ಕೆ. ಸಿ. ವೀರೇಂದ್ರ 
ರಾಜ್ಯ

ಉದ್ಯಮಿ ಕೆ. ಸಿ. ವೀರೇಂದ್ರ ವಿರುದ್ಧದ ಪ್ರಕರಣ ಕೈ ಬಿಟ್ಟ ಸಿಬಿಐ

ಸಾಕ್ಷ್ಯಾಧಾರಗಳ ಕೊರತೆಯ ಕಾರಣದಿಂದಾಗಿ ಉದ್ಯಮಿ, ನಟ ದೊಡ್ಡಣ್ಣ ಅಳಿಯ ಕೆ.ಸಿ.ವೀರೇಂದ್ರ ವಿರುದ್ಧ ಸಿಬಿಐ ದಾಖಲಿಸಿದ್ದ ಪ್ರಕರಣವನ್ನು ಕೈಬಿಡಲಾಗಿದೆ.

ಚಿತ್ರದುರ್ಗ:ಸಾಕ್ಷ್ಯಾಧಾರಗಳ ಕೊರತೆಯ ಕಾರಣದಿಂದಾಗಿ ಉದ್ಯಮಿ, ನಟ ದೊಡ್ಡಣ್ಣ ಅಳಿಯ ಕೆ.ಸಿ.ವೀರೇಂದ್ರ ವಿರುದ್ಧ ಸಿಬಿಐ ದಾಖಲಿಸಿದ್ದ ಪ್ರಕರಣವನ್ನು ಕೈಬಿಡಲಾಗಿದೆ.

ನೋಟು ಅಮಾನ್ಯ ನಂತರ 500 ಹಾಗೂ 1 ಸಾವಿರ ನೋಟುಗಳ ಅಕ್ರಮ ಸಂಗ್ರಹಣೆ ಆರೋಪದ ಹಿನ್ನೆಲೆಯಲ್ಲಿ  ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಮತ್ತು ಸಿಬಿಐ ಅಧಿಕಾರಿಗಳು ಚಳ್ಳಕೆರೆಯಲ್ಲಿರುವ ಕೆ.ಸಿ.ವೀರೇಂದ್ರ ಮನೆ ಮೇಲೆ 2016ರ ಡಿಸೆಂಬರ್ 10ರಂದು ದಾಳಿ ನಡೆಸಿದ್ದರು.

 ಗೋವಾದಲ್ಲಿನ ಕ್ಯಾಸಿನೊ, ಹುಬ್ಬಳ್ಳಿಯ ಕಚೇರಿ ಸೇರಿದಂತೆ ಒಟ್ಟು 15 ಕಡೆ ದಾಳಿ ನಡೆದಿತ್ತು. ಭ್ರಷ್ಟಾಚಾರ ನಿಗ್ರಹ ಕಾಯ್ದೆಯಡಿ ಕೆ.ಸಿ.ವೀರೇಂದ್ರ ವಿರುದ್ಧ ಸಿಬಿಐ ಪ್ರಕರಣ ದಾಖಲು ಮಾಡಿತ್ತು. ಈಗ ಸಾಕ್ಷ್ಯಾಧಾರಗಳ ಕೊರತೆ ಹಿನ್ನಲೆಯಲ್ಲಿ 'ಬಿ' ರಿಪೋರ್ಟ್ ಸಲ್ಲಿಸಲಾಗಿದ್ದು, ಪ್ರಕವರಣವನ್ನು ನ್ಯಾಯಾಲಯ ಇತ್ಯರ್ಥಗೊಳಿಸಿದೆ.

ದಾಳಿ ಮಾಡಿದಾಗ 500 ಮತ್ತು 2000 ರೂ. ಮುಖಬೆಲೆಯ 90 ಲಕ್ಷ ನಗದು, 28 ಕೆಜಿ ಚಿನ್ನದ ಬಿಸ್ಕತ್, 4 ಕೆಜಿ ಚಿನ್ನಾಭರಣವನ್ನು ವಶಕ್ಕೆ ಪಡೆಯಲಾಗಿತ್ತು. ಇದರ ಒಟ್ಟು ಮೌಲ್ಯ 5.76 ಕೋಟಿ ಎಂದು ಸಿಬಿಐ ಹೇಳಿತ್ತು. ಸಿಬಿಐ ದಾಳಿ ಬಳಿಕ ಕೆ.ಸಿ.ವೀರೇಂದ್ರ ಅವರನ್ನು ಬಂಧಿಸಲಾಗಿತ್ತು. 42 ದಿನಗಳ ಬಳಿಕ ಜಾಮೀನಿನ ಮೇಲೆ ಅವರನ್ನು ಬಿಡುಗಡೆಗೊಂಡಿದ್ದರು.

ಸಾಕ್ಷ್ಯಾಧಾರಗಳ ಕೊರತೆ ಸಾಕ್ಷ್ಯಾಧಾರಗಳ ಕೊರತೆ ಈ ಪ್ರಕರಣದಲ್ಲಿ ಬ್ಯಾಂಕ್ ಅಧಿಕಾರಿಗಳ ಪಾತ್ರವಿದೆ ಎಂಬ ಆರೋಪ ಪುಷ್ಟೀಕರಿಸುವ ದಾಖಲೆಗಳು ಇಲ್ಲ. ಆರೋಪಿ ದಾಖಲೆ ತಿದ್ದಿದ್ದಾರೆ ಅಥವ ನಕಲಿ ದಾಖಲೆ ಸೃಷ್ಟಿ ಮಾಡಿದ್ದಾರೆ ಎಂಬುದಕ್ಕೂ ಪುರಾವೆ ಇಲ್ಲ ಎಂದು ಸಿಬಿಐ ಹೇಳಿದೆ.

 ಕೆ.ಸಿ.ವೀರೇಂದ್ರ ಅವರ ಮನೆ ಮೇಲೆ ದಾಳಿ ನಡೆಸಿದಾಗ ವಶಪಡಿಸಿಕೊಂಡಿರುವ ದಾಖಲೆಗಳನ್ನು ಮರಳಿಸುವಂತೆ ಸಿಬಿಐ ಕೋರ್ಟ್ ಆದೇಶ ನೀಡಿದೆ ಎಂದು ಕೆ.ಸಿ.ವೀರೇಂದ್ರ ಅವರ ಪರ ವಕೀಲ ಎಚ್.ಎಸ್.ಚಂದ್ರಮೌಳಿ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?