ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ಸಂಬಂಧ ಕಾವೇರಿ ಜಲ ನಿರ್ವಹಣಾ ಪ್ರಾಧಿಕಾರ ಹಾಗೂ ಕಾವೇರಿ ನೀರು ನಿರ್ವಹಣಾ ಸಮಿತಿ ರಚನೆ ಮಾಡಿರುವ ಕೇಂದ್ರ ಸರ್ಕಾರದ ವಿರುದ್ಧ ರಾಜ್ಯ ಸರ್ಕಾರ ತೀವ್ರವಾಗಿ ಕಿಡಿಕಾರಿದೆ.
ರಾಜ್ಯ ಸರ್ಕಾರದ ನಿಲುವನ್ನು ಪತ್ರದ ಮೂಲಕ ತಿಳಿಸಲು ಮುಂದಾಗಿರುವ ಕುಮಾರಸ್ವಾಮಿಯವರು, ರಾಜ್ಯ ಸರ್ಕಾರವು ಸುಪ್ರೀಂಕೋರ್ಟ್ ಹಾಗೂ ನ್ಯಾಯಾಧೀಕರಣದ ಆದೇಶಗಳ ಅನ್ವಯ ಸಮರ್ಪಕವಾಗಿ ನೀರು ಬಿಡುಗಡೆ ಮಾಡುತ್ತಿದೆ. ನೀರು ಲಭ್ಯತೆಯಿದ್ದಾಗಲೆಲ್ಲಾ ನ್ಯಾಯಯುತವಾಗಿ ತಮಿಳುನಾಡು ಸೇರಿದಂತೆ ಇತರೆ ರಾಜ್ಯಗಳಿಗೆ ಬಿಡುಗಡೆಯಾಗಬೇಕಿರುವ ನೀರು ಬಿಡುಗಡೆ ಮಾಡಿದ್ದೇವೆ.
ಆದಾಗ್ಯೂ ಪ್ರಾಧಿಕಾರ ರಚನೆಯಿಂದಾಗಿ ನೀಲು ಲಭ್ಯವಿಲ್ಲದಿದ್ದಗಲೂ ಬಿಡುಗಡೆ ಮಾಡುವಂತೆ ಒತ್ತಾಯ ಹೇರಬಹುದಾದ ಸಾಧ್ಯತೆಗಳಿವೆ. ಹೀಗಾಗಿ ಪ್ರಾಧಿಕಾರ ರಚನೆ ವಿಚಾರವನ್ನು ಪರಿಶೀಲಿಸಬೇಕು ಎಂದು ಮನವಿ ಮಾಡಿಕೊಳ್ಳುತ್ತೇನೆಂದು ಹೇಳಿದ್ದಾರೆ.
ಇದರ ಜೊತೆಗೆ, ಈ ವಿಚಾರವಾಗಿ ಗಂಭೀರವಾಗಿ ಚರ್ಚೆ ನಡೆಯಬೇಕಾಗಿದೆ. ಹೀಗಾಗಿ ಲೋಕಸಭೆಯಲ್ಲಿ ಚರ್ಚೆ ಮಾಡಲು ಅವಕಾಶ ನೀಡಲೇಬೇಕು ಎಂಬುದು ಕರ್ನಾಟಕ ರಾಜ್ಯದ ನಿಲುವು ಎಂದು ಪತ್ರದ ಮೂಲಕ ಕೇಂದ್ರಕ್ಕೆ ತಿಳಿಸಲಾಗುವುದು ಎಂದು ಮೂಲಗಳು ಮಾಹಿತಿ ನೀಡಿವೆ.
ರಾಜ್ಯದಿಂದ ಕೆಲವೊಂದು ಸಲಹೆಗಳನ್ನು ನೀಡಲಾಗಿತ್ತು. ಆ ಚರ್ಚೆ ಚರ್ಚಿಸಬೇಕು ಎಂದು ಪ್ರಧಾನಿ ಮೋದಿಯವರ ಬಳಿ ಮನವಿ ಮಾಡಲಾಗಿತ್ತು. ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ ರಚನೆಯಿಂದ ರಾಜ್ಯಕ್ಕೆ ಅನ್ಯಾಯವಾಗಿದೆ. ಈ ನಿರ್ಧಾರವನ್ನು ಮರು ಪರಿಶೀಲಿಸುವಂತೆ ಕೇಂದ್ರಕ್ಕೆ ಮನವಿ ಮಾಡಿಕೊಳ್ಳಲಾಗುತ್ತದೆ.
ರಾಜ್ಯವನ್ನು ಹೊರತುಪಡಿಸಿ, ಪ್ರಾಧಿಕಾರಿ ರಚನೆ ಮಾಡಿರುವ ವಿಷಯ ತಿಳಿದ ಕೂಡಲೇ ನೀರಾವರಿ ತಜ್ಞರ ಸಲಹೆಗಳನ್ನು ಪಡೆದುಕೊಳ್ಳಲಾಗಿದೆ. ಪ್ರಾಧಿಕಾರ ರಚನೆ ಕುರಿತು ಕೇಂದ್ರ ಜಲ ಸಂಪನ್ಮೂಲ ಸಚಿವ ನಿತಿನ್ ಗಡ್ಕರಿಯವರನ್ನು ಸಂಪರ್ಕಿಸಿ ಚರ್ಚಿಸಲಾಗಿದೆ. 15 ದಿನದೊಳಗೆ ತಮ್ಮನ್ನು ಭೇಟಿಗೆ ಅವಕಾಶ ಮಾಡಿಕೊಡುವ ಆಶ್ವಾಸನೆಯನ್ನು ಗಡ್ಕರಿಯವರು ನೀಡಿದ್ದಾರೆಂದು ತಿಳಿಸಿದ್ದಾರೆ.
ಜನರು ಸಂಕಷ್ಟದಲ್ಲಿದ್ದರೂ ರಾಜ್ಯ ಸರ್ಕಾರ ಕಾನೂನು ಉಲ್ಲಂಘಿಸಿಲ್ಲ, ಇದನ್ನೇ ನಮ್ಮ ದುರ್ಬಲವೆಂದು ತಿಳಿಯಬಾರದು ಎಂದಿದ್ದಾರೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos