ಪ್ರಿಯಾಂಕ್ ಖರ್ಗೆ 
ರಾಜ್ಯ

ರಾಜ್ಯ ಸರ್ಕಾರದಿಂದ ಹಳ್ಳಿಗಳಲ್ಲಿ ಮಿನಿ ಸೂಪರ್ ಮಾರ್ಕೆಟ್ ಆರಂಭ

ಗ್ರಾಮೀಣ ಪ್ರದೇಶದ ಯುವಕರಿಗೆ ಉದ್ಯೋಗ ಕಲ್ಪಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ರಾಜ್ಯಾದ್ಯಂತ ಹಳ್ಳಿಗಳಲ್ಲಿ...

ಬೆಂಗಳೂರ: ಗ್ರಾಮೀಣ ಪ್ರದೇಶದ ಯುವಕರಿಗೆ ಉದ್ಯೋಗ ಕಲ್ಪಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ರಾಜ್ಯಾದ್ಯಂತ ಹಳ್ಳಿಗಳಲ್ಲಿ ಮಿನಿ ಸೂಪರ್ ಮಾರ್ಕೆಟ್ ಆರಂಭಿಸಲು ಮುಂದಾಗಿದೆ.
ಹಳ್ಳಿಗಳಲ್ಲಿ ಮಿನಿ ಸೂಪರ್ ಮಾರ್ಕೆಟ್ ಆರಂಭಿಸಲು ಸರ್ಕಾರ ಸದ್ಯ 5 ಸಾವಿರ ಗ್ರಾಮೀಣ ಉದ್ಯಮಿಗಳನ್ನು ಟಾರ್ಗೆಟ್ ಮಾಡುತ್ತಿದ್ದು, ಪ್ರತಿ ಜಿಲ್ಲೆಯಲ್ಲೂ 200 ಮಿನಿ ಸೂಪರ್ ಮಾರ್ಕೆಟ್ ಗಳನ್ನು ಆರಂಭಿಸುವ ಯೋಚನೆ ಇದೆ. ಈ ಸಂಬಂಧ ಶೀಘ್ರದಲ್ಲೇ ಅರ್ಜಿಗಳನ್ನು ಆಹ್ವಾನಿಸಲಾಗುವುದು ಎಂದು ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ್ ಖರ್ಗೆ ಅವರು ಇಂಡಿಯನ್ ಎಕ್ಸ್ ಪ್ರೆಸ್ ಗೆ ತಿಳಿಸಿದ್ದಾರೆ.
ಉತ್ಪನ್ನಗಳ ಖರೀದಿಗೆ ರಾಜ್ಯ ಸರ್ಕಾರ ಯಾವುದೇ ಹಣಕಾಸಿನ ನೆರವು ನೀಡುವುದಿಲ್ಲ. ಆದರೆ ಗ್ರಾಮೀಣ ಯುವಕರ ಮತ್ತು ಕಂಪನಿಗಳ ನಡುವೆ ಸೇತುವೆಯಾಗಿ ಕೆಲಸ ಮಾಡಲಿದೆ ಎಂದು ಸಚಿವರು ತಿಳಿಸಿದ್ದಾರೆ.
ಈ ಸಂಬಂಧ ಸಮಾಜ ಕಲ್ಯಾಣ ಇಲಾಖೆ ಪ್ರಮುಖ ಉತ್ಪನ್ನ ತಯಾರಿಕಾ ಕಂಪನಿಗಳೊಂದಿಗೆ ಒಪ್ಪಂದ ಮಾಡಿಕೊಳ್ಳಲಿದೆ. ಮಿನಿ ಸೂಪರ್ ಮಾರ್ಕೆಟ್ ಗಳಲ್ಲಿ ಸೋಪ್ಸ್, ಟೂತ್ ಪೇಸ್ಟ್, ಪ್ಯಾಕೇಜಡ್ ಫೂಡ್ಸ್, ಬಿಸ್ಕಿಟ್ಸ್, ಹಾಲು ಉತ್ಪನ್ನ ಮತ್ತು ತರಕಾರಿ ಸೇರಿದಂತೆ ನಿತ್ಯ ಬಳಕೆಯ ಎಲ್ಲಾ ವಸ್ತುಗಳು ಸಿಗಲಿವೆ. ಸಬ್ಸಿಡಿ ದರದಲ್ಲಿ ಉತ್ಪನ್ನಗಳನ್ನು ಸರಬರಾಜು ಮಾಡುವ ಕಂಪನಿಗಳೊಂದಿಗೆ ನಾವು ಮಾತುಕತೆ ನಡೆಸುತ್ತಿದ್ದೇವೆ. ಇದರಿಂದ ಸಣ್ಣ ಉದ್ಯಮಿಗಳಿಗೆ ಮತ್ತು ಹಳ್ಳಿ ಯುವಕರಿಗೆ ಸಹಾಯವಾಗಲಿದೆ ಎಂದು ಖರ್ಗೆ ಹೇಳಿದ್ದಾರೆ.
ಸದ್ಯ ಗ್ರಾಮೀಣ ಪ್ರದೇಶದ ಜನ ಪ್ರತಿಯೊಂದಕ್ಕೂ ಸಮೀಪದ ಪಟ್ಟಣಗಳಿಗೆ ಹೋಗುತ್ತಿದ್ದಾರೆ. ಈ ಮಿನಿ ಸೂಪರ್ ಮಾರ್ಕೆಟ್ ಆರಂಭಿಸುವುದರಿಂದ ಅಗತ್ಯ ವಸ್ತುಗಳು ದೊರೆಯುವಂತಾಗುತ್ತದೆ ಎಂದಿದ್ದಾರೆ.
ಮಿನಿ ಸೂಪರ್ ಮಾರ್ಕೆಟ್ ಆರಂಭಿಸುವ ಕಂಪನಿಗಳಿಗೆ ರಾಜ್ಯ ಸರ್ಕಾರ ಸಹಾಯ ಮಾಡಲಿದೆ. ಇವು ನಗರದ ಪ್ರದೇಶದಲ್ಲಿರುವಷ್ಟು ದೊಡ್ಡದಾಗಿರುವುದಿಲ್ಲ. ಒಂದು ಸಣ್ಣ ಕೋಣೆ ಅಥವಾ ಕಟ್ಟಡಲ್ಲೂ ಮಿನಿ ಸೂಪರ್ ಮಾರ್ಕೆಟ್ ಆರಂಭಿಸಬಹುದಾಗಿದೆ ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West Asia crisis ಕುರಿತು ಸರ್ವಪಕ್ಷ ಸಭೆ: 'ಪ್ರಧಾನಿ ಭಾಗವಹಿಸಬೇಕು'; ಪ್ರತಿಪಕ್ಷ, ಬಿಜೆಪಿ ನಡುವೆ ವಾಗ್ವಾದ

ಪೆಟ್ರೋಲ್, ಡೀಸೆಲ್ ಕೊರತೆ ಇಲ್ಲ, ಭೀತಿಯಿಂದ ಹೆಚ್ಚು ಖರೀದಿಸಬೇಡಿ: ಜನತೆಗೆ ತೈಲ ಕಂಪನಿಗಳು ಮನವಿ

PNG ಗೆ ಬದಲಾಯಿಸಲು ನಿರಾಕರಿಸುವ ಮನೆಗಳಿಗೆ ಎಲ್‌ಪಿಜಿ ಪೂರೈಕೆ ನಿಲ್ಲಿಸಲು ಸರ್ಕಾರದ ನಿರ್ಧಾರ

West Asia Conflict: ಮಧ್ಯಪ್ರಾಚ್ಯ ಉದ್ವಿಗ್ನತೆ ಕಡಿಮೆ ಮಾಡಲು 'ವಿಶ್ವಾಸಾರ್ಹ' ಭಾರತದಿಂದ ಸಾಧ್ಯ; ಇರಾನ್ ರಾಯಭಾರಿ

ತಮಿಳುನಾಡು ಚುನಾವಣೆಯಿಂದ ಕಮಲ ಹಾಸನ್ ಪಕ್ಷ MNM ಹೊರಕ್ಕೆ: ಕಾರಣ DMK!

SCROLL FOR NEXT