ಬಿ. ಜೆ. ಪುಟ್ಟಸ್ವಾಮಿ 
ರಾಜ್ಯ

ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಅಧ್ಯಕ್ಷ ಸ್ಥಾನಕ್ಕೆ ಬಿ. ಜೆ. ಪುಟ್ಟಸ್ವಾಮಿ ರಾಜೀನಾಮೆ

ಇತ್ತೀಚಿಗೆ ನಡೆದ ವಿಧಾನಪರಿಷತ್ ಚುನಾವಣೆ ಸಂದರ್ಭದಲ್ಲಿ ಅಭ್ಯರ್ಥಿ ಆಯ್ಕೆ ವಿಚಾರದಿಂದ ಬಿಜೆಪಿ ವಿರುದ್ಧ ಅಸಮಾಧಾನ ಗೊಂಡಿರುವ ವಿಧಾನಪರಿಷತ್ ಮಾಜಿ ಸದಸ್ಯ ಪುಟ್ಟಸ್ವಾಮಿ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ .

ಬೆಂಗಳೂರು: ಇತ್ತೀಚಿಗೆ ನಡೆದ ವಿಧಾನಪರಿಷತ್ ಚುನಾವಣೆ ಸಂದರ್ಭದಲ್ಲಿ ಅಭ್ಯರ್ಥಿ ಆಯ್ಕೆ ವಿಚಾರದಿಂದ ಬಿಜೆಪಿ ವಿರುದ್ಧ ಅಸಮಾಧಾನ ಗೊಂಡಿರುವ ವಿಧಾನಪರಿಷತ್ ಮಾಜಿ ಸದಸ್ಯ  ಪುಟ್ಟಸ್ವಾಮಿ ಬಿಜೆಪಿ   ಹಿಂದುಳಿದ ವರ್ಗಗಳ ಮೋರ್ಚಾ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ .

ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರ ಆಪ್ತರಾಗಿದ್ದರೂ  ಮತ್ತೆ ವಿಧಾನಪರಿಷತ್  ಗೆ ಮರು ಆಯ್ಕೆ  ಮಾಡದೆ ಇರುವುದರಿಂದ  ಪುಟ್ಟಸ್ವಾಮಿ ಅಸಮಾಧಾನಗೊಂಡು ರಾಜೀನಾಮೆ  ಸಲ್ಲಿಸಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಯಾವ ಕಾರಣಕ್ಕೆ ತಮ್ಮಗೆ ವಿಧಾನಪರಿಷತ್ ಸ್ಥಾನಕ್ಕೆ  ನಾಮನಿರ್ದೇಶನ ಮಾಡಲಿಲ್ಲ ಎಂಬುದು ಗೊತ್ತಿದೆ.  ವಿಧಾನಪರಿಷತ್ತಿನ ನಾಯಕನಾಗಲೂ ನೀವೂ ನನ್ನಗೆ ಸಲಹೆ ನೀಡಿದ್ರೀ. ಆದರೆ. ಏಕೆ ನಿಮ್ಮ ಮಾತನ್ನು  ಉಳಿಸಿಕೊಳ್ಳಲಿಲ್ಲ ಎಂಬುದು ಅರ್ಥವಾಗುತ್ತಿಲ್ಲ ಎಂದು  ಬಿ.ಎಸ್. ಯಡಿಯೂರಪ್ಪ ಅವರಿಗೆ ಬರೆದಿರುವ ಪತ್ರದಲ್ಲಿ ಪುಟ್ಟಸ್ವಾಮಿ ಪ್ರಶ್ನಿಸಿದ್ದಾರೆ.

 ಹಿಂದಿನ ಸರ್ಕಾರದಲ್ಲಿನ ಹಗರಣಗಳನ್ನು ಬೆಳಕಿಗೆ ತರಲು ಶ್ರಮಪಟ್ಟಿದ್ದು, ಹಲವು ಸವಾಲುಗಳನ್ನು ಎದುರಿಸಿದ್ದೇನೆ. ಆದರೆ. ತಮ್ಮ ಮೇಲೆ ದಾಳಿ ಆದಾಗ ಯಾರೂ ಕೂಡಾ ಸಹಾಯಕ್ಕೆ ಬರಲಿಲ್ಲ. ಸ್ವಾರ್ಥದಿಂದ ಕೆಲಸ ಮಾಡಲಿಲ್ಲ, 45 ವರ್ಷ ಪಕ್ಷದ ಸಂಘಟನೆಗಾಗಿ ಕೆಲಸ ಮಾಡಿರುವುದಾಗಿ ಪುಟ್ಟಸ್ವಾಮಿ ಹೇಳಿದ್ದಾರೆ.

ಆದರೆ, ಪುಟ್ಟಸ್ವಾಮಿ ರಾಜೀನಾಮೆ ಬಗ್ಗೆ ಪ್ರತಿಕ್ರಿಯೆ ನೀಡಲು  ಬಿ.ಎಸ್. ಯಡಿಯೂರಪ್ಪ ನಿರಾಕರಿಸಿದ್ದಾರೆ.


Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

2nd Test, Day 3: ಮೊದಲ ಇನ್ನಿಂಗ್ಸ್ ನಲ್ಲಿ 248 ರನ್ ಗೆ ವಿಂಡೀಸ್ ಆಲೌಟ್, ಫಾಲೋಆನ್ ಹೇರಿದ ಭಾರತ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

SCROLL FOR NEXT