ಸಂಗ್ರಹ ಚಿತ್ರ 
ರಾಜ್ಯ

ಕೇವಲ 13 ಸಾವಿರ ರೂ. ಗಾಗಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ?

ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಪ್ರಮುಖ ಆರೋಪಿ ಪರಶುರಾಮ್ ವಾಗ್ಮೋರೆಯನ್ನು ಎಸ್ಐಟಿ ಅಧಿಕಾರಿಗಳು ವಿಚಾರಣೆಗೊಳಪಡಿಸಿದ್ದು, ವಿಚಾರಣೆ ವೇಳೆ ದಿನಕ್ಕೊಂದು...

ಬೆಂಗಳೂರು: ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಪ್ರಮುಖ ಆರೋಪಿ ಪರಶುರಾಮ್ ವಾಗ್ಮೋರೆಯನ್ನು ಎಸ್ಐಟಿ ಅಧಿಕಾರಿಗಳು ವಿಚಾರಣೆಗೊಳಪಡಿಸಿದ್ದು, ವಿಚಾರಣೆ ವೇಳೆ ದಿನಕ್ಕೊಂದು ಕುತೂಹಲಕಾರಿ ಮಾಹಿತಿಗಳು ಬಹಿರಂಗಗೊಳ್ಳುತ್ತಿವೆ. 
ಕೇವಲ ರೂ.13.000 ಪಡೆದು ಆರೋಪಿ ಪರಶುರಾಮ್ ಗೌರಿ ಲಂಕೇಶ್ ಅವರನ್ನು ಹತ್ಯೆ ಮಾಡಿರುವ ವಿಚಾರ ಇದೀಗ ಬೆಳಕಿಗೆ ಬಂದಿದೆ. 
ಗೌರಿಯನ್ನು ಹತ್ಯೆ ಮಾಡುವುದಕ್ಕೆ ಬೆಂಗಳೂರಿಗೆ ಬರುವಾಗ ದುಷ್ಕರ್ಮಿಗಳು ಪರಶುರಾಮ್'ಗೆ ರೂ.3 ಸಾವಿರ ರೂಪಾಯಿ ಕೊಟ್ಟಿದ್ದರಂತೆ. ಗೌರಿ ಹತ್ಯೆಯಾದ ಬಳಿಕ ರೂ.10,000 ಕೊಟ್ಟ ದುಷ್ಕರ್ಮಿಗಳು, ಪಿಸ್ತೂಲ್ ಪಡೆದುಕೊಂಡು, ಸ್ಥಳದಿಂದ ಹೊರಟು ಹೋಗಿದ್ದಾರೆ, ಹಣ ಕೊಟ್ಟವರ ಮಾಹಿತಿ ಪರಶುರಾಮ್'ಗೆ ಗೊತ್ತಿಲ್ಲ. ಆದರೆ, ಮುಖ ನೋಡಿರುವ ಪರಶುರಾಮ್, ಗುರುತು ಹಿಡಿಯುವುದಾಗಿ ತಿಳಿಸಿದ್ದಾನೆಂದು ತಿಳಿದುಬಂದಿದೆ. 
ವಾಗ್ಮೋರೆಗೆ ಹಣ ನೀಡಿದ ಮೂವರು ದುಷ್ಕರ್ಮಿಗಳಲ್ಲಿ ಇಬ್ಬರು ಕನ್ನಡ ಮಾತನಾಡುತ್ತಿದ್ದರೆ, ಮತ್ತೊಬ್ಬ ಹಿಂದಿ ಮಾತನಾಡುತ್ತಿದ್ದರು. ಮೂವರೂ ಹಿಂದೂ ಧರ್ಮದ ಬಗ್ಗೆ ತಿಳಿಸುತ್ತಿದ್ದ ಅವರು, ಧರ್ಮಕ್ಕಾಗಿ ಏನನ್ನು ಬೇಕಾದರೂ ಮಾಡುವಂತಹ ಮನಸ್ಥಿತಿಯನ್ನು ಹುಟ್ಟುಹಾಕಿದ್ದರು. ಬಳಿಕ ಗೌರಿ ಲಂಕೇಶ್'ರನ್ನು ಹತ್ಯೆ ಮಾಡುವಂತೆ ತಿಳಿಸಿದ್ದರು. ಗೌರಿ ಯಾರೆಂಬುದೇ ವಾಗ್ಮೋರೆಗೆ ತಿಳಿದಿರಲಿಲ್ಲ. ಗೌರಿ ಹಿಂದು ಧರ್ಮವನ್ನು ವಿರೋಧಿಸುತ್ತಿದ್ದರು. ಪ್ರಚೋದನಕಾರಿ ಭಾಷಣಗಳ ಮೂಲಕ ಹಿಂದು ಧರ್ಮಕ್ಕೆ ಅವಮಾನ ಮಾಡುತ್ತಿದ್ದಾರೆಂದು ತಿಳಿಸಿದ್ದರು. ಗೌರಿ ಭಾಷಣ ಮಾಡಿದ್ದ ಹಲವು ವಿಡಿಯೋಗಳನ್ನು ದುಷ್ಕರ್ಮಿಗಳು ವಾಗ್ಮೋರೆಗೆ ತೋರಿಸಿದ್ದಾರೆ. ಈ ವೇಳೆ ಗೌರಿ ಮಾಡುತ್ತಿರುವುದು ಕ್ಷಮಿಸಲಾರದ ತಪ್ಪು ಎಂದು ತಿಳಿದು, ಹತ್ಯೆ ಮಾಡಲು ನಿರ್ಧರಿಸಿದ್ದೆ ಎಂದು ವಾಗ್ಮೋರೆ ವಿಚಾರಣೆ ವೇಳೆ ಹೇಳಿಕೊಂಡಿದ್ದಾನೆಂದು ಎಸ್ಐಟಿ ಅಧಿಕಾರಿಗಳು ತಿಳಿಸಿದ್ದಾರೆ. 
ಗೌರಿ ಹತ್ಯೆಗೆ ಒಪ್ಪಿಕೊಂಡಿದ್ದ ವಾಗ್ಮೋರೆಗೆ ಮೂವರು ದುಷ್ಕರ್ಮಿಗಳು ರೂ.3,000 ಹಣವನ್ನು ನೀಡಿದ್ದರು. ಈ ಹಣವನ್ನು ಬಸ್ ಟಿಕೆಟ್ ಹಾಗೂ ಆಹಾರಕ್ಕೆ ಬಳಸಿಕೊಳ್ಳುವಂತೆ ತಿಳಿಸಿದ್ದರು. ವಾಗ್ಮೋರೆ ವಿಜಯಪುರದ ಸಿಂಧಗಿ ಮೂಲದರಾಗಿದ್ದು, ಬೆಂಗಳೂರಿಗೆ ಬರಲು ಪ್ರಯಾಣ ಬೆಳೆಸಲು ದುಷ್ಕರ್ಮಿಗಳು ಹಣವನ್ನು ನೀಡಿದ್ದರು. ಗೌರಿ ಹತ್ಯೆಯಾದ ಬಳಿಕ ವಾಗ್ಮೋರೆಗೆ ದುಷ್ಕರ್ಮಿಗಳು ರೂ.10,000 ನೀಡಿದ್ದಾರೆ. 
ಹತ್ಯೆ ಮಾಡಿದ ಬಳಿಕ ವಾಗ್ಮೋರೆ ಮನೆಗೆ ಬಂದಿದ್ದಾನೆ. ಇದಾದ 10 ದಿನಗಳ ಬಳಿಕ ಬೆಳಗಾವಿಗೆ ಬರುವಂತೆ ತಿಳಿಸಿದ ದುಷ್ಕರ್ಮಿಗಳು ಕಾಳೆ ಮೂಲಕ ರೂ.10,000 ಹಣವನ್ನು ನೀಡಿದ್ದಾರೆ. ಈ ವೇಳೆ ನಾನು ಹಣಕ್ಕಾಗಿ ಅಲ್ಲ, ಧರ್ಮಕ್ಕಾಗಿ ಹತ್ಯೆ ಮಾಡಿದ್ದೇನೆಂದು ತಿಳಿಸಿದ್ದಾನೆ. ಬಳಿಕ ಕಾಳೆ, ಹಣದ ಅಗತ್ಯ ಬರುತ್ತದೆ ಎಂದು ಹೇಳಿ ನೀಡಿದ್ದಾನೆ. ಮುಂದಿನ ದಿನಗಳಲ್ಲಿ ಸಹಾಯ ಮಾಡುವುದಾಗಿ ತಿಳಿಸಿದ್ದ ವ್ಯಕ್ತಿಗಳಾರೂ ಇದೀಗ ವಾಗ್ಮೋರೆ ಸಹಾಯಕ್ಕೆ ಬಂದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT