಳ ಹಾದಿ ಹಿಡಿದ ಬಿಜೆಪಿ ಮುಖಂಡ; ಕಾರಿನಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ

ಕರ್ನಾಟಕದ ಮುಕುಟಕ್ಕೆ ಮತ್ತೊಂದು ಗರಿ: ಬೆಂಗಳೂರು ಮೂಲದ ಮೇಜರ್ Swathi ShanthaKumarಗೆ ವಿಶ್ವಸಂಸ್ಥೆ ಸೆಕ್ರೆಟರಿ ಜನರಲ್ ಪ್ರಶಸ್ತಿ!

SCROLL FOR NEXT