ರಾಜ್ಯ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್
ಹುಬ್ಬಳ್ಳಿ: ಕೇಂದ್ರ ಸರ್ಕಾರ ರಚಿಸಿರುವ ಕಾವೇರಿ ನಿರ್ವಹಣಾ ಸಮಿತಿಯ ಬಗ್ಗೆ ರಾಜ್ಯ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಕಾವೇರಿ ನದಿ ನೀರು ಹಂಚಿಕೆ ಸಂಬಂಧ ಕಾವೇರಿ ಜಲ ನಿರ್ವಹಣಾ ಪ್ರಾಧಿಕಾರ ಹಾಗೂ ಕಾವೇರಿ ನೀರು ನಿರ್ವಹಣಾ ಸಮಿತಿ ರಚನೆ ಮಾಡಿರುವ ಕೇಂದ್ರ ಸರ್ಕಾರದ ನಿರ್ಧಾರ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಅವರು, ನೆರೆ ರಾಜ್ಯದ ಒತ್ತಡಕ್ಕೆ ಮಣಿದಿರುವ ಕೇಂದ್ರ ಸರ್ಕಾರ ರಾಜ್ಯದ ಹಿತವನ್ನು ಕಡೆಗಣಿಸಿ ಏಕಮುಖ ತೀರ್ಮಾನವನ್ನು ಕೈಗೊಂಡಿದೆ ಎಂದು ಆರೋಪಿಸಿದ್ದಾರೆ.
ನಮಗೆ ರಾಜ್ಯದ ರೈತರ ಹಾಗೂ ಬೆಂಗಳೂರಿನ ಹಿತ ಮುಖ್ಯವಾಗಿದ್ದು, ಕೇಂದ್ರದ ಈ ನಡೆಯ ಬಗ್ಗೆ ಶೀಘ್ರದಲ್ಲಿಯೇ ಚರ್ಚೆ ನಡೆಸಿ ನಮ್ಮ ಮುಂದಿನ ನಡೆಯನ್ನು ತಿಳಿಸುತ್ತೇವೆ ಎಂದು ಹೇಳಿದ್ದಾರೆ.
ಸಮಿತಿ ರಚನೆ ಮಾಡುವಂತೆ ನ್ಯಾಯಾಲಯದ ಆದೇಶಕ್ಕೆ ನಾವು ತಲೆ ಬಾಗುತ್ತೇವೆ. ಆದರೆ, ಸಮಿತಿ ರಚನೆಗೂ ಮುನ್ನ ನಮಗೆ ಮಾಹಿತಿ ನೀಡಬೇಕಿತ್ತು. ಆ ಕೆಲಸವನ್ನು ಕೇಂದ್ರ ಸರ್ಕಾರ ಮಾಡಿಯೇ ಇಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos