ಶಿರಾಡಿ ಘಾಟ್ 
ರಾಜ್ಯ

ಜುಲೈ 5 ರಿಂದ ಶಿರಾಡಿ ಘಾಟ್ ಸಂಚಾರಕ್ಕೆ ಮುಕ್ತ-ಎಚ್. ಡಿ. ರೇವಣ್ಣ

ಬೆಂಗಳೂರಿನಿಂದ ಮಂಗಳೂರು ಮಾರ್ಗವಾಗಿ ತೆರಳುವ ಪ್ರಯಾಣಿಕರಿಗೆ ಸಂತಸ ಸುದ್ದಿ. ರಸ್ತೆ ಕಾಂಕ್ರಿಟ್ ಗಾಗಿ ಐದು ತಿಂಗಳಿನಿಂದ ಮುಚ್ಚಲಾಗಿದ್ದ ಶಿರಾಡಿಘಾಟ್ ಮಾರ್ಗವನ್ನು ಜುಲೈ 5 ರಿಂದ ಸಂಚಾರಕ್ಕೆ ಮುಕ್ತಗೊಳಿಸಲಾಗುವುದು ಎಂದು ಲೋಕೋಪಯೋಗಿ ಸಚಿವ ಎಚ್. ಡಿ. ರೇವಣ್ಣ ತಿಳಿಸಿದ್ದಾರೆ.

ಮಂಗಳೂರು: ಬೆಂಗಳೂರಿನಿಂದ ಮಂಗಳೂರು ಮಾರ್ಗವಾಗಿ ತೆರಳುವ ಪ್ರಯಾಣಿಕರಿಗೆ ಸಂತಸ ಸುದ್ದಿ. ರಸ್ತೆ ಕಾಂಕ್ರಿಟ್ ಗಾಗಿ ಐದು ತಿಂಗಳಿನಿಂದ ಮುಚ್ಚಲಾಗಿದ್ದ ಶಿರಾಡಿಘಾಟ್  ಮಾರ್ಗವನ್ನು ಜುಲೈ 5 ರಿಂದ  ಸಂಚಾರಕ್ಕೆ ಮುಕ್ತಗೊಳಿಸಲಾಗುವುದು ಎಂದು  ಲೋಕೋಪಯೋಗಿ ಸಚಿವ ಎಚ್. ಡಿ. ರೇವಣ್ಣ ತಿಳಿಸಿದ್ದಾರೆ.
ರಸ್ತೆ ಕಾಮಗಾರಿ ಪರಿಶೀಲನೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  13 ಕಿಲೋ ಮೀಟರ್ ದೂರದ ರಸ್ತೆಯನ್ನು ಬಂದ್ ಮಾಡಿರುವುದರಿಂದ ಪರ್ಯಾಯ ಮಾರ್ಗಗಳಲ್ಲಿ ಚಾರ್ಮಾಡಿ ರಸ್ತೆ  ಹಾಗೂ  ಮಡಿಕೇರಿ ರಸ್ತೆಗಳಲ್ಲಿ  ತೆರಳುವ ಸಾವಿರಾರು ಪ್ರಯಾಣಿಕರು ಪ್ರತಿನಿತ್ಯ ತೊಂದರೆ ಎದುರಿಸುವಂತಾಗಿದೆ.
ಚಾಮಾರ್ಡಿ ಘಾಟ್ ಬಳಿ ಕೆಳೆದ ವಾರ ಸುರಿದ ಭಾರಿ ಮಳೆಯಿಂದಾಗಿ  9 ತಿರುವುಗಳಲ್ಲಿ ಭೂ ಕುಸಿತ ಉಂಟಾಗಿತ್ತು. ಎರಡು ದಿನ ಈ ಮಾರ್ಗದಲ್ಲಿ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿತ್ತು.  ಇದು ಕರಾವಳಿ ಹಾಗೂ ರಾಜಧಾನಿ ಬೆಂಗಳೂರು ಮತ್ತಿತರ ಸ್ಥಳಗಳಿಗೆ ತೆರಳಬೇಕಾದ ಪ್ರಯಾಣಿಕರ ಪ್ರಮುಖ ಸಮಸ್ಯೆಯಾಗಿದೆ.
ಕೆಲ ವಾರದ ಹಿಂದೆಯೇ ಶಿರಾಡಿ ಘಾಟ್ ರಸ್ತೆ ಕಾಮಗಾರಿ ಪೂರ್ಣಗೊಳ್ಳಬೇಕಾಗಿತ್ತು. ಆದರೆ, ಭಾರೀ ಮಳೆಯಿಂದಾಗಿ ವಿಳಂಬವಾಗುತ್ತಿದೆ. ಚಾಮಾರ್ಡಿ ರಸ್ತೆ ಅಭಿವೃದ್ದಿಗಾಗಿ  250 ಕೋಟಿ ರೂಪಾಯಿ ಬಿಡುಗಡೆ ಮಾಡುವಂತೆ ಕೇಂದ್ರಸರ್ಕಾರಕ್ಕೆ ಶೀಘ್ರವೇ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು  ಎಚ್. ಡಿ. ರೇವಣ್ಣ ತಿಳಿಸಿದರು.
ಪುತ್ತೂರು ಶಾಸಕ ಸಂಜಿವ್ ಮತಂದೂರು ಪ್ರಯಾಣಿಕರ ಸಮಸ್ಯೆಗಳ ಬಗ್ಗೆ  ವಿವರಿಸಿದರು.  ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಗುಂಡಿ ಮುಚ್ಚುವ ಕಾರ್ಯಗಳನ್ನು ಆದ್ಯತೆ ಮೇರೆಗೆ ಕೈಗೊಂಡು ಈ ತಿಂಗಳಲ್ಲಿಯೇ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ರೇವಣ್ಣ ನಿರ್ದೇಶನ ನೀಡಿದರು.
ಬಿಸಿ ರಸ್ತೆಯಿಂದ ಸುಳ್ಯವರೆಗೂ ಅರಣ್ಯ ಇಲಾಖೆ ಸಹಯೋಗದಲ್ಲಿ  ಒಳಚರಂಡಿ ಕಾಮಗಾರಿ ಕೈಗೊಳ್ಳುವಂತೆಯೂ  ಅಧಿಕಾರಿಗಳಿಗೆ ಸೂಚನೆ ನೀಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT