ಸಾಂದರ್ಭಿಕ ಚಿತ್ರ 
ರಾಜ್ಯ

ಸಾಕಾರಗೊಳ್ಳುತ್ತಿದೆ 2 ದಶಕಗಳ ಕನಸು: ಶೀಘ್ರವೇ ಹಾಸನ ವಿಮಾನ ನಿಲ್ದಾಣ ನಿರ್ಮಾಣ ಪ್ರಾರಂಭ!

ಸರಿ ಸುಮಾರು 20 ವರ್ಷಗಳ ನಂತರ ಹಾಸನ ವಿಮಾನ ನಿಲ್ದಾಣ ಯೋಜನೆಗೆ ರೆಕ್ಕೆಪುಕ್ಕ ಬಂದಿದೆ. ವಿಮಾನ ನಿಲ್ದಾಣಕ್ಕೆ ಹೆಚ್ಚುವರಿ 200 ಎಕರೆ ಭೂಮಿ...

ಹಾಸನ: ಸರಿ ಸುಮಾರು 20 ವರ್ಷಗಳ ನಂತರ  ಹಾಸನ ವಿಮಾನ ನಿಲ್ದಾಣ ಯೋಜನೆಗೆ ರೆಕ್ಕೆಪುಕ್ಕ ಬಂದಿದೆ. ವಿಮಾನ ನಿಲ್ದಾಣಕ್ಕೆ ಹೆಚ್ಚುವರಿ 200 ಎಕರೆ ಭೂಮಿ ನೀಡುವಂತೆ ಕೇಂದ್ರ ವಿಮಾನಯಾನ ಇಲಾಖೆ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿತ್ತು. ವಿಮಾನ ನಿಲ್ದಾಣಕ್ಕಾಗಿ ಜಿಲ್ಲಾಡಳಿತ 2007 ರಲ್ಲಿ 536 ಎಕರೆ ಭೂಮಿಯನ್ನು ಸ್ವಾದೀನ ಪಡಿಸಿಕೊಂಡಿತ್ತು.
ಹಾಸನ ವಿಮಾನ ನಿಲ್ದಾಣ ಯೋಜನೆ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರ ಕನಸಿನ ಕೂಸಾಗಿದೆ.  ಒಂದೂವರೆ ದಶಕದ ಹಿಂದೆ  ವಿಮಾನ ನಿಲ್ದಾಣ ನಿರ್ಮಾಣಕ್ಕಾಗಿ ಭೂವನಹಳ್ಳಿ ಬಳಿ ಶಂಕು ಸ್ಥಾಪನೆ ನೆರವೇರಿಸಲಾಗಿತ್ತು. 
ವಿಮಾನ ನಿಲ್ದಾಣಗಳ ಪ್ರಾಧಿಕಾರದ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿ ,ಕೆಲವು ತಾಂತ್ರಿಕ ಕಾರಣಗಳನ್ನು ನೀಡಿ ಯೋಜನೆಗೆ ಅನುಮೋದನೆ ನೀಡಲು ನಿರಾಕರಿಸಿತ್ತು.
ನಂತರ ರಾಜ್ಯ ಸರ್ಕಾರವೇ ವಿಮಾನ ನಿಲ್ದಾಣ ನಿರ್ಮಾಣ ಮಾಡಲು ನಿರ್ಧರಿಸಿತ್ತು.
2016 ರಲ್ಲಿ ಜಿಲ್ಲಾಧಿಕಾರಿ ಅನ್ಬುಕುಮಾರ್ ಕಂದಾಯ ಅಧಿಕಾರಿಗಳು ಮತ್ತು ಭೂ ಮಾಲೀಕರ ಜೊತೆ ಸಭೆ ನಡೆಸಿ ಹೆಚ್ಚುವರಿ ಭೂಮಿಗೆ ಉತ್ತಮ ಪರಿಹಾರ ನೀಡುವುದಾಗಿ ಘೋಷಿಸಿದ್ದರು, ಜೊತೆಗೆ ಭುವನಹಳ್ಳಿ,  ಸಂಕೇನಹಳ್ಳಿ,  ಲಕ್ಷ್ಮಿ ಸಾಗರ,  ತಿಂಡೆಹಳ್ಳಿ,  ದವಲಾಪುರ ಗ್ರಾಮಸ್ಥರಿಗೆ  ನೋಟಿಸ್ ನೀಡಲಾಗಿತ್ತು,
ಒಂದು ವೇಳೆ ರಾಜಕಾರಣಿಗಳು ಬದ್ಧತೆ ತೋರಿದ್ದರೇ  ದಶಕದ ಹಿಂದೆಯೇ ವಿಮಾನ ನಿಲ್ದಾಣ ಯೋಜನೆ ಸಾಕಾರಗೊಳ್ಳುತ್ತಿತ್ತು.  7 ಗ್ರಾಮಗಳಿಂದ ರಾಜ್ಯ ಸರ್ಕಾರ 536 ಎಕರೆ ಭೂಮಿಯನ್ನು ಸ್ವಾಧೀನ ಪಡಿಸಿಕೊಂಡಿತ್ತು.  ಉತ್ತಮ ಪರಿಹಾರ ಹಣ ಹಾಗೂ ವಿಮಾನ ನಿಲ್ದಾಣ ನಿರ್ಮಾಣದ ನಂತರ ಪ್ರತಿ ಮನೆಗೆ ಒಬ್ಬರಿಗೆ ಕೆಲಸ ನೀಡಿದರೇ ತಮ್ಮ ಭೂಮಿ ಕೊಡಲು ರೈತರು ಮುಂದಾಗಿದ್ದರು. 
200 ಎಕರೆ ಹೆಚ್ಚುವರಿ ಭೂಮಿ ಸ್ವಾದೀನಕ್ಕೆ ಕ್ರಮ ಕೈಗೊಳ್ಳಲಾಗಿದೆ,  ಅಗತ್ಯ ವಿರುವ ಭೂಮಿಯನ್ನು ರಾಜ್ಯ ಸರ್ಕಾರ ನೀಡಿದ ಕೂಡಲೇ ನಿರ್ಮಾಣ ಕೆಲಸ ಆರಂಭಿಸುವುದಾಗಿ ಜ್ಯೂಪಿಟರ್ ಏವಿಯೇಷನ್ ಮುಖ್ಯ ಎಂಜಿನೀಯರ್  ಸಿದ್ದಾರ್ಥ್ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

SCROLL FOR NEXT