ರೋಹಿಣಿ ಸಿಂದೂರಿ 
ರಾಜ್ಯ

ಕಾನೂನು ಹೋರಾಟದಲ್ಲಿ ಜಯ, ರೋಹಿಣಿ ಮತ್ತೆ ಹಾಸನ ಜಿಲ್ಲಾಧಿಕಾರಿ

ಕೊನೆಗೂ ರಾಜ್ಯಸರ್ಕಾರದ ವಿರುದ್ಧದ ಹೋರಾಟದಲ್ಲಿ ಐಎಎಸ್ ಅಧಿಕಾರಿ ರೋಹಿಣಿ ಸಿಂದೂರಿಗೆ ಜಯ ಸಿಕ್ಕಿದೆ. ಅವರನ್ನು ಮತ್ತೆ ಹಾಸನ ಜಿಲ್ಲಾಧಿಕಾರಿಯಾಗಿ ರಾಜ್ಯಸರ್ಕಾರ ವರ್ಗಾವಣೆ ಮಾಡಿದೆ.

ಬೆಂಗಳೂರು: ಕೊನೆಗೂ ರಾಜ್ಯಸರ್ಕಾರದ ವಿರುದ್ಧದ ಹೋರಾಟದಲ್ಲಿ ಐಎಎಸ್ ಅಧಿಕಾರಿ ರೋಹಿಣಿ ಸಿಂದೂರಿಗೆ ಜಯ ಸಿಕ್ಕಿದೆ. ಅವರನ್ನು ಮತ್ತೆ  ಹಾಸನ ಜಿಲ್ಲಾಧಿಕಾರಿಯಾಗಿ  ರಾಜ್ಯಸರ್ಕಾರ ವರ್ಗಾವಣೆ ಮಾಡಿದೆ.
ಹಾಸನ ಜಿಲ್ಲಾಧಿಕಾರಿಯಾಗಿದ್ದ ರೋಹಿಣಿ ಸಿಂಧೂರಿ ಅವರನ್ನು ಚುನಾವಣೆ ಸಂದರ್ಭದಲ್ಲಿ ಮಾರ್ಚ್ 7 , 2018ರಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಉದ್ಯೋಗ ಮತ್ತು ತರಬೇತಿ ಇಲಾಖೆಯ ಆಯುಕ್ತರನ್ನಾಗಿ ವರ್ಗಾವಣೆ ಮಾಡಿತ್ತು.ಅವಧಿ ಪೂರ್ವ ವರ್ಗಾವಣೆ ವಿರೋಧಿಸಿ ರೋಹಿಣಿ ಸಿಂದೂರಿ ಸಿಎಟಿ ಹಾಗೂ ಹೈಕೋರ್ಟ್  ಮೊರೆ ಹೋಗಿದ್ದರು.
ಈ ಸಂಬಂಧ ವಿಚಾರಣೆ ನಡೆಸಿದ ಹೈಕೋರ್ಟ್  ವಿಭಾಗೀಯ ಪೀಠದ  ನ್ಯಾಯಾಧೀಶರಾದ ಹೆಚ್. ಜಿ. ರಮೇಶ್ ಹಾಗೂ  ಮೊಹಮ್ಮದ್ ನವಾಜ್  ಅವರಿದ್ದ ಪೀಠದ ಮುಂದೆ ರೋಹಿಣಿ ಸಿಂದೂರಿ ಅವರನ್ನು ಮತ್ತೆ ಹಾಸನ ಜಿಲ್ಲಾಧಿಕಾರಿಯಾಗಿ ನೇಮಿಸುವುದಾಗಿ ಹೆಚ್ಚುವರಿ ಅಡ್ವೊಕೇಟ್ ಜನರಲ್ ಎ.ಎಸ್. ಪೊನ್ನಣ್ಣ  ಹೇಳಿಕೆ ನೀಡಿದ್ದರು.
ಅದರಂತೆ ಅವರನ್ನು ಮತ್ತೆ ಹಾಸನ ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಮಾಡಿ ಸರ್ಕಾರ ಅಧಿಕೃತ ಆದೇಶ ಪ್ರಕಟಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಪಕ್ಷದ ಮೇಲೆ ನನಗೆ ನಂಬಿಕೆ ಇದೆ: ದುಡ್ಡು- ಬ್ಲಡ್ ನಿರಂತರ ಚಲನೆಯಲ್ಲಿ ಇರಬೇಕು; ಅಕ್ಕಪಕ್ಕದಲ್ಲಿ ಇರುವವರೇ ಮೋಸ ಮಾಡುತ್ತಾರೆ, ಎಚ್ಚರ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT