ಸಾಂದರ್ಭಿಕ ಚಿತ್ರ 
ರಾಜ್ಯ

ಆಡಳಿತ ತರಬೇತಿ ಸಂಸ್ಥೆಯಲ್ಲಿ ಕಡ್ಡಾಯವಾಗಿ ಕನ್ನಡ ಬಳಸಬೇಕು: ಕನ್ನಡ ಅಭಿವೃದ್ಧಿ ಪ್ರಾಧಿಕಾರ

ರಾಜ್ಯದ ಬ್ಯಾಂಕುಗಳು, ಸಾರ್ವಜನಿಕ ವಲಯ ಉದ್ದಿಮೆಗಳು, ಕೇಂದ್ರ ಸರ್ಕಾರಿ ಕಚೇರಿಗಳಲ್ಲಿ ಕನ್ನಡ ...

ಬೆಂಗಳೂರು: ರಾಜ್ಯದ ಬ್ಯಾಂಕುಗಳು, ಸಾರ್ವಜನಿಕ ವಲಯ ಉದ್ದಿಮೆಗಳು, ಕೇಂದ್ರ ಸರ್ಕಾರಿ ಕಚೇರಿಗಳಲ್ಲಿ ಕನ್ನಡ ಭಾಷೆಯನ್ನು ಕಡ್ಡಾಯವಾಗಿ ಅಳವಡಿಸಿಕೊಳ್ಳಬೇಕೆಂದು ಒತ್ತಾಯಿಸುತ್ತಿರುವ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಕನ್ನಡ ಭಾಷೆ ಗೊತ್ತಿಲ್ಲದಿರುವ ಅಧಿಕಾರಿಗಳಿಗೆ ತರಬೇತಿ ನೀಡುವಂತೆ ಆಡಳಿತಾತ್ಮಕ ತರಬೇತಿ ಸಂಸ್ಥೆಯನ್ನು (ಎಟಿಐ) ಕೇಳಿದೆ.

ಮೈಸೂರಿನಲ್ಲಿರುವ ಆಡಳಿತಾತ್ಮಕ ತರಬೇತಿ ಸಂಸ್ಥೆ ರಾಜ್ಯ ಸರ್ಕಾರದ ಅಧೀನದಲ್ಲಿರುವ ತರಬೇತಿ ನೀಡುವ ಸಂಸ್ಥೆಯಾಗಿದ್ದು, ರಾಜ್ಯ ನಾಗರಿಕ ಸೇವೆಗಳು ಮತ್ತು ಸಂಶೋಧಕ ಕೋರ್ಸ್ ಗಳ ಹಿರಿಯ ಅಧಿಕಾರಿಗಳಿಗೆ ಮೂಲ ಕೋರ್ಸ್ ಗಳನ್ನು ನಡೆಸುತ್ತದೆ. ಹಣಕಾಸು ನಿರ್ವಹಣೆಯಿಂದ ಹಿಡಿದು ಕಾನೂನು ಸೇವೆಗಳವರೆಗೆ ಹಲವು ಕೋರ್ಸ್ ಗಳನ್ನು ನಿಗದಿತ ಆಧಾರದ ಮೇಲೆ ನಡೆಸಲಾಗುತ್ತದೆ. ಕರ್ನಾಟಕ ಕ್ಯಾಡರ್ ಗೆ ಬೇರೆ ರಾಜ್ಯಗಳಿಂದ ಸೇರ್ಪಡೆಯಾದ ಐಎಎಸ್, ಐಪಿಎಸ್ ಮತ್ತು ಐಎಫ್ ಎಸ್ ಅಧಿಕಾರಿಗಳು ಇಲ್ಲಿ ಆರಂಭದಲ್ಲಿ 4 ತಿಂಗಳ ಕನ್ನಡ ಕ್ರಾಶ್ ಕೋರ್ಸ್ ನಲ್ಲಿ ಭಾಗವಹಿಸುತ್ತಾರೆ.

ಪ್ರಸ್ತುತ ಎಲ್ಲಾ ತರಬೇತಿಗಳನ್ನು ಇಂಗ್ಲಿಷ್ ನಲ್ಲಿ ನೀಡಲಾಗುತ್ತದೆ. ನಾವು ಇಂಗ್ಲಿಷ್ ಭಾಷೆಯ ವಿರೋಧಿಗಳಲ್ಲ. ಕರ್ನಾಟಕದಲ್ಲಿ ಕನ್ನಡಕ್ಕೆ ಮೊದಲ ಆದ್ಯತೆ ನೀಡಬೇಕು. ಐಎಎಸ್, ಐಪಿಎಸ್ ಹಂತದ ಅಧಿಕಾರಿಗಳಿಗೆ ಇಂಗ್ಲಿಷ್ ನಲ್ಲಿ ತರಬೇತಿ ನೀಡಿದರೆ ಒಪ್ಪಿಕೊಳ್ಳೋಣ. ಆದರೆ ನಮ್ಮ ರಾಜ್ಯದ ನೌಕರರಿಗೆ ಸಹ ಇಂಗ್ಲಿಷ್ ನಲ್ಲಿ ತರಬೇತಿ ನೀಡುತ್ತಾರೆ. ಕೆಲ ದಿನಗಳ ಹಿಂದೆ ಎಟಿಐ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಸಂಸ್ಥೆಯಲ್ಲಿ ಹೆಚ್ಚೆಚ್ಚು ಕನ್ನಡ ಭಾಷೆ ಪ್ರಯೋಗವನ್ನು ಬಳಕೆ ಮಾಡುವಂತೆ ಒತ್ತಾಯಿಸಿದ್ದೇವೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಸ್ ಜಿ ಸಿದ್ದರಾಮಯ್ಯ ಹೇಳಿದ್ದಾರೆ.

ರಾಜ್ಯದ ಹಲವು ಮೊದಲ ದರ್ಜೆಯ ಸಹಾಯಕರು ಮತ್ತು ದ್ವಿತೀಯ ದರ್ಜೆ ಸಹಾಯಕರಿಗೆ ಇಲ್ಲಿ ತರಬೇತಿ ನೀಡಲಾಗುತ್ತದೆ. ಅವರಿಗೆ ಸಹ ತರಬೇತಿ ಸೇರಿದಂತೆ ಪರಿಕರಣಗಳನ್ನು ಇಂಗ್ಲಿಷ್ ನಲ್ಲಿ ನೀಡುತ್ತಾರೆ. ಇಲ್ಲಿ ತರಬೇತಿ ಗಳಿಸಿದ ಅಧಿಕಾರಿಗಳು ತಾಲ್ಲೂಕು ಮತ್ತು ಪಂಚಾಯತ್ ಮಟ್ಟದಲ್ಲಿ ಕೆಲಸ ಮಾಡುತ್ತಾರೆ. ಅವರಿಗೆ ಇಂಗ್ಲಿಷ್ ಹೇಗೆ ಸಹಾಯಕ್ಕೆ ಬರುತ್ತದೆ? ಹೀಗಾಗಿ ರಾಜ್ಯದಲ್ಲಿರುವ ಕೇಂದ್ರ ಮತ್ತು ರಾಜ್ಯ ಸರ್ಕಾರಿ ನೌಕರರಿಗೆ ಕಡ್ಡಾಯವಾಗಿ ಇಂಗ್ಲಿಷ್ ನ್ನು ಹೇಳಿಕೊಡಬೇಕು ಎಂದು ನಾವು ಒತ್ತಾಯಿಸುತ್ತೇವೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

SCROLL FOR NEXT