ಸಾಂದರ್ಭಿಕ ಚಿತ್ರ 
ರಾಜ್ಯ

ಆಡಳಿತ ತರಬೇತಿ ಸಂಸ್ಥೆಯಲ್ಲಿ ಕಡ್ಡಾಯವಾಗಿ ಕನ್ನಡ ಬಳಸಬೇಕು: ಕನ್ನಡ ಅಭಿವೃದ್ಧಿ ಪ್ರಾಧಿಕಾರ

ರಾಜ್ಯದ ಬ್ಯಾಂಕುಗಳು, ಸಾರ್ವಜನಿಕ ವಲಯ ಉದ್ದಿಮೆಗಳು, ಕೇಂದ್ರ ಸರ್ಕಾರಿ ಕಚೇರಿಗಳಲ್ಲಿ ಕನ್ನಡ ...

ಬೆಂಗಳೂರು: ರಾಜ್ಯದ ಬ್ಯಾಂಕುಗಳು, ಸಾರ್ವಜನಿಕ ವಲಯ ಉದ್ದಿಮೆಗಳು, ಕೇಂದ್ರ ಸರ್ಕಾರಿ ಕಚೇರಿಗಳಲ್ಲಿ ಕನ್ನಡ ಭಾಷೆಯನ್ನು ಕಡ್ಡಾಯವಾಗಿ ಅಳವಡಿಸಿಕೊಳ್ಳಬೇಕೆಂದು ಒತ್ತಾಯಿಸುತ್ತಿರುವ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಕನ್ನಡ ಭಾಷೆ ಗೊತ್ತಿಲ್ಲದಿರುವ ಅಧಿಕಾರಿಗಳಿಗೆ ತರಬೇತಿ ನೀಡುವಂತೆ ಆಡಳಿತಾತ್ಮಕ ತರಬೇತಿ ಸಂಸ್ಥೆಯನ್ನು (ಎಟಿಐ) ಕೇಳಿದೆ.

ಮೈಸೂರಿನಲ್ಲಿರುವ ಆಡಳಿತಾತ್ಮಕ ತರಬೇತಿ ಸಂಸ್ಥೆ ರಾಜ್ಯ ಸರ್ಕಾರದ ಅಧೀನದಲ್ಲಿರುವ ತರಬೇತಿ ನೀಡುವ ಸಂಸ್ಥೆಯಾಗಿದ್ದು, ರಾಜ್ಯ ನಾಗರಿಕ ಸೇವೆಗಳು ಮತ್ತು ಸಂಶೋಧಕ ಕೋರ್ಸ್ ಗಳ ಹಿರಿಯ ಅಧಿಕಾರಿಗಳಿಗೆ ಮೂಲ ಕೋರ್ಸ್ ಗಳನ್ನು ನಡೆಸುತ್ತದೆ. ಹಣಕಾಸು ನಿರ್ವಹಣೆಯಿಂದ ಹಿಡಿದು ಕಾನೂನು ಸೇವೆಗಳವರೆಗೆ ಹಲವು ಕೋರ್ಸ್ ಗಳನ್ನು ನಿಗದಿತ ಆಧಾರದ ಮೇಲೆ ನಡೆಸಲಾಗುತ್ತದೆ. ಕರ್ನಾಟಕ ಕ್ಯಾಡರ್ ಗೆ ಬೇರೆ ರಾಜ್ಯಗಳಿಂದ ಸೇರ್ಪಡೆಯಾದ ಐಎಎಸ್, ಐಪಿಎಸ್ ಮತ್ತು ಐಎಫ್ ಎಸ್ ಅಧಿಕಾರಿಗಳು ಇಲ್ಲಿ ಆರಂಭದಲ್ಲಿ 4 ತಿಂಗಳ ಕನ್ನಡ ಕ್ರಾಶ್ ಕೋರ್ಸ್ ನಲ್ಲಿ ಭಾಗವಹಿಸುತ್ತಾರೆ.

ಪ್ರಸ್ತುತ ಎಲ್ಲಾ ತರಬೇತಿಗಳನ್ನು ಇಂಗ್ಲಿಷ್ ನಲ್ಲಿ ನೀಡಲಾಗುತ್ತದೆ. ನಾವು ಇಂಗ್ಲಿಷ್ ಭಾಷೆಯ ವಿರೋಧಿಗಳಲ್ಲ. ಕರ್ನಾಟಕದಲ್ಲಿ ಕನ್ನಡಕ್ಕೆ ಮೊದಲ ಆದ್ಯತೆ ನೀಡಬೇಕು. ಐಎಎಸ್, ಐಪಿಎಸ್ ಹಂತದ ಅಧಿಕಾರಿಗಳಿಗೆ ಇಂಗ್ಲಿಷ್ ನಲ್ಲಿ ತರಬೇತಿ ನೀಡಿದರೆ ಒಪ್ಪಿಕೊಳ್ಳೋಣ. ಆದರೆ ನಮ್ಮ ರಾಜ್ಯದ ನೌಕರರಿಗೆ ಸಹ ಇಂಗ್ಲಿಷ್ ನಲ್ಲಿ ತರಬೇತಿ ನೀಡುತ್ತಾರೆ. ಕೆಲ ದಿನಗಳ ಹಿಂದೆ ಎಟಿಐ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಸಂಸ್ಥೆಯಲ್ಲಿ ಹೆಚ್ಚೆಚ್ಚು ಕನ್ನಡ ಭಾಷೆ ಪ್ರಯೋಗವನ್ನು ಬಳಕೆ ಮಾಡುವಂತೆ ಒತ್ತಾಯಿಸಿದ್ದೇವೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಸ್ ಜಿ ಸಿದ್ದರಾಮಯ್ಯ ಹೇಳಿದ್ದಾರೆ.

ರಾಜ್ಯದ ಹಲವು ಮೊದಲ ದರ್ಜೆಯ ಸಹಾಯಕರು ಮತ್ತು ದ್ವಿತೀಯ ದರ್ಜೆ ಸಹಾಯಕರಿಗೆ ಇಲ್ಲಿ ತರಬೇತಿ ನೀಡಲಾಗುತ್ತದೆ. ಅವರಿಗೆ ಸಹ ತರಬೇತಿ ಸೇರಿದಂತೆ ಪರಿಕರಣಗಳನ್ನು ಇಂಗ್ಲಿಷ್ ನಲ್ಲಿ ನೀಡುತ್ತಾರೆ. ಇಲ್ಲಿ ತರಬೇತಿ ಗಳಿಸಿದ ಅಧಿಕಾರಿಗಳು ತಾಲ್ಲೂಕು ಮತ್ತು ಪಂಚಾಯತ್ ಮಟ್ಟದಲ್ಲಿ ಕೆಲಸ ಮಾಡುತ್ತಾರೆ. ಅವರಿಗೆ ಇಂಗ್ಲಿಷ್ ಹೇಗೆ ಸಹಾಯಕ್ಕೆ ಬರುತ್ತದೆ? ಹೀಗಾಗಿ ರಾಜ್ಯದಲ್ಲಿರುವ ಕೇಂದ್ರ ಮತ್ತು ರಾಜ್ಯ ಸರ್ಕಾರಿ ನೌಕರರಿಗೆ ಕಡ್ಡಾಯವಾಗಿ ಇಂಗ್ಲಿಷ್ ನ್ನು ಹೇಳಿಕೊಡಬೇಕು ಎಂದು ನಾವು ಒತ್ತಾಯಿಸುತ್ತೇವೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯದಲ್ಲಿ ಸಿಎಂ ಗದ್ದುಗೆ ಗುದ್ದಾಟ: ಎಲ್ಲ ಗೊಂದಲಗಳಿಗೆ ಹೈಕಮಾಂಡ್ ತೆರೆ ಎಳೆಯಬೇಕು- ಸಿಎಂ ಸಿದ್ದರಾಮಯ್ಯ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಪರಸ್ತ್ರೀ ಮೋಹ, ನಂಬಿಕೆ ದ್ರೋಹ: ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಇದು ಕೇವಲ ಧ್ವಜವಲ್ಲ ಭಾರತೀಯ ನಾಗರಿಕತೆಯ ಪುನರ್‌ ಜಾಗೃತಿಯ ಧ್ವಜ, ಶತಮಾನಗಳಷ್ಟು ಹಳೆಯ ಗಾಯ ಈಗ ವಾಸಿಯಾಗುತ್ತಿದೆ: ಪ್ರಧಾನಿ ಮೋದಿ

ಕೆಲಸದ ಹೊರೆ ಖಂಡಿಸಿ ಪಶ್ಚಿಮ ಬಂಗಾಳ CEO ಕಚೇರಿ ಮುಂದೆ BLOಗಳಿಂದ ಅಹೋರಾತ್ರಿ ಧರಣಿ!

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಪೂರ್ಣ: ರಾಮ-ಸೀತೆ ವಿವಾಹ ಪರ್ವದಂದೇ ದೇಗುಲದ ಶಿಖರದ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

SCROLL FOR NEXT