ವೆಂಕಟನಾರಾಯಣ ಶಾಸ್ತ್ರಿ ಆಸನಗಳು 
ರಾಜ್ಯ

ತುಮಕೂರು: 81 ವರ್ಷದ ವೃದ್ದನಿಂದ ಕಠಿಣ ಯೋಗ ಆಸನಗಳು

ಕಳೆದ 30 ವರ್ಷಗಳಿಂದ ಯೋಗಾಭ್ಯಾಸ ಮಾಡುತ್ತಿರುವ 81 ವರ್ಷದ ಜಿ.ವಿ ವೆಂಕಟನಾರಾಯಣ ಶಾಸ್ತ್ರಿ ಎಷ್ಠೇ ಕಷ್ಟದ ಆಸನಗಳನ್ನು ಸರಾಗವಾಗಿ ...

ತುಮಕೂರು: ಕಳೆದ 30 ವರ್ಷಗಳಿಂದ ಯೋಗಾಭ್ಯಾಸ ಮಾಡುತ್ತಿರುವ  81 ವರ್ಷದ ಜಿ.ವಿ ವೆಂಕಟನಾರಾಯಣ ಶಾಸ್ತ್ರಿ ಎಷ್ಠೇ ಕಷ್ಟದ ಆಸನಗಳನ್ನು ಸರಾಗವಾಗಿ ಮಾಡುತ್ತಾರೆ.
81 ವರ್ಷದ ಶಾಸ್ತ್ರಿ ಬಾಬಾ ರಾಮ್ ದೇವ್ ಅವರಂತೆ ನೌಲಿ,  ಶಿರಶಾಸನ, ಮಯೂರು ಪದ್ಮಾಸನ ಗಳನ್ನು ಸುಲಭವಾಗಿ ಮಾಡುತ್ತಾರೆ. ಇದುವರೆಗೂ ಶಾಸ್ತ್ರಿ ಅವರು ಸಾವಿರಾರು ಮಂದಿಗೆ ಯೋಗ ಕಲಿಸಿದ್ದಾರೆ,
ಮೊಳಕೆ ಕಟ್ಟಿದ ರಾಗಿಯನ್ನು ಹೆಚ್ಚಾಗಿ  ತಿನ್ನುವ ಇವರಿಗೆ ಮೊಳಕೆ ಶಾಸ್ತ್ರಿ ಎಂಬ ಹೆಸರು ಕೂಡ ಇದೆ. 30 ವರ್ಷದವರಾಗಿದ್ದಾಗ ಶಾಸ್ತ್ರಿ ಅವರಿಗೆ ಹೊಟ್ಟೆಯ ಅಲ್ಸರ್ ಸೇರಿದಂತೆ ಹಲವು ಕಾಯಿಲೆಗಳಿಂದ ಬಳಲಿದ್ದರು, ಹಲವು ರೀತಿಯ ಔಷಧಿ ತೆಗೆದುಕೊಂಡರೂ ಪ್ರಯೋಜನವಾಗಲಿಲ್ಲ, ಹೀಗಾಗಿ ಅಂದಿನಿಂದ ಮೊಳಕೆ ರಾಗಿ ಮತ್ತು ಹಣ್ಣು ಹಾಗೂ ಜ್ಯೂಸ್ ಸೇವಿಸಲು ನಿರ್ಧರಿಸಿರು,  ಅದಾದ ನಂತರ ಅಲ್ಲಿಂದ ಇಲ್ಲಿಯವರೆಗೂ ವೈದ್ಯರ ಬಳಿಗೆ ಹೋಗುವ ಪ್ರಮೇಯ ಬರಲಿಲ್ಲ.
ಸೂಕ್ತವಾದ ಪಥ್ಯ ಹಾಗೂ ಯೋಗ ಅಭ್ಯಾಸ ಮಾಡಿದರೇ ಯಾವ ರೋಗವೂ ಹತ್ತಿರ ಸುಳಿಯುವುದಿಲ್ಲ ಎಂದು ಹೇಳಿದ್ದಾರೆ, ತಮ್ಮ ಅನುಭವಗಳನ್ನೆಲ್ಲಾ ಕ್ರೂಢೀಕರಿಸಿ ಇದುವರೆಗೂ 4 ಪುಸ್ತಕಗಳನ್ನು ಬರೆದಿದ್ದಾರೆ, ರೋಗದಿಂದ ಯೋಗದ ಕಡೆಗೆ, ಈ ಪುಸ್ತಕ ಎರಡು ಬಾರಿ  ಮುದ್ರಣ ಕಂಡು ಹಾಟ್ ಕೇಕ್ ನಂತೆ ಮಾರಾಟವಾಯಿತು. ಬಿಎಸ್ ಸಿ ಪದವೀಧರರಾಗಿರುವ ಶಾಸ್ತ್ರಿ ಟೆಲಿಕಾಂ ಇಲಾಖೆಯಲ್ಲಿ ಕೆಲಸ ಮಾಡಿದ್ದರು.
ಮುಂಜಾನೆ 2.30 ಕ್ಕೆ ಹಾಸಿಗೆಯಿಂದ ಏಳುವ ಶಾಸ್ತ್ರಿ ಮೈಗೆಲ್ಲಾ ಕೊಬ್ಬರಿ ಎಣ್ಣೆ ಹಚ್ಚಿ,ಯೋಗಕ್ಕಾಗಿ ತಮ್ಮ ದೇಹ ಸಿದ್ದಪಡಿಸುತ್ತಾರೆ, ಕಾಲಿನ ಬೆರಳುಗಳಿಂದ ಎಣ್ಣೆ ಹಚ್ಚಿಕೊಳ್ಳುವುದರಿಂದ ನನಗೆ ಶೀತ ಆಗುವುದಿಲ್ಲ ಎಂದು ಹೇಳಿದ್ದಾರೆ.
ಇನ್ನೂ ಅಂತರರಾಷ್ಟ್ರೀಯ ಯೋಗದಿನಾಚರಣೆ ಅಂಗವಾಗಿ ಮೈಸೂರಿನ ರೇಸ್ ಕ್ಲಬ್ ರಸ್ತೆಯಲ್ಲಿ ಸಿದ್ದತೆ ನಡೆಸಲಾಗಿದ್ದು, 2 ಗಂಟೆಗಳ ಯೋಗ ಅಭ್ಯಾಸ ನಡೆಯಲಿದೆ 80 ಸಾವಿರ ಯೋಗ ಪಟುಗಳು 47 ಆಸನಗಳನ್ನು ಪ್ರದರ್ಶಿಸಲಿದ್ದಾರೆ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT