ಪಿಯುಸಿ ಬೋರ್ಡ್ 
ರಾಜ್ಯ

ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿ 84 ಖಾಸಗಿ ಪಿಯುಸಿ ಕಾಲೇಜುಗಳಿಗೆ ಅನುಮತಿ

ರಾಜ್ಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘಿಸಿ ...

ಬೆಂಗಳೂರು: ರಾಜ್ಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘಿಸಿ ರಾಜ್ಯದಲ್ಲಿ ಹೊಸ 84 ಖಾಸಗಿ ಪದವಿ ಪೂರ್ವ ಕಾಲೇಜುಗಳ ಸ್ಥಾಪನೆಗೆ ಅನುಮತಿ ನೀಡಿದೆ.

ದಾಖಲೆಗಳಿಂದ ಸಿಕ್ಕಿರುವ ಮಾಹಿತಿ ಪ್ರಕಾರ, ಮುಖ್ಯ ಚುನಾವಣಾಧಿಕಾರಿ, ಹೊಸ ಪದವಿಪೂರ್ವ ಕಾಲೇಜುಗಳ ಸ್ಥಾಪನೆಗೆ ಅನುಮತಿ ನೀಡುವಂತೆ ಕೋರಿ ಶಿಕ್ಷಣ ಇಲಾಖೆ ಮಾಡಿರುವ ಮನವಿಯನ್ನು ತಿರಸ್ಕರಿಸಿದೆ. ಮೇ 15ರಿಂದ ಜೂನ್ 12ರವರೆಗ ವಿಧಾನಪರಿಶತ್ ಸದಸ್ಯರ ಆಯ್ಕೆ ಹಿನ್ನಲೆಯಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿತ್ತು. ಆದರೂ ಶಿಕ್ಷಣ ಇಲಾಖೆ ಅನುಮತಿ ನೀಡಿದೆ ಎಂದು ತಿಳಿದುಬಂದಿದೆ. ಪ್ರಸ್ತಾವನೆ ನಿರ್ದೇಶಕರ ಮಟ್ಟದಲ್ಲಿ ತಿರಸ್ಕೃತವಾದರೂ ಕೂಡ ಅದನ್ನು ಸಚಿವಾಲಯ ಮಟ್ಟಕ್ಕೆ ಕಳುಹಿಸಲಾಗಿದೆ.

 ಶಿಕ್ಷಣ ಇಲಾಖೆ ಮತ್ತು ರಾಜ್ಯ ಚುನಾವಣಾ ಆಯೋಗದ ನಡುವೆ ನಡೆದ ಸಂವಹನದಲ್ಲಿ ದಾಖಲಾದ ಪ್ರಕಾರ ಪ್ರಸ್ತಾವನೆ ಮೇ 29ರಂದು ತಿರಸ್ಕೃತಗೊಂಡಿದೆ. ಶಾಲೆ-ಕಾಲೇಜುಗಳಿಗೆ ಸಹ ಅದೇ ದಾಖಲೆಯಲ್ಲಿ ಪ್ರಸ್ತಾವನೆಯನ್ನು ತಿರಸ್ಕರಿಸಲಾಗಿದೆ ಎಂದು ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ವಿಧಾನಪರಿಷತ್ ಸದಸ್ಯ ಅರುಣ್ ಶಹಪುರ್, ಈ ವಿಷಯವನ್ನು ಮೊದಲು ಎತ್ತಿದ್ದು ನಾನು, ಇದು ಕೇವಲ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾತ್ರವಲ್ಲ, ಹಲವು ಅಕ್ರಮಗಳಿಗೆ ಕೂಡ ಸಂಬಂಧಪಟ್ಟದ್ದಾಗಿದೆ.

ಅನುಮೋದನೆ ನೀಡಿದ ಪ್ರಕ್ರಿಯೆಗೆ ಸಂಬಂಧಪಟ್ಟಂತೆ ಪ್ರಧಾನ ಕಾರ್ಯದರ್ಶಿ ಮಟ್ಟದಲ್ಲಿ ಉನ್ನತ ಮಟ್ಟದ ತನಿಖೆಗೆ ನಾವು ಒತ್ತಾಯಿಸುತ್ತೇವೆ ಎಂದು ಹೇಳಿದರು.
ಈ ಮಧ್ಯೆ ಪಿಯುಸಿ ಕಾಲೇಜುಗಳ ವ್ಯವಸ್ಥಾಪಕ ಮಂಡಳಿ ಅನುಮೋದನೆ ಪತ್ರ ಸ್ವೀಕರಿಸಿದ್ದನ್ನು ಖಚಿತಪಡಿಸಿದ್ದು ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದಾಗ ನಮಗೆ ಪತ್ರ ಸಿಕ್ಕಿದೆ. ಪದವಿಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕರು ಈ ದಾಖಲೆಯ ಪತ್ರವನ್ನು ತಿರಸ್ಕರಿಸಿದ್ದಾರೆ. ಆದರೆ ನಂತರ ಪ್ರಧಾನ ಕಾರ್ಯದರ್ಶಿಗಳು ಇದಕ್ಕೆ ಒಪ್ಪಿಗೆ ಸೂಚಿಸಿದ್ದಾರೆ ಎಂದು ಶಹಪುರ್ ತಿಳಿಸಿದ್ದಾರೆ.

ಸರ್ಕಾರ ಕಳೆದ ಫೆಬ್ರವರಿಯಲ್ಲಿ ನೀಡಿರುವ ಆದೇಶ ಪ್ರಕಾರ, ಈ ವಿಷಯದಲ್ಲಿ ತೀರ್ಮಾನಿಸುವ ಅಧಿಕಾರವನ್ನು ಪಿಯುಸಿ ಇಲಾಖೆಯ ನಿರ್ದೇಶಕರಿಗೆ ನೀಡಿತ್ತು. ಮೂಲಭೂತ ಸೌಕರ್ಯಗಳ ಕೊರತೆ ಮತ್ತು ಸರ್ಕಾರಿ ಕಾಲೇಜುಗಳಿರುವ 3 ಕಿಲೋ ಮೀಟರ್ ವ್ಯಾಪ್ತಿಯೊಳಗೆ ಖಾಸಗಿ ಕಾಲೇಜುಗಳು ಸ್ಥಾಪನೆಯಾಗುವುದರಿಂದ ತಿರಸ್ಕರಿಸಲಾಗಿತ್ತು ಎನ್ನುತ್ತಾರೆ ಶಪಪುರ್.

ರಾಜ್ಯದಲ್ಲಿ ಹೆಚ್ಚುತ್ತಿರುವ ಖಾಸಗಿ ಕಾಲೇಜುಗಳ ಸಂಖ್ಯೆಯಿಂದ ಸರ್ಕಾರಿ ಪಿಯುಸಿ ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆಯಲ್ಲಿ ಇಳಿಮುಖವಾಗುವುದನ್ನು ತಡೆಯಲು ಅನುಮತಿಯನ್ನು ನಿರಾಕರಿಸಲಾಗುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT