ಎಚ್ ಡಿ ಕುಮಾರಸ್ವಾಮಿ 
ರಾಜ್ಯ

ಶೀಘ್ರದಲ್ಲೇ ಸಿಎಂ ಕುಮಾರಸ್ವಾಮಿಯಿಂದ ಕಾವೇರಿ ಕುರಿತು ಕಿರು ಪುಸ್ತಕ

ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಶೀಘ್ರದಲ್ಲೇ ಕಾವೇರಿ ನದಿ ನೀರಿನ ವಿವಾದಕ್ಕೆ ಸಂಬಂಧಿಸಿದ ಸಂಪೂರ್ಣ....

ಬೆಂಗಳೂರು: ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಶೀಘ್ರದಲ್ಲೇ ಕಾವೇರಿ ನದಿ ನೀರಿನ ವಿವಾದಕ್ಕೆ ಸಂಬಂಧಿಸಿದ ಸಂಪೂರ್ಣ ಮಾಹಿತಿ ಒಳಗೊಂಡ ಕಿರು ಪುಸ್ತಕವೊಂದನ್ನು ಹೊರ ತರಲು ತೀರ್ಮಾನಿಸಿದ್ದಾರೆ. 
ಸುಮಾರು 45 ಪುಟಗಳ ಈ ಪುಸ್ತಕದಲ್ಲಿ ತಮಿಳಿಗೆ ಭಾಷಾಂತರಿಸಿ, ಅದನ್ನು ತಮಿಳುನಾಡು ಸಚಿವರಿಗೆ, ಶಾಸಕರಿಗೆ, ಸಂಸದರಿಗೆ ಹಾಗೂ ಪ್ರತಿಪಕ್ಷ ನಾಯಕರಿಗೆ ಉಚಿತವಾಗಿ ನೀಡಲು ಸಿಎಂ ನಿರ್ಧರಿಸಿದ್ದಾರೆ. 
ಆದರೆ ಸಿಎಂ ಕುಮಾರಸ್ವಾಮಿ ಅವರ ಈ ನಿರ್ಧಾರಕ್ಕೆ ತಮಿಳುನಾಡಿನ ಆಡಳಿತರೂಢ ಎಐಎಡಿಎಂಕೆ ಮತ್ತು ಪ್ರತಿಪಕ್ಷ ಡಿಎಂಕೆ ತೀವ್ರ ವಿರೋಧ ವ್ಯಕ್ತಪಡಿಸಿವೆ.
ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಕಾಲಾವಕಾಶ ನೀಡದೆ ಕಾವೇರಿ ನದಿ ನೀರು ನಿರ್ವಹಣಾ ಮಂಡಳಿ ರಚಿಸಿದ್ದರಿಂದ ರಾಜ್ಯಕ್ಕೆ ಆಗಬಹುದಾದ ಸಾಧಕ-ಬಾಧಕ ಕುರಿತು ಪುಸ್ತಕದಲ್ಲಿ ಮಾಹಿತಿ ಇರಲಿದೆ. ಈ ಮೂಲಕ ಹೋರಾಟದ ರೂಪುರೇಷೆ ಸಿದ್ಧಪಡಿಸುವ ಉದ್ದೇಶವಿದೆ ಎನ್ನಲಾಗಿದೆ.
ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರ ನಿರ್ದೇಶನದಂತೆ ಸಿಎಂ ಕುಮಾರಸ್ವಾಮಿ ಅವರು ಈ ಪುಸ್ತಕ ಹೊರತರಲು ನಿರ್ಧರಿಸಿದ್ದು,15-20 ದಿನಗಳಲ್ಲಿ ಈ ಪುಸ್ತಕ ಹೊರ ಬರುವ ನಿರೀಕ್ಷೆಯಿದೆ ಎಂದು ಮೂಲಗಳು ತಿಳಿಸಿವೆ.
ಪುಸ್ತಕದಲ್ಲಿ ಏನಿರಲಿದೆ?
ಕಾವೇರಿ ನದಿಯ ಇತಿಹಾಸ, ನೀರಿನ ಪ್ರಮಾಣ, ವಿವಾದ, ನ್ಯಾಯ ಮಂಡಳಿ ತೀರ್ಪು, ಸುಪ್ರೀಂಕೋರ್ಟ್ ಅಂತಿಮ ತೀರ್ಪು, ನೀರು ನಿರ್ವಹಣಾ ಮಂಡಳ ರಚನೆ, ಕಾನೂನು ಹೋರಾಟಗಳ ಸಮಗ್ರ ಮಾಹಿತಿಯನ್ನು ಈ ಪುಸ್ತಕ ಒಳಗೊಂಡಿರುತ್ತದೆ.
ಯಾವ ಪಕ್ಷ ಆಡಳಿತದಲ್ಲಿದ್ದಾಗ ರಾಜ್ಯಕ್ಕೆ ಅನ್ಯಾಯ -ಅನುಕೂಲವಾಗಿದೆ. ಕಾಲಾನುಕ್ರಮದಲ್ಲಿ ನದಿ ನೀರು ಬಳಕೆ ಸಂಬಂಧ ಆಯಾ ಸರ್ಕಾರಗಳ ನಿಲುವು, ರಾಜ್ಯದ ಜನತೆ, ರೈತರು ಎದುರಿಸಿದ್ದ ಸಂಕಷ್ಟಗಳ ಮಾಹಿತಿ ಇರಲಿದೆ. ಆದರೆ, ಇದರಲ್ಲಿ ಯಾವುದೇ ರಾಜಕೀಯ ಇರುವುದಿಲ್ಲ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT