ಪ್ರಶ್ನೆಪತ್ರಿಕೆ ಸೋರಿಕೆ: ಮರು ಪರೀಕ್ಷೆ ಇಲ್ಲ ಎಂದ ವಿಟಿಯು 
ರಾಜ್ಯ

ಪ್ರಶ್ನೆಪತ್ರಿಕೆ ಸೋರಿಕೆ: ಮರು ಪರೀಕ್ಷೆ ಇಲ್ಲ ಎಂದ ವಿಟಿಯು

ಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯವು (ವಿಟಿಯು) ಇತ್ತೀಚೆಗೆ ನಡೆಸಿದ್ದ ಪರೀಕ್ಷೆ ವೇಳೆ ಪ್ರಶ್ನೆಪತ್ರಿಕೆ ಸೋರಿಕೆ ಯಾದ ವಿಚಾರಕ್ಕೆ ಸಂಬಂಧಿಸಿ ತಾನು ಇನ್ನೊಮ್ಮೆ....

ಬೆಂಗಳೂರು: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯವು (ವಿಟಿಯು) ಇತ್ತೀಚೆಗೆ ನಡೆಸಿದ್ದ ಪರೀಕ್ಷೆ ವೇಳೆ ಪ್ರಶ್ನೆಪತ್ರಿಕೆ ಸೋರಿಕೆಯಾದ ವಿಚಾರಕ್ಕೆ ಸಂಬಂಧಿಸಿ ತಾನು ಇನ್ನೊಮ್ಮೆ ಪರೀಕ್ಷೆಗಳನ್ನು ಆಯೋಜಿಸುವುದಿಲ್ಲ ಎಂದು ಸ್ಪಷ್ಟನೆ ನೀಡಿದೆ.
ವಿಶ್ವವಿದ್ಯಾನಿಲಯದ ಐಟಿ ತಂಡ ನೀಡಿರುವ ವರದಿಯನ್ವಯ ಸೋರಿಕೆಯಾಗಿದೆ ಎಂದು ಹೇಳಲಾದ ಪ್ರಶ್ನೆ ಪತ್ರಿಕೆಯು ನಕಲಿ ಪ್ರಶ್ನೆಪತ್ರಿಕೆಯಾಗಿದ್ದು ಕೆಲ ಪುಂಡರು ರಚಿಸಿರುವ ನಕಲಿ ಪ್ರಶ್ನಾವಳಿಗಳು ಇದರಲ್ಲಿದೆ ಎಂದು ವಿಟಿಯು ಅಧಿಕಾರಿಗಳು ಹೇಳಿದ್ದಾರೆ. ಅದಾಗ್ಯೂ ಅಂತಹಾ ಕೃತ್ಯ ನಡೆಸಿದವರ ಮೂಲ ತಿಳಿದುಕೊಳ್ಳಲು ವಿಶ್ವವಿದ್ಯಾನಿಲಯ ತನಿಖಾ ಸಮಿತಿಯೊಂದನ್ನು ಆಯೋಜಿಸಿದೆ. "ಇದೇನೂ ಮೊದಲ ಬಾರಿ ನಡೆಯುತ್ತಿಲ್ಲ, ಈ ಹಿಂದೆ ಸಹ ನಕಲಿ ಪ್ರಶ್ನೆಪತ್ರಿಕೆಗಳು ಬಹಿರಂಗವಾಗಿದ್ದವು. ಇದೀಗ ನಾವು ಈ ಸಂಬಂಧ ತನಿಖೆ ನಡೆಸಲು ಸಮಿತಿಯನ್ನು ರೂಪಿಸಿದ್ದೇವೆ" ಅಧಿಕಾರಿಗಳು ಹೇಳಿದ್ದಾರೆ.
ಶುಕ್ರವಾರ ನಡೆದಿದ್ದ  ಗಣಿತ II (ಪುನರಾವರ್ತಿತ ಪತ್ರಿಕೆ)  ಪರೀಕ್ಷೆಯ ಪ್ರಶ್ನೆಪತ್ರಿಕೆಗಳು ಗುರುವಾರವೇ ಸಾಮಾಜಿಕ ತಾಣಗಳಲ್ಲಿ ಅಕ್ರಮವಾಗಿ ಹರಿದಾಡುತ್ತಿದ್ದವು.  ಬೆಳಿಗ್ಗೆ ಹತ್ತರ ವೇಳೆಗೆ ಪ್ರಶ್ನೆಪತ್ರಿಕೆ ಸೋರಿಕೆಯಾಗಿದೆ ಎಂದು ವಿದ್ಯಾರ್ಥಿಗಳು ಹೇಳಿದ್ದಾರೆ.ಸೋರಿಕೆಯಾದ ಪ್ರಶ್ನೆಪತ್ರಿಕೆಯನ್ನು ಒಳಗೊಂಡ ವಾಟ್ಸ್ ಅಪ್ ಸಂದೇಶಗಳು ಒಂಭತ್ತು ಗಂಟೆಯಿಂಡಲೇ ಹರಿದಾಡಲು ಪ್ರಾರಂಭಿಸಿದ್ದವು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT