ಮಲ್ಲಳ್ಳಿ ಜಲಪಾತ 
ರಾಜ್ಯ

ಮಡಿಕೇರಿ: ಜಲಪಾತದ ಬಳಿ ಸೆಲ್ಫಿ ತೆಗೆಯಲು ಹೋದ ಯುವಕ ನೀರುಪಾಲು

ಮೊಬೈಲ್ ನಲ್ಲಿ ಸೆಲ್ಫಿ ತೆಗೆದುಕೊಳ್ಳ ಹೋಗಿ ಕಾಲು ಜಾರಿ ಬಿದ್ದು ಯುವಕನೊಬ್ಬ ನೀರುಪಾಲಾದ ಘಟನೆ ಕೊಡಗು ಜಿಲ್ಲೆಯಲ್ಲಿ ಸಂಭವಿಸಿದೆ.

ಮಡಿಕೇರಿ: ಮೊಬೈಲ್ ನಲ್ಲಿ ಸೆಲ್ಫಿ ತೆಗೆದುಕೊಳ್ಳ ಹೋಗಿ ಕಾಲು ಜಾರಿ ಬಿದ್ದು ಯುವಕನೊಬ್ಬ ನೀರುಪಾಲಾದ ಘಟನೆ ಕೊಡಗು ಜಿಲ್ಲೆಯಲ್ಲಿ ಸಂಭವಿಸಿದೆ.
ಕೊಡಗಿನ ಸೋಮವಾರಪೇಟೆ ಪ್ರಸಿದ್ದ ಮಲ್ಲಳ್ಳಿ ಜಲಪಾತದ ಸಮೀಪ ಸೆಲ್ಫಿ ತೆಗೆದುಕೊಳ್ಳಲು ಮುಂದಾದ  ಮನೋಜ್ (24) ಎನ್ನುವಾತ ಸಾವನ್ನಪ್ಪಿದ್ದಾನೆ.
ಸೋಮವಾರಪೇಟೆ ತಾಲೂಕಿನ ಕುಶಾಲನಗರ ಸಮೀಪದ ಕೂಡಿಗೆ ಗ್ರಾಮದ ನಿವಾಸಿಯಾದ ಈತ  ಶುಕ್ರವಾರ  ತನ್ನ ಆರು ಸ್ನೇಹಿತರೊಡನೆ ಮದುವೆ ಕಾರ್ಯಕ್ರಮಕ್ಕೆ ತೆರಳಿದ್ದ.  ಕಾರ್ಯಕ್ರಮ ಮುಗಿಸಿ ಹಿಂತಿರುಗುವಾಗ ಜಲಪಾತ ವೀಕ್ಷಣೆಗೆ ಆಗಮಿಸಿದ್ದಾರೆ. ಮಳೆಯ ಕಾರಣ ಜಲಪಾತದಲ್ಲಿ ನೀರು ಅಧಿಕವಾಗಿದ್ದು ಜಲಪಾತದ ಸೌಂದರ್ಯ ಮನಸೂರೆಗೊಳ್ಳುವಂತಿತ್ತು.
ಜಲರಾಶಿಯ ಸೌಂದರ್ಯವನ್ನು ಮೊಬೈಲ್ ನಲ್ಲಿ ಸೆರೆ ಹಿಡಿಯಲು ಮುಂದಾದ ಮನೋಜ್ ಸ್ನೇಹಿತರ ಮಾತು ಕೇಳದೆ ನೀರಿನ ಸಮೀಪಕ್ಕೆ ತೆರಳಿದ್ದಾನೆ.ಹಾಗೆ ತೆರಳಿದ್ದಾಗ ಕಾಲು ಜಾರಿ ನೀರಿಗೆ ಬಿದ್ದಿದ್ದು ಆತನ ದೇಹ ಕಾಣೆಯಾಗಿತ್ತು.
ವಿಚಾರ ತಿಳಿದ ಅಗ್ನಿಶಾಮಕ ಪಡೆ ಘಟನಾ ಸ್ಥಳಕ್ಕೆ ಆಗಮಿಸಿ ಶೋಧ ಕಾರ್ಯಾಚರಣೆ ನಡೆಸಿದ್ದರೂ ಸಹ ಮಳೆ, ನೀರಿನ ರಭಸದ ಪರಿಣಾಮ ನಾಲ್ಕು ಗಂಟೆಗಳ ಶೋಧಕಾರ್ಯ ಕೈಗೂಡಲಿಲ್ಲ.
ಮನೋಜ್ ಪೋಷಕರು ಸ್ಥಳಕ್ಕೆ ಆಗಮಿಸಿದ್ದು ಅವರ ಆಕ್ರಂದನ ಮುಗಿಲು ಮುಟ್ಟಿದೆ.
"ನೀರಿನ ರಭಸ ಅಧಿಕವಾಗಿದ್ದು ಶವ ಇರುವ ಜಾಗ ಪತ್ತೆ ಮಾಡುವುದು ಅಸಾಧ್ಯವಾಗಿದೆ.ನೀರು ಕಡಿಮೆಯಾದ ಪಕ್ಷದಲ್ಲಿ ಕಾರ್ಯಾಚರಣೆ ಮುಂದುವರಿಸಬಹುದು" ಎಂದು ಠಾಣಾಧಿಕಾರಿ ಶಿವಣ್ಣ ಹೇಳಿದ್ದಾರೆ.
ಅಪಾಯದ ಜಾಗಕ್ಕೆ ತೆರಳದಂತೆ ಸೂಚನಾ ಫಲಕ ಹಾಕಿದ್ದರೂ  ಪ್ರವಾಸಿಗರು ನಿರ್ಲಕ್ಷಿಸುತ್ತಿದ್ದಾರೆ ಮತ್ತು ಹುಚ್ಚು ಸಾಹಸ ಮಾಡಿ ಜೀವ ಕಳೆದುಕೊಳ್ಳ್ಲುತ್ತಿದ್ದಾರೆ. ಕೆಲವು ವರ್ಷಗಳಿಂದ ಇಂತಹಾ ಪ್ರಕರಣ ಆಗಾಗ ನಡೆಯುತ್ತಿದೆ ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT