ಸಾಂದರ್ಭಿಕ ಚಿತ್ರ 
ರಾಜ್ಯ

ಮುಂದಿನ 2 ವರ್ಷಗಳಲ್ಲಿ ಬೆಂಗಳೂರಿನ ಅಂತರ್ಜಲ ಖಾಲಿ: ನೀತಿ ಆಯೋಗ ಎಚ್ಚರಿಕೆ

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ 2020 ವೇಳಗೆ ಅಂತರ್ಜಲ ಖಾಲಿಯಾಗಲಿದೆ ಎಂದು ನೀತಿ ಆಯೋಗದ ವರದಿ ಎಚ್ಚರಿಸಿದೆ.

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ 2020 ವೇಳಗೆ ಅಂತರ್ಜಲ ಖಾಲಿಯಾಗಲಿದೆ ಎಂದು ನೀತಿ ಆಯೋಗದ ವರದಿ ಎಚ್ಚರಿಸಿದೆ. 
ನೀತಿ ಆಯೋಗ ಸಂಯೋಜಿತ ನೀರಿನ ನಿರ್ವಹಣೆ ಸೂಚ್ಯಂಕದಡಿ ಕರ್ನಾಟಕವನ್ನು ದೇಶದ ಪ್ರಮುಖ 5 ರಾಜ್ಯಗಳ ಪಟ್ಟಿಯಲ್ಲಿ ಸೇರಿಸಿದ್ದರೂ ಸಹ ಬೆಂಗಳೂರಿನಲ್ಲಿ ಮಾತ್ರ ಅಂತರ್ಜಲ ಖಾಲಿಯಾಗಲಿದೆ ಎಂದು ಎಚ್ಚರಿಕೆ ನೀಡಿದೆ. 
ಅಂತರ್ಜಲ ಸಂಪನ್ಮೂಲಗಳ ವೃದ್ಧಿಯಲ್ಲಿ ಬಹುತೇಕ ರಾಜ್ಯಗಳು ಶೇ. 50ಕ್ಕಿಂತ ಕಡಿಮೆ ಅಂಕಗಳನ್ನು ಪಡೆದುಕೊಂಡಿವೆ. ಜತೆಗೆ, ದೇಶದ ಶೇ. 54 ರಷ್ಟು ಅಂತರ್ಜಲ ಬಾವಿಗಳಲ್ಲಿ ಅಂತರ್ಜಲದ ಕೊರತೆಯಾಗ್ತಿದ್ದು, ದೇಶದ 21 ದೊಡ್ಡ ನಗರಗಳಲ್ಲಿ 2020ರಲ್ಲಿ ಅಂತರ್ಜಲ ಖಾಲಿಯಾಗುವ ಸಾಧ್ಯತೆಯಿದೆ. ಇದರಿಂದ 10 ಕೋಟಿ ಜನತೆಗೆ ತೊಂದರೆಯಾಗಲಿದೆ ಎಂದು ನೀತಿ ಆಯೋಗದ ಸಂಯೋಜಿತ ನೀರಿನ ನಿರ್ವಹಣೆ ಸೂಚ್ಯಂಕ ವರದಿ ನೀಡಿದೆ.
ಇನ್ನು, ಅಂತರ್ಜಲದ ಶೋಷಣೆ ಮತ್ತಷ್ಟು ಮುಂದುವರಿದರೆ, ಈ ಮುನ್ಸೂಚನೆ ಶೀಘ್ರದಲ್ಲೇ ನಿಜವಾಗಲಿದೆ. ಬರಗಾಲ ಹಾಗೂ ಪ್ರವಾಹ ಇತ್ತೀಚೆಗೆ ಸಾಮಾನ್ಯವಾಗಿಬಿಟ್ಟಿದ್ದರೂ ಸಹ ಜನತೆ ಈ ಬಗ್ಗೆ ಯಾಕೆ ಅರ್ಥ ಮಾಡಿಕೊಳ್ಳಲು ಮುಂದಾಗುತ್ತಿಲ್ಲ ಎಂದು ಕೇಂದ್ರ ಅಂತರ್ಜಲ ಪ್ರಾಧಿಕಾರದ ಮಾಜಿ ಸದಸ್ಯ ಕಾರ್ಯದರ್ಶಿ ನಜೀಬ್ ಕೆ ಮೊಹಮದ್ ಬೇಸರ ವ್ಯಕ್ತಪಡಿಸಿದ್ದಾರೆ. 
ಬೆಂಗಳೂರು ಕಾಂಕ್ರೀಟ್ ಕಾಡಾಗಿ ಬದಲಾಗಿದೆ. ಇಲ್ಲಿ ಮಳೆಯ ನೀರು ಭೂಮಿಯೊಳಗೆ ಹಿಂಗಿ ಹೋಗುತ್ತಿಲ್ಲ. ಹೀಗಾಗಿ ಅಂತರ್ಜಲ ಭರ್ತಿಯಾಗುತ್ತಿಲ್ಲ. ಈ ಬಗ್ಗೆ ಜನಪ್ರತಿನಿಧಿಗಳು ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕಿದೆ. ನಾಗರಿಕರಲ್ಲಿ ತಿಳುವಳಿಕೆ ಇದ್ದರೂ, ನೀರನ್ನು ಪುನರ್ ಬಳಕೆ ಮಾಡುವ ಬಗ್ಗೆ ಹೆಚ್ಚು ಮಾಹಿತಿ ಇಲ್ಲ. ಬೆಂಗಳೂರಿನಲ್ಲಿರುವ ಕೆರೆಗಳನ್ನು ಉಳಿಸಿಕೊಳ್ಳಲು, ಮಳೆನೀರು ಕೊಯ್ಲು ವ್ಯವಸ್ಥೆಯ ಮೂಲಕ ಅಂತರ್ಜಲ ಭರ್ತಿ ಮಾಡುವ ಬಗ್ಗೆ ಹಾಗೂ ತ್ಯಾಜ್ಯ ನೀರನ್ನು ಗರಿಷ್ಠ ಸಾಮರ್ಥ್ಯದಲ್ಲಿ ಮರುಬಳಕೆ ಮಾಡಲು ಬೃಹತ್ ಚಳುವಳಿ ನಡೆಯಬೇಕಿದೆ ಎಂದು ನಜೀಬ್ ಕೆ ಮೊಹಮದ್ ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕಲಬುರಗಿ: ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ಶಾಂತಿ ಮಾತುಕತೆ ನಡೆಯುತ್ತಿರುವಾಗಲೇ ಉಕ್ರೇನ್‌ ಮೇಲೆ ರಷ್ಯಾ ದಾಳಿ; ಕನಿಷ್ಠ ಏಳು ಜನ ಸಾವು

Punishment: 5 ವರ್ಷದ ಬಾಲಕನನ್ನು ಮರಕ್ಕೆ ನೇತು ಹಾಕಿದ ಶಿಕ್ಷಕಿ!

ವಿಶ್ವಕಪ್ ವಿಜೇತ ಕರ್ನಾಟಕದ ಅಂಧ ಕ್ರಿಕೆಟ್ ಆಟಗಾರ್ತಿಯರಿಗೆ ತಲಾ 10 ಲಕ್ಷ ರೂ ನಗದು, ಸರ್ಕಾರಿ ಉದ್ಯೋಗ: ಸಿಎಂ ಸಿದ್ದರಾಮಯ್ಯ ಘೋಷಣೆ

SCROLL FOR NEXT