ಬೆಂಗಳೂರು: ಮಾಜಿ ಸಚಿವ ಮುನಿಯಪ್ಪ ಮನೆ ಎದುರು ಇಬ್ಬರು ಆತ್ಮಹತ್ಯೆಗೆ ಯತ್ನ! 
ರಾಜ್ಯ

ಬೆಂಗಳೂರು: ಮಾಜಿ ಸಚಿವ ಮುನಿಯಪ್ಪ ಮನೆ ಎದುರು ಇಬ್ಬರು ಆತ್ಮಹತ್ಯೆಗೆ ಯತ್ನ!

ಕೇಂದ್ರದ ಮಾಜಿ ಸಚಿವ ಕೆ.ಹೆಚ್.ಮುನಿಯಪ್ಪ ಹಾಗೂ ಅವರ ಬೆಂಬಲಿಗರು ನಕಲಿ ದಾಖಲೆ ಸೃಷ್ಟಿಸಿ ತಮ್ಮ ಜಮೀನು ಕಳಬಿಸಿದ್ದಾರೆಂದು ಆರೋಪಿಸಿ ಇಬ್ಬರು ಸಹೋದರರು ಮುನಿಯಪ್ಪ ಅವರ ಮನೆಯ ಎದುರು ಮೈ ಮೇಲೆ ಪೆಟ್ರೋಲ್...

ಬೆಂಗಳೂರು: ಕೇಂದ್ರದ ಮಾಜಿ ಸಚಿವ ಕೆ.ಹೆಚ್.ಮುನಿಯಪ್ಪ ಹಾಗೂ ಅವರ ಬೆಂಬಲಿಗರು ನಕಲಿ ದಾಖಲೆ ಸೃಷ್ಟಿಸಿ ತಮ್ಮ ಜಮೀನು ಕಳಬಿಸಿದ್ದಾರೆಂದು ಆರೋಪಿಸಿ ಇಬ್ಬರು ಸಹೋದರರು ಮುನಿಯಪ್ಪ ಅವರ ಮನೆಯ ಎದುರು ಮೈ ಮೇಲೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನ ನಡೆಸಿರುವ ಘಟನೆ ಭಾನುವಾರ ಬೆಳಿಗ್ಗೆ ನಡೆದಿದೆ. 
ರಾಜು ಹಾಗೂ ಮುನಿರಾಜು ಆತ್ಮಹತ್ಯೆಗೆ ಯತ್ನಿಸಿದ ಸಹೋದರರಾಗಿದ್ದಾರೆಂದು ತಿಳಿದುಬಂದಿದೆ. 
ಜಮೀನು ಕಬಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮುನಿಯಪ್ಪ ಅವರು, ತಮಗೂ ಹಾಗೂ ಈ ಜಮೀನು ವಿವಾದಕ್ಕೂ ಯಾವುದೇ ಸಂಬಂಧವಿಲ್ಲ. ನಾನು ಕೆಪಿಸಿಸಿ ಅಧ್ಯಕ್ಷ ಹುದ್ದೆಯ ಆಕಾಂಕ್ಷಿಯಾಗಿದ್ದು. ಹುದ್ದೆ ಕೈತಪ್ಪುವಂತೆ ಮಾಡುವ ಸಲುವಾಗಿ ನನ್ನ ವಿರುದ್ಧ ಈ ರೀತಿಯ ಷಡ್ಯಂತ್ರ ನಡೆಸಲಾಗಿದೆ ಎಂದು ಮುನಿಯಪ್ಪ ಅವರು ತಿಳಿಸಿದ್ದಾರೆ. 
ಯಲಹಂಕ ಸಮೀಪದ ವೆಂಕಟಾಲ ಬಳಿ ರಾಜು ಮತ್ತು ಮುನಿರಾಜು ಅವರು ಸುಮಾರು ರೂ.20 ಕೋಟಿ ಬೆಲೆ ಬಾಳುವ 1.5 ಎಕರೆ ಜಮೀನನ್ನು ಹೊಂದಿದ್ದರು. ಸಂಸದರು ಹಾಗೂ ಅವರ ಬೆಂಬಲಿಗರು ನಕಲಿ ದಾಖಲೆ ಸೃಷ್ಟಿಸಿ 2007ರಲ್ಲಿ ಅದನ್ನು ಕೋಲಾರದ ರಾಮ್ ಪ್ರಸಾದ್ ಎಂಬ ವ್ಯಕ್ತಿಗೆ ಮಾರಾಟ ಮಾಡಿದ್ದಾರೆಂಬುದು ಇಬ್ಬರು ಸಹೋದರರ ಆರೋಪವಾಗಿದೆ. 
ರಾಜು ಮತ್ತು ಮುನಿರಾಜು ಭಾನುವಾರ ಬೆಳಿಗ್ಗೆ 20 ಮಂದಿಯೊಂದಿಗೆ ಸಂಜಯನಗರದಲ್ಲಿರುವ ಸಚಿವ ಮನೆಗೆ ತೆರಳಿದ್ದರು. ಈ ವೇಳೆ ಏಕಾಏಕಿ ಮೈ ಮೇಲೆ ಪೆಟ್ರೋಲ್ ಸುರಿದುಕೊಂಡು ಗಲಾಟೆ ಮಾಡುತ್ತಿದ್ದರು. ಗಲಾಟೆ ಶಬ್ಧ ಕೇಳಿ ಮುನಿಯಪ್ಪ ಅವರು ಹೊರಗೆ ಬಂದಿದ್ದಾರೆ. ಈ ವೇಳೆ ಸಹೋದರರಿಬ್ಬರೂ ಬೆಂಕಿ ಹಚ್ಚಿಕೊಳ್ಳಲು ಯತ್ನ ನಡೆಸಿದ್ದಾರೆ. ಬಳಿಕ ಮುನಿಯಪ್ಪ ಅವರೇ ಸಹೋದರರು ಹಾಗೂ ಬೆಂಬಲಿಗರನ್ನು ಸಮಾಧಾನಪಡಿಸಿದ್ದಾರೆಂದು ತಿಳಿದುಬಂದಿದೆ. 
ಕೆ.ವಿ.ರಾಮಪ್ರಸಾದ್ ಅವರು ನಮ್ಮ ಭೂಮಿಯನ್ನು ಕಬಳಿಸಲು ಕಳೆದ 11 ವರ್ಷಗಳಿಂದಲೂ ಯತ್ನ ನಡೆಸುತ್ತಿದ್ದರು. ನಮ್ಮ ಬಳಿ ಅಸಲಿ ಕಾಳೆಗಳಿದ್ದು, ಹೀಗಾಗಿ ನ್ಯಾಯಾಲಯದ ಮೊರೆ ಹೋಗಿದ್ದೆವು. ಈಗಲು ನಮಗೆ ಕಿರುಕುಳ ನೀಡುತ್ತಲೇ ಇದ್ದಾರೆ. ಹೀಗಾಗಿ ನಾವು ಮುನಿಯಪ್ಪ ಅವರ ನಿವಾಸದ ಎದುರೇ ಆತ್ಮಹತ್ಯೆ ಮಾಡಿಕೊಳ್ಳಲು ನಿರ್ಧಾರ ಕೈಗೊಂಡಿದ್ದೆವು ಎಂದು ಮುನಿಯಪ್ಪ ಅವರು ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

SCROLL FOR NEXT