ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಪತ್ನಿಗೆ ಗುಂಡಿಟ್ಟು ಕೊಂದು 3 ಮಕ್ಕಳೊಂದಿಗೆ ಉದ್ಯಮಿ ಪರಾರಿ

ಉದ್ಯಮಿಯೊಬ್ಬ ತನ್ನ ಹೆಂಡತಿ ಎದೆಗೆ ಗುಂಡು ಹಾರಿಸಿ ಕೊಂದು ಮೂವರು ಮಕ್ಕಳೊಂದಿಗೆ ಪರಾರಿಯಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ....

ಬೆಂಗಳೂರು: ಉದ್ಯಮಿಯೊಬ್ಬ ತನ್ನ ಹೆಂಡತಿ ಎದೆಗೆ ಗುಂಡು ಹಾರಿಸಿ ಕೊಂದು ಮೂವರು ಮಕ್ಕಳೊಂದಿಗೆ ಪರಾರಿಯಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಜಯನಗರದ ನಾಲ್ಕನೆ ಬ್ಲಾಕ್‍ನಲ್ಲಿ ಕಳೆದ ರಾತ್ರಿ ಉದ್ಯಮಿ ಗಣೇಶ್ ಎಂಬಾತ ತನ್ನ ಪತ್ನಿ ಸಹನಾ ಅವರನ್ನು ಗುಂಡಿಟ್ಟು ಹತ್ಯೆ ಮಾಡಿ ಪರಾರಿಯಾಗಿದ್ದಾನೆ.
ಕನಕಪುರ ರಸ್ತೆಯಲ್ಲಿರುವ ಪ್ರತಿಷ್ಠಿತ ರೆಸಾರ್ಟ್ ಮಾಲೀಕನಾಗಿರುವ ಆರೋಪಿ‌ ಗಣೇಶ್, ರಿಯಲ್ ಎಸ್ಟೇಟ್ ಮತ್ತು ಸಕಲೇಶಪುರದಲ್ಲಿ ಬಿಸಿನೆಸ್ ಹೊಂದಿದ್ದ. ಹಣಕಾಸು ವಿಚಾರವಾಗಿ ಕ್ಯಾತೆ ತೆಗೆದು ಪತ್ನಿ ‌ಸಹನಾ ಎದೆಗೆ ಒಂದು ಸುತ್ತು ಗುಂಡು ಹಾರಿಸಿ‌ ಹತ್ಯೆ ಮಾಡಿದ್ದಾನೆ. 
ಗಣೇಶ್ ಹಾಗೂ ಸಹನಾ ದಂಪತಿಗೆ ಇಬ್ಬರು ಮಕ್ಕಳಿದ್ದು, ಓರ್ವ ಮಗುವನ್ನು ಇತ್ತೀಚೆಗೆ ದತ್ತು ಪಡೆದಿದ್ದರು.
ಆರೋಪಿ ಗಣೇಶ್​ ಪತ್ತೆಗಾಗಿ ಪೊಲೀಸರು ತೀವ್ರ ತನಿಖೆ ಕೈಗೊಂಡಿದ್ದು, ಆರೋಪಿ ಬಳಿಯಿದ್ದ ವೆಪನ್​ ಲೈಸೆನ್ಸ್  ಕುರಿತಂತೆ ತನಿಖೆ ಕೈಗೊಂಡಿದ್ದಾರೆ. ಸ್ಥಳಕ್ಕೆ ಶ್ವಾನದಳ ಮತ್ತು ವಿಧಿವ ವಿಜ್ಞಾನ ಪ್ರಯೋಗಾಲಯ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆರೋಪಿ ಪತ್ತೆಗೆ ಬಲೆ ಬೀಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ; Indian Army ಹೆಲಿಕಾಪ್ಟರ್ ರೋಚಕ ಕಾರ್ಯಾಚರಣೆ! Video

ಡಿ ಕೆ ಶಿವಕುಮಾರ್ ಹಿಂದೂ ಜನರ ಭಾವನೆಗಳಿಗೆ ನೋವುಂಟುಮಾಡಿದ್ದು ಕ್ಷಮೆಯಾಚಿಸಬೇಕು: ಶೋಭಾ ಕರಂದ್ಲಾಜೆ

Tamil Nadu: ನಟ-ರಾಜಕಾರಣಿ ದಳಪತಿ ವಿಜಯ್ ಬೌನ್ಸರ್ ಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ! ಕೇಸ್ ದಾಖಲು, ವಿಡಿಯೋದಲ್ಲಿ ಏನಿದೆ?

SCROLL FOR NEXT