ಹೊಸದುರ್ಗ: ಮರಕ್ಕೆ ಕಾರು ಡಿಕ್ಕಿ, ತಂದೆ, ಮಗಳು ಸಾವು 
ರಾಜ್ಯ

ಹೊಸದುರ್ಗ: ಮರಕ್ಕೆ ಕಾರು ಡಿಕ್ಕಿ; ತಂದೆ, ಮಗಳು ಸಾವು

ಕಾರೊಂದು ಮರಕ್ಕೆ ಡಿಕ್ಕಿಯಾಗಿ ತಂದೆ, ಮಗಳು ಸಾವನ್ನಪ್ಪಿರುವ ದುರಂತ ಘಟನೆ ಚಿತ್ರದುರ್ಗ ಜಿಲ್ಲೆ ಹೊಸದುರ್ಗದಲ್ಲಿ ನಡೆದಿದೆ.

ಹೊಸದುರ್ಗ: ಕಾರೊಂದು ಮರಕ್ಕೆ ಡಿಕ್ಕಿಯಾಗಿ ತಂದೆ, ಮಗಳು ಸಾವನ್ನಪ್ಪಿರುವ ದುರಂತ ಘಟನೆ ಚಿತ್ರದುರ್ಗ ಜಿಲ್ಲೆ ಹೊಸದುರ್ಗದಲ್ಲಿ ನಡೆದಿದೆ.
ಹೊಸದುರ್ಗದ ಎನ್.ಜಿ. ಹಳ್ಳಿ ಗೇಟ್ ಬಳಿ ಸಂಭವಿಸಿದ ದುರಂತದಲ್ಲಿ ಜವಳಿ ಉದ್ಯಮಿ ಮಂಜುನಾಥ್ (40) ಮತ್ತು ಅವರ ಒಂದು ವರ್ಷದ ಮಗಳು ರಾಜೇಶ್ವರಿ ಮೃತಪಟ್ಟಿದ್ದಾರೆ. ಮಂಜುನಾಥ್ ಸೋಮವಾರ ಬೆಳಗಿನ ಜಾವ ದಾವಣಗೆರೆಯಿಂದ ಹೊಸದುರ್ಗಕ್ಕೆ ಕುಟುಂಬದೊಡನೆ ತೆರಳುತ್ತಿದ್ದರು. 
ಘಟನೆ ವೇಳೆ ಕಾರಿನಲ್ಲಿದ್ದ ಮಂಜುನಾಥ್ ಅವರ ಪತ್ನಿ  ಶಿಲ್ಪಾ, ಮಗಳು ಶಾರದಾ, ಸನ್ವಿತಾ ಹಾಗೂ ಆಕೆಯ ಸ್ನೇಹಿತ ರಂಗನಾಥ್ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಾರು ಚಾಲನೆ ಮಾಡುತ್ತಿದ್ದ ಮಂಜುನಾಥ್ ನಿಯಂತ್ರಣ ತಪ್ಪಿ ಕಾರು ರಸ್ತೆ ಪಕ್ಕದ ಮರಕ್ಕೆ ಡಿಕ್ಕಿಯಾಗಿದೆ ಎಂದು ಪೋಲೀಸರು ತಿಳಿಸಿದ್ದಾರೆ.
ಹೊಳಲ್ಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT