ಉನ್ನತ ಶಿಕ್ಷಣ ಇಲಾಖೆ ಸಚಿವ ಜಿ.ಟಿ.ದೇವೇಗೌಡ 
ರಾಜ್ಯ

ಎನ್ಇಟಿ ಅರ್ಹತೆಯುಳ್ಳ ಶಿಕ್ಷಕರ ಕೊರತೆಯಿದೆ: ಉನ್ನತ ಶಿಕ್ಷಣ ಇಲಾಖೆ ಸಚಿವ ಜಿಟಿ ದೇವೇಗೌಡ

ರಾಷ್ಟ್ರೀಯ ಅರ್ಹತಾ ಪರೀಕ್ಷೆ (ಎನ್ಇಟಿ) ಅರ್ಹತೆಯುಳ್ಳ ಶಿಕ್ಷಕರ ಕೊರೆತೆ ಇದೆ ಎಂದು ಉನ್ನತ ಶಿಕ್ಷಣ ಇಲಾಖೆ ಸಚಿವ ಜಿ.ಟಿ.ದೇವೇಗೌಡ ಅವರು ಭಾನುವಾರ ಹೇಳಿದ್ದಾರೆ...

ಬೆಂಗಳೂರು; ರಾಷ್ಟ್ರೀಯ ಅರ್ಹತಾ ಪರೀಕ್ಷೆ (ಎನ್ಇಟಿ) ಅರ್ಹತೆಯುಳ್ಳ ಶಿಕ್ಷಕರ ಕೊರೆತೆ ಇದೆ ಎಂದು ಉನ್ನತ ಶಿಕ್ಷಣ ಇಲಾಖೆ ಸಚಿವ ಜಿ.ಟಿ.ದೇವೇಗೌಡ ಅವರು ಭಾನುವಾರ ಹೇಳಿದ್ದಾರೆ. 
ನಗರದ ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜಿನಲ್ಲಿ ಭಾನುವಾರ ಕರ್ನಾಟಕ ಸರ್ಕಾರಿ ಕಾಲೇಜು ಶಿಕ್ಷಕರ ಸಂಘ (ಕೆಜಿಸಿಟಿಎ) ಆಯೋಜಿಸಿದ್ದ ಅಖಿಲ ಭಾರತ ವಿಶ್ವವಿದ್ಯಾಲಯ ಮತ್ತು ಕಾಲೇಜು ಉಪನ್ಯಾಸಕರ ಸಂಘಗಳ ಒಕ್ಕೂಟದ (ಎಐಎಫ್'ಯುಸಿಟಿಒ) ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ರಾಷ್ಟ್ರೀಯ ಅರ್ಹತಾ ಪರೀಕ್ಷೆ (ಎನ್ಇಟಿ) ಅರ್ಹತೆಯುಳ್ಳ ಶಿಕ್ಷಕರ ಕೊರೆತೆ ಇದೆ ಎಂದು ಹೇಳಿದ್ದಾರೆ. 
ಉನ್ನತ ಶಿಕ್ಷಣ ವಿಭಾಗದಲ್ಲಿ ಹಲವು ವರ್ಷಗಳಿಂದಲೂ ಯಾವುದೇ ರೀತಿಯ ನೇಮಕಾತಿಗಳು ನಡೆದಿಲ್ಲ. ಎನ್ಇಟಿ ಅರ್ಹತೆಯುಳ್ಳ ಶಿಕ್ಷಕರ ಕೊರತೆಗಳಿವೆ. ಕಾಲೇಜು ಹಾಗೂ ವಿಶ್ವವಿದ್ಯಾಲಯಗಳಲ್ಲಿ ಕೇವಲ ಶೇ.5 ರಷ್ಟು ಮಾತ್ರ ಎನ್ಇಟಿ ಅರ್ಹತೆಯುಳ್ಳ ಶಿಕ್ಷಕರಿದ್ದಾರೆಂದು ಸಭೆಯಲ್ಲಿ ಎಫ್'ಯುಸಿಟಿಎಕೆ ಅಧ್ಯಕ್ಷ ಡಾ.ಎನ್.ಬಿ.ಸಂಗಪುರ್ ಅವರು ಹೇಳಿದ್ದಾರೆ. 
ಶಿಕ್ಷಕರ, ಸಂಘಟನೆಗಳು ಹಾಗೂ ರಾಜ್ಯ ಸರ್ಕಾರದ ನಡುವೆ ಸಾಕಷ್ಟು ಭಿನ್ನಾಭಿಪ್ರಾಯಗಳು ಮೂಡಿರುವುದರಿಂದ ಸರ್ಕಾರಿ ಕಾಲೇಜುಗಳಲ್ಲಿ ಶಿಕ್ಷಕರ ನೇಮಕಾತಿಗಳಾಗುತ್ತಿಲ್ಲ. ಇದರಿಂದ ಸಾಕಷ್ಟು ಸಮಸ್ಯೆಗಳಾಗುತ್ತಿವೆ ಎಂದು ಸಭೆಯಲ್ಲಿ ಅಧಿಕಾರಿಗಳು ಹೇಳಿದ್ದಾರೆ.
ಈ ವೇಳೆ ಮಾತನಾಡಿದ ಸಚಿವ ಜಿ.ಟಿ.ದೇವೇಗೌಡ ಅವರು, ಉದ್ಯೋಗಾವಕಾಶ ಸೃಷ್ಟಿಸಲು, ಯುವಕರಲ್ಲಿ ಕೌಶಲ್ಯಾಭಿವೃದ್ಧಿ ಹೆಚ್ಚಿಸಲು ಕೆಲಸ ಮಾಡಲಾಗುತ್ತಿದೆ. ಪದವಿ ಹಾಗೂ ಸ್ನಾತಕೋತ್ತರ ಪಡೆದ ವಿದ್ಯಾರ್ಥಿಗಳ ಸಂಖ್ಯೆ ಸರಿಯಾಗಿ ದೊರಕಿದರೆ, ಸಮಸ್ಯೆಗಳು ಬಗೆಹರಿಯುವುದು. ಇದಲ್ಲದೆ ವಿದ್ಯಾರ್ಥಿಗಳಿಗೆ ಅಗತ್ಯವಿರುವ ಸೌಲಭ್ಯಗಳಾದ ಸೂಕ್ತ ರೀತಿಯ ಶೌಚಾಲಯಗಳು, ಕ್ಯಾಂಟೀನ್ ಹಾಗೂ ಪ್ರಯೋಗಾಲಯಗಳ ಕುರಿತಂತೆಯೂ ಕೆಲಸಗಳನ್ನು ಮಾಡಲಾಗುತ್ತಿದೆ ಎಂದು ತಿಳಿಸಿದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT