ಯಡಿಯೂರಪ್ಪ ಜೊತೆ ಎಂಜೆ ಆಕ್ಬರ್ 
ರಾಜ್ಯ

ಇಂದಿರಾಗಾಂಧಿ ಸರ್ವಾಧಿಕಾರಿ ಧೋರಣೆಯಿಂದ ದೇಶ ಕೆಲಕಾಲ ಕತ್ತಲೆ ಕೂಪದಲ್ಲಿತ್ತು: ಎಂ.ಜೆ ಅಕ್ಬರ್

ಮಾಜಿ ಪ್ರಧಾನಿ ದಿವಂಗತ ಇಂದಿರಾಗಾಂಧಿ ಅವರ ಸರ್ವಾಧಿಕಾರಿ ಧೋರಣೆಯಿಂದ ದೇಶ ಕೆಲ ಕಾಲ ಕತ್ತಲೆ ಕೂಪದಲ್ಲಿ ಮುಳುಗುವಂತಾಯಿತು ...

ಬೆಂಗಳೂರು: ಮಾಜಿ ಪ್ರಧಾನಿ ದಿವಂಗತ ಇಂದಿರಾಗಾಂಧಿ ಅವರ ಸರ್ವಾಧಿಕಾರಿ ಧೋರಣೆಯಿಂದ ದೇಶ ಕೆಲ ಕಾಲ ಕತ್ತಲೆ ಕೂಪದಲ್ಲಿ ಮುಳುಗುವಂತಾಯಿತು ಎಂದು ಕೇಂದ್ರ ಸಚಿವ ಎಂ.ಜೆ ಅಕ್ಬರ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ,ವಂಶವಾಹಿ ಆಡಳಿತದ ವಿರುದ್ಧ ವಾಗ್ದಾಳಿ ನಡೆಸಿದರು.
1975 ರಿಂದ 1977 ರವವರೆಗೆ ದೇಶದಲ್ಲಿ ತುರ್ತು ಪರಿಸ್ಥಿತಿ ಘೋಷಣೆಯಾಗಿತ್ತು, ಇಲ್ಲಿರುವ ಕೆಲವರು ಇನ್ನೂ ಜನಿಸಿರಲಿಲ್ಲ, ಆ ಸಮಯದಲ್ಲಿ ಜನರ ಪರಿಸ್ಥಿತಿ ಎಷ್ಟು ಕೆಟ್ಟದಾಗಿತ್ತು ಎಂದು ನಿಮಗ್ಯಾರಿಗೂ ಊಹಿಸಿಕೊಳ್ಳಲು ಸಾಧ್ಯವಿಲ್ಲ . ದೇಶದಲ್ಲಿ ಹೇರಿದ ತುರ್ತು ಪರಿಸ್ಥಿತಿ ಸ್ವತಂತ್ರ್ಯಾ ಭಾರತದ ಜಲಿಯನ್ ವಾಲಾಬಾಗ್ ದುರಂತ ಎಂದು ವಿಷಾಧ ವ್ಯಕ್ತ ಪಡಿಸಿದರು. 
1975ರ ಜೂನ್ 25 ರಂದು ತುರ್ತುಪರಿಸ್ಥಿತಿ ಘೋಷಿಸಲಾಯಿತು.ಅದು 1977ರ ಮಾರ್ಚ್ 21 ಕ್ಕೆ ಕೊನೆಗೊಂಡಿತ್ತು. ನಂತರ ನಡೆದ ಚುನಾವಣೆಯಲ್ಲಿ ಇಂದಿರಾ ಗಾಂಧಿ ಮತ್ತು ಅವರ ಪುತ್ರ ಸಂಜಯ ಗಾಂಧಿ ಹೀನಾಯವಾಗಿ ಸೋತರು.
19 ತಿಂಗಳ ಅವಧಿಯನ್ನು ನೆನಪಿಸಿಕೊಳ್ಳಲು ಭಯವಾಗುತ್ತಿದೆ. ಕರಾಳ ಅಪಾಯದ ಅವಧಿ ಅದಾಗಿತ್ತು. ವಾಕ್ ಸ್ವಾತಂತ್ರ್ಯ ಮಾತ್ರವಲ್ಲ, ಬದುಕುವ ಹಕ್ಕನ್ನು ಕಸಿದುಕೊಂಡಿತ್ತು. ಕೆಲವು ನೀತಿಗಳು ಸಹ ಕ್ರೂರ ರೂಪ ಪಡೆದುಕೊಂಡವು ಎಂದು ತಿಳಿಸಿದರು.. 
ಇನ್ನೂ ಪ್ರಧಾನಿ ಮೋದಿ ಅವರನ್ನು ಕಾಂಗ್ರೆಸ್ ಮುಖಂಡ ರಂದೀಪ್ ಸುರ್ಜೆವಾಲಾ  ಮೊಗಲ್ ದೊರೆ ಔರಂಗ ಜೇಬ್ ಗೆ ಹೋಲಿಸಿರುವುದಕ್ಕೆ ಅಸಮಾಧಾನ ವ್ಯಕ್ತ ಪಡಿಸಿದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT