ಬೆಂಗಳೂರು: ಮಕ್ಕಳೊಡನೆ ತಾಯಿ ಆತ್ಮಹತ್ಯೆಗೆ ಯತ್ನ, ವರ್ಷದ ಮಗು ಸಾವು 
ರಾಜ್ಯ

ಬೆಂಗಳೂರು: ಮಕ್ಕಳೊಡನೆ ತಾಯಿ ಆತ್ಮಹತ್ಯೆಗೆ ಯತ್ನ, ವರ್ಷದ ಮಗು ಸಾವು

ಆತ್ಮಹತ್ಯೆ ಮಾಡಿಕೊಳ್ಳುವ ಉದ್ದೇಶದೊಡನೆ ತಾಯಿ ತನ್ನಿಬ್ಬರು ಮಕ್ಕಳೊಡನೆ ಕೆರೆಗೆ ಹಾರಿದ್ದು ತಾಯಿ ಹಾಗೂ ಮೂರು ವರ್ಷದ ಹೆಣ್ಣು ಮಗು ಪಾರಾಗಿ ಒಂದು ವರ್ಷದ ಮಗು ಮೃತಪಟ್ಟ ಘಟನೆ.....

ಬೆಂಗಳೂರು: ಆತ್ಮಹತ್ಯೆ ಮಾಡಿಕೊಳ್ಳುವ ಉದ್ದೇಶದೊಡನೆ ತಾಯಿ ತನ್ನಿಬ್ಬರು ಮಕ್ಕಳೊಡನೆ ಕೆರೆಗೆ ಹಾರಿದ್ದು ತಾಯಿ ಹಾಗೂ ಮೂರು ವರ್ಷದ ಹೆಣ್ಣು ಮಗು ಪಾರಾಗಿ ಒಂದು ವರ್ಷದ ಮಗು ಮೃತಪಟ್ಟ ಘಟನೆ ಬೆಂಗಳೂರಿನ ಹೊರವಲಯ ಜಿಗಣಿ ಸಮೀಪದಲ್ಲಿ ನಡೆದಿದೆ.
ಜಿಗಣಿ ಪೋಲೀಸ್ ಠಾಣೆ ವ್ಯಾಪ್ತಿಯ ಆನೆಕಲ್ ತಾಲೂಕಿನಲ್ಲಿ ಮಂಗಳವಾರ ಸಂಜೆ ಈ ದುರಂತ ಸಂಭವಿಸಿದೆ.ಘಟನೆಯಲ್ಲಿ ಮೋಹಿತ್ (1) ಸಾವನ್ನಪ್ಪಿದ್ದರೆ ಮುನಿರತ್ನಾ (25) ಹಾಗೂ ನಿತ್ಯಾ (3) ಅವರನ್ನು ಗ್ರಾಮಸ್ಥರು ರಕ್ಷಿಸಿ ಸಮೀಪದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಕೌಟುಂಬಿಕ ಕಲಹವೇ ಈ ಘಟನೆಗೆ ಕಾರಣ ಎಂದು ಪೋಲೀಸರು ಶಂಕೆ ವ್ಯಕ್ತಪಡಿಸಿದ್ದು  "ಜಿಗಣಿ ನಿವಾಸಿಯಾದ ಮುನಿರತ್ನಾ ತನ್ನ ಮಕ್ಕಳಾದ ಮೋಹಿತ್ ಹಾಗು ನಿತ್ಯಾ ಜತೆ ಮಂಗಳವಾರ 6  ಗಂಟೆ ಸುಮಾರಿಗೆ ಮಹಂತ ಲಿಂಗಪುರ ಕೆರೆಗೆ ಜಿಗಿದು ಆತ್ಮಹತ್ಯೆಗೆ ಮುಂದಾಗಿದ್ದಾರೆ. ಮಾರ್ಗದಲ್ಲಿ ಸಂಚರಿಸುತ್ತಿದ್ದ ಗ್ರಾಮಸ್ಥರು ಮೂವರು ನೀರಲ್ಲಿ ಮುಳುಗುವುದನ್ನು ಕಂಡು ಕೆಲವರು ನೀರಿಗೆ ಹಾರಿ ಜೀವ ರಕ್ಷಣೆಗೆ ಮುಂದಾಗಿದ್ದಾರೆ.ಅವರು ತಾಯಿ ಮತ್ತು ಮಗಳನ್ನು ರಕ್ಷಿಸುವಲ್ಲಿ ಯಶಸ್ವಿಯಾದರು, ಆದರೆ ಒಂದು ವರ್ಷದ ಮಗು ಮೋಹಿತ್ ಸಾವನ್ನಪ್ಪಿದೆ" ಪೋಲೀಸರು ಮಾಹಿತಿ ನಿಡಿದ್ದಾರೆ.
ಜಿಗಣಿ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

SCROLL FOR NEXT