ಸಂಗ್ರಹ ಚಿತ್ರ 
ರಾಜ್ಯ

ಏಳೇಳು ಜನ್ಮಕ್ಕೂ ಇಂಥ ಹೆಂಡತಿ ಮಾತ್ರ ಬೇಡ, ಪತಿಯಿಂದ ವಟಸಾವಿತ್ರಿ ವ್ರತಾಚರಣೆ!

ಏಳೇಳು ಜನ್ಮಕ್ಕೂ ಇಂಥ ಹೆಂಡಿತಿ ಮಾತ್ರ ನನಗೆ ಬೇಡ ದೇವರೆ ಅಂತಾ ವ್ಯಕ್ತಿಯೊಬ್ಬ ವಟ ಸಾವಿತ್ರಿ ವ್ರತ ಆಚರಣೆ ಮಾಡಿದ್ದಾನೆ...

ಚಿಕ್ಕೋಡಿ(ಬೆಳಗಾವಿ): ಏಳೇಳು ಜನ್ಮಕ್ಕೂ ಇಂಥ ಹೆಂಡಿತಿ ಮಾತ್ರ ನನಗೆ ಬೇಡ ದೇವರೆ ಅಂತಾ ವ್ಯಕ್ತಿಯೊಬ್ಬ ವಟ ಸಾವಿತ್ರಿ ವ್ರತ ಆಚರಣೆ ಮಾಡಿದ್ದಾನೆ. 
ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದ ಆರ್. ಡಿ. ಕಾಲೇಜು ಮೈದಾನದ ಆವರಣದಲ್ಲಿ ಇರುವ ಅತ್ತಿ ಮರಕ್ಕೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಮುಂದಿನ ಜನ್ಮದಲ್ಲಿ ತನಗೆ ಒಳ್ಳೆಯ ಹೆಂಡತಿ ಸಿಗಲಿ ಎಂದು ಅಶ್ವತ್ಥ ವೃಕ್ಷಕ್ಕೆ ಪೂಜೆ ಸಲ್ಲಿಸಿ ಹಲವು ಸುತ್ತು ನೂಲನ್ನು ಕೂಡ ಸುತ್ತಿ ವಿನೂತನವಾಗಿ ವಟ ಸಾವಿತ್ರಿ ವ್ರತ ಆಚರಣೆ ಮಾಡುವ ಮೂಲಕ ಗಮನ ಸೆಳೆದಿದ್ದಾರೆ. 
ಕಳೆದ 2-3 ವರ್ಷಗಳಿಂದ ಚಿಕ್ಕೋಡಿ ಪಟ್ಟಣದಲ್ಲಿ ಪುರುಷ ಸಾಂತ್ವನ ಕೇಂದ್ರ ಪ್ರಾರಂಭಿಸಿರುವ ಶಶಿಧರ ಕೋಪರ್ಡೆ ಎಂಬುವವರು ಇಂತಹ ವಿನೂತನ ವೃತ ಆಚರಣೆ ಮಾಡಿದ್ದಾರೆ.
ಜ್ಯೇಷ್ಠ ಮಾಸದ ಹುಣ್ಣಿಮೆಯ ದಿನದಂದು ಗೃಹಿಣಿಯರು ತಮ್ಮೆಲ್ಲ ಮನೋಕಾಮನೆಗಳನ್ನು, ದೀರ್ಘ ಸೌಮಾಂಗ್ಯ ಪ್ರಾಪ್ತಿಗಾಗಿ ವಟ ಸಾವಿತ್ರಿ ವ್ರತವನ್ನು ಆಚರಿಸುವುದು ಸಾಮಾನ್ಯ.
ಚಿಕ್ಕೋಡಿ ಪಟ್ಟಣದಲ್ಲಿ ಪುರುಷ ಸಾಂತ್ವನ ಕೇಂದ್ರ ಪ್ರಾರಂಭಿಸಿರುವ ಶಶಿಧರ ಕೋಪರ್ಡೆ ಎಂಬುವರು ವಟ ಸಾವಿತ್ರಿ ವ್ರತ ಆಚರಣೆ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT