ಸಂಗ್ರಹ ಚಿತ್ರ 
ರಾಜ್ಯ

ಗ್ರೇಟ್ ಎಸ್ಕೇಪ್: ಕೆಎಸ್ಆರ್ಟಿಸಿ ಬಸ್ ಮೇಲೆ ಆನೆ ದಾಳಿ, 60 ಪ್ರಯಾಣಿಕರ ಎದೆ ಡವ ಡವ!

ಮರಿ ಆನೆಯ ರಕ್ಷಣೆಗಾಗಿ ನಿಂತ ತಾಯಿ ಆನೆ ಚಿಕ್ಕಮಗಳೂರು-ಕೋಳಿಕೋಡುಗೆ ಪ್ರಯಾಣಿಸುತ್ತಿದ್ದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ(ಕೆಎಸ್ಆರ್ಟಿಸಿ)...

ಚಾಮರಾಜನಗರ: ಮರಿ ಆನೆಯ ರಕ್ಷಣೆಗಾಗಿ ನಿಂತ ತಾಯಿ ಆನೆ ಚಿಕ್ಕಮಗಳೂರು-ಕೋಳಿಕೋಡುಗೆ ಪ್ರಯಾಣಿಸುತ್ತಿದ್ದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ(ಕೆಎಸ್ಆರ್ಟಿಸಿ) ಬಸ್ ಮೇಲೆ ದಾಳಿಗೆ ಮುಂದಾಗಿದ್ದು ಈ ವೇಳೆ ಬಸ್ ನಲ್ಲಿದ್ದ 60 ಮಂದಿ ಪ್ರಯಾಣಿಕರ ಎದೆ ಝಲ್ ಎಂದಿತ್ತು. 
ಭಾನುವಾರ ಬೆಳಗ್ಗೆ 7.30ರ ಸುಮಾರಿಗೆ ಕೆಎಸ್ಆರ್ಟಿಸಿ ಬಸ್ ಬಂಡಿಪುರ ರಾಷ್ಟ್ರೀಯ ಉದ್ಯಾವನದಲ್ಲಿ ಹೋಗುತ್ತಿದ್ದ ವೇಳೆ ಆನೆ ದಾಳಿ ಮಾಡಿದೆ. ಇದನ್ನು ಬಸ್ ನಲ್ಲಿದ್ದ ಪ್ರಯಾಣಿಕರೊಬ್ಬರು ತಮ್ಮ ಮೊಬೈಲ್ ನಲ್ಲಿ ಸೆರೆಹಿಡಿದಿದ್ದು ಈ ವಿಡಿಯೋ ಇದೀಗ ವೈರಲ್ ಆಗಿದೆ. 
ತಾಯಿ ಆನೆ ಅಟ್ಟಿಸಿಕೊಂಡು ಬರುತ್ತಿರುವುದನ್ನು ಗಮನಿಸಿದ ಬಸ್ ನ ಚಾಲಕ ಸುಮಾರು 100 ಮೀಟರ್ ದೂರದವರೆಗೆ ಬಸ್ ಅನ್ನು ಹಿಮ್ಮುಖವಾಗಿ ಚಲಾಯಿಸಿದರು ಬಿಡದ ಆನೆ ಬಂದ ಬಸ್ ನ ಮುಂಭಾಗದ ಗಾಜಿಗೆ ಗುದ್ದಿದ್ದು ಇದರಿಂದ ಗಾಜು ಹೊಡೆದಿದೆ. 
ರಾಷ್ಟ್ರೀಯ ಉದ್ಯಾನವನ ಹೆದ್ದಾರಿಯಲ್ಲಿ ಐದರಿಂದ ಆರು ಆನೆಗಳ ಹಿಂಡು ನಿಂತಿದ್ದು ಈ ವೇಳೆ ಬಸ್ ಅದೇ ರಸ್ತೆಯಲ್ಲಿ ಪ್ರಯಾಣಿಸುವಾಗ ಈ ದಾಳಿ ನಡೆದಿದೆ. ಹಿಂಡಿನಲ್ಲಿ ಮರಿ ಆನೆ ಇದ್ದಿದ್ದರಿಂದ ತಾಯಿ ಆನೆ ಬಸ್ ಮೇಲೆ ದಾಳಿಗೆ ಮುಂದಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ವಿಡಿಯೋ ಕೃಪೆ: ಯೂಟ್ಯೂಬ್

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT