ನೂತನ ಸರ್ಕಾರದಿಂದ ಸಿಹಿ ಸುದ್ದಿ: ರಾಜ್ಯ ಸರ್ಕಾರಿ ನೌಕರರ ತುಟ್ಟಿ ಭತ್ಯೆ ಹೆಚ್ಚಳ 
ರಾಜ್ಯ

ನೂತನ ಸರ್ಕಾರದಿಂದ ಸಿಹಿ ಸುದ್ದಿ: ರಾಜ್ಯ ಸರ್ಕಾರಿ ನೌಕರರ ತುಟ್ಟಿ ಭತ್ಯೆ ಹೆಚ್ಚಳ

ಮುಖ್ಯಮಂತ್ರಿ ಕುಮಾರಸ್ವಾಮಿಯವ ನೇತೃತ್ವದ ನೂತನ ಸಮ್ಮಿಶ್ರ ಸರ್ಕಾರದಿಂದ ರಾಜ್ಯದ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ಸಿಕ್ಕಿದೆ.

ಬೆಂಗಳೂರು: ಮುಖ್ಯಮಂತ್ರಿ ಕುಮಾರಸ್ವಾಮಿಯವ ನೇತೃತ್ವದ ನೂತನ ಸಮ್ಮಿಶ್ರ ಸರ್ಕಾರದಿಂದ ರಾಜ್ಯದ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ಸಿಕ್ಕಿದೆ. ರಾಜ್ಯದ ಆರು ಲಕ್ಷ ನೌಕರರ ಮೂಲ ವೇತನದಲ್ಲಿ ಶೇ 1.75ರಷ್ಟು ಹೆಚ್ಚಳ ಶಿಫಾರಸಿಗೆ ಸಮ್ಮತಿ ಸಿಕ್ಕಿದೆ
ಹಣಕಾಸು ಖಾತೆ ಉಸ್ತುವಾರಿ ಹೊಂದಿರುವ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಇಂದು ಬಜೆಟ್ ಪೂರ್ವಭಾವಿ ಸಭೆ ಕರೆದಿದ್ದು ಆ ವೇಳೆ ಸರ್ಕಾರಿ ನೌಕರರ ತುಟ್ಟಿ ಭತ್ಯೆ ಹೆಚ್ಚಳಕ್ಕೆ ಒಪ್ಪಿಗೆ ಸೂಚಿಸಿದ್ದಾರೆ.
ಈ ಹೆಚ್ಚಳವು ಜನವರಿ 1, 2018ರಿಂದ ಪೂರ್ವಾನ್ವಯವಾಗಲಿದೆ. ಈ ಸೌಲಭ್ಯವು ರಾಜ್ಯ ಸರ್ಕಾರಿ ನೌಕರರು, ಜಿಲ್ಲಾಪಂಚಾಯತ್ ಪೂರ್ನಾವಧಿ ನೌಕರರು, ಸರ್ಕಾರಿ ಸಹಾಯಧನ ಪಡೆಯುವ ಶಿಕ್ಷಣ ಸಂಸ್ಥೆ, ಪೂರ್ಣಾವಧಿ ನೌಕರರುಗಳಿಗೆ ಅನ್ವಯಿಸಲಿದೆ.
ಈ ತುಟ್ಟಿ ಭತ್ಯೆ ಹೆಚ್ಚಳದ ಕಾರಣ ಬೊಕ್ಕಸಕ್ಕೆ  ಸುಮಾರು 560 ಕೋಟಿ ಹೊರೆ ಬೀಳುತ್ತದೆ ಎನ್ನಲಾಗಿದೆ.
`
ಏತನ್ಮಧ್ಯೆ ರಾಜ್ಯ ಸರ್ಕಾರಿ ನೌಕರರ ಸಂಘವು ಶೇ.4.25ರ ಮೂಲ ವೇತನ ಹೆಚ್ಚಳಕ್ಕೆ ಸಲ್ಲಿಸಿದ್ದ ಮನವಿಯನ್ನು ಸರ್ಕಾರ ತಿರಸ್ಕರಿಸಿದೆ.
ಇದಕ್ಕೂ ಹಿಂದೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಕಳೆದ ವರ್ಷ ದೀಪಾವಳಿ ಸಮಯದಲ್ಲಿ ಸರ್ಕಾರಿ ನೌಕರರ ತುಟ್ಟಿ ಭತ್ಯೆ (ಡಿಎ) ಪ್ರಮಾಣದಲ್ಲಿ ಶೇ 2ರಷ್ಟು ಹೆಚ್ಚಳ ಮಾಡಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT