ಬೆಂಗಳೂರು; ರಾಜ್ಯದ ಹಿತಾಸಕ್ತಿಗಳನ್ನು ಕಡೆಗಣಿಸಿ ಕಾವೇರಿ ಜಲ ನಿರ್ವಹಣಾ ಪ್ರಾಧಿಕಾರ ಹಾಗೂ ಕಾವೇರಿ ನೀರು ನಿಯಂತ್ರಣ ಸಮಿತಿ ರಚನೆಯ ಮಾಡಿರುವ ಕೇಂದ್ರ ಸರ್ಕಾರದ ವಿರುದ್ಧ ರಾಜ್ಯದ ರೈತರು ತೀವ್ರ ಕೆಂಡಾಮಂಡಲಗೊಂಡಿದ್ದಾರೆ.
ಕಾವೇರಿ ನಿರ್ವಹಣಾ ಮಂಡಳಿ ರಚನೆ ಕುರಿತಂತೆ ರಾಜ್ಯವನ್ನು ಸಂಪರ್ಕಿಸಿದಯೇ, ಮಂಡಳಿಯಲ್ಲಿ ರಾಜ್ಯಪರ ಪ್ರತಿನಿಧಿಯೊಬ್ಬರನ್ನು ನೇಮಕ ಮಾಡದೆಯೇ ಕೇಂದ್ರ ಸರ್ಕಾರ ನಿರ್ವಹಣಾ ಮಂಡಳಿಯನ್ನು ರಚನೆ ಮಾಡಿದ್ದು, ಇದು ರಾಜ್ಯದ ರೈತರ ಹಿತಾಸಕ್ತಿ ಕಾಪಾಡುವುದರ ಕುರಿತಂತೆ ಹಲವು ಸಂಶಯಗಳನ್ನು ಮೂಡುವಂತೆ ಮಾಡಿವೆ.
ಕಾವೇರಿ ನಿರ್ವಹಣಾ ಮಂಡಳಿ ರಚನೆ ಕುರಿತಂತೆ ರಾಜ್ಯ ಸರ್ಕಾರ ಹಲವು ಸಲಹೆ ನೀಡಿತ್ತು. ಈ ಬಗ್ಗೆ ಸಂಸತ್ತಿನಲ್ಲಿ ಚರ್ಚೆ ನಡೆಸಬೇಕೆಂದು ಕೂಡ ಮನವಿ ಮಾಡಿಕೊಂಡಿತ್ತು. ಕಾವೇರಿ ವಿವಾದ ಅತ್ಯಂತ ಸೂಕ್ಷ್ಮ ವಿಚಾರವಾಗಿದ್ದು, ಇದು ಎರಡು ರಾಜ್ಯಗಳ ಹಿತಾಸಕ್ತಿಗಳ ಮೇಲೆ ಗಂಭೀರ ಪರಿಣಾಮ ಬೀರಲಿದೆ. ಈಗಾಗಲೇ ರೈತರು ಪ್ರತೀ 10 ದಿನಗಳಿಗೊಮ್ಮೆ ನದಿಯ ಒಳ ಹಾಗೂ ಹೊರ ಹರಿವಿನ ನೀರನ್ನು ಪರಿಶೀಲನೆ ನಡೆಸಿ ಕಾಲುವೆಗಳಿಗೆ ನೀರು ಹರಿಸುತ್ತಿರುವ ಸಮಿತಿಯ ವಿರುದ್ಧ ವಿರೋಧ ವ್ಯಕ್ತಪಡಿಸುತ್ತಿದ್ದು, ಪ್ರಸ್ತುತ ನಿರ್ವಹಣಾ ಮಂಡಳಿ ರಚನೆಯಲ್ಲಿರುವ ನಿಯಮಗಳನ್ನು ಸಂಪೂರ್ಣವಾಗಿ ತಿಳಿದುಕೊಳ್ಳಲು ರಾಜ್ಯದ ರೈತರು ಯತ್ನಗಳನ್ನು ನಡೆಸುತ್ತಿದ್ದಾರೆ. ನಿಯಮಗಳ ಕುರಿತು ಸಂಪೂರ್ಣ ಮಾಹಿತಿ ತಿಳಿದ ಬಳಿಕ ಮುಂದಿನ ನಡೆಗಳನ್ನು ರೈತರು ಕೈಗೊಳ್ಳಲಿದ್ದಾರೆಂದು ಹೇಳಲಾಗುತ್ತಿದೆ.
ಅಧಿಕಾರಿಗಳು ಪರಿಶೀಲನೆ ನಡೆಸುತ್ತಿರುವುದು ಸ್ಥಳೀಯ ರೈತರ ಹಕ್ಕುಗಳಿಗೆ ಧಕ್ಕೆಯುಂಟು ಮಾಡಿದಂತಾಗುತ್ತಿದೆ ಎಂದು ರೈತರ ಸ್ವಾಮಿ ಎಂಬುವವರು ಹೇಳಿದ್ದಾರೆ.
ಬೇಸಿಗೆ ಸಂದರ್ಭದಲ್ಲಿ ಕುಡಿಯುವ ನೀರಿನ ಅಗತ್ಯಗಳು ಎದುರಾಗಲಿದ್ದು, ಈ ವೇಳೆ ನಾವೇಕೆ ಮಂಡಳಿ ಮೊರೆ ಹೋಗಬೇಕು? ಎಂದು ಪ್ರಶ್ನಿಸಿದ್ದಾರೆ,
ರೈತ ಹಿತರಕ್ಷಣಾ ಸಮಿತಿ ಅಧ್ಯಕ್ಷ ಹಾಗೂ ಮಾಜಿ ಸಂಸದ ಮಾದೇಗೌಡ ಅವರು ಮಾತನಾಡಿ, ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ ಆದೇಶವನ್ನು ಪಾಲಿಸಲಿದೆ ಎಂದು ಹೇಳಿದ್ದಾರೆ.
ಸಮಿತಿಗೆ ಪ್ರತಿನಿಧಿಯನ್ನು ನೇಮಿಸುವುದರ ಕುರಿತಂತೆ ರಾಜ್ಯ ಸರ್ಕಾರ ನೀರಾವರಿ ತಜ್ಞರ ಸಲಹೆಗಳನ್ನು ಪಡೆದುಕೊಳ್ಳಬೇಕು. ಸಮಿತಿಯ ಪ್ರಧಾನ ಕಚೇರಿ ಬೆಂಗಳೂರಿನಲ್ಲಿಯೇ ಇರಬೇಕಿತ್ತು ಎಂದು ತಿಳಿಸಿದ್ದಾರೆ.
ಕೊಡಗು ಜಿಲ್ಲೆಯಲ್ಲಿ ಈ ಬಾಗಿ ಉತ್ತಮ ಮಳೆಯಾಗಿದ್ದು, ರಾಜ್ಯ ಹಲವು ಜಾಲಾಷಯಗಳು ತುಂಬಿ ಹರಿಯುತ್ತಿವೆ. ಈ ನಡುವಲ್ಲೇ, ಸಿಎಂ ಕುಮಾರಸ್ವಾಮಿಯವರು ಕೃಷಿಗೆ ನೀರು ಹರಿಸಿರುವುದರ ಹಿನ್ನಲೆಯಲ್ಲಿ ಮುಖ್ಯಮಂತ್ರಿಗಳನ್ನು ರೈತರು ಪ್ರಶಂಸಿಸುತ್ತಿದ್ದಾರೆ.