ಆರ್. ವಿ. ದೇಶಪಾಂಡೆ 
ರಾಜ್ಯ

ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಪರಿಹಾರ ಕಾರ್ಯಕ್ಕೆ ಹಣದ ಕೊರತೆ ಇಲ್ಲ: ಆರ್.ವಿ. ದೇಶಪಾಂಡೆ

ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಲ್ಲಿ ಸಮರೋಪಾದಿಯಲ್ಲಿ ಪುನರ್ವಸತಿ ಕಾರ್ಯಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿ ಬಳಿಯಲ್ಲಿ ಸಮರ್ಪಕವಾದ ಹಣ ಲಭ್ಯವಿರುವುದಾಗಿ ಕಂದಾಯ ಸಚಿವ ಆರ್. ವಿ. ದೇಶಪಾಂಡೆ ತಿಳಿಸಿದ್ದಾರೆ.

ಚಿಕ್ಕಮಗಳೂರು : ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಲ್ಲಿ ಸಮರೋಪಾದಿಯಲ್ಲಿ ಪುನರ್ವಸತಿ ಕಾರ್ಯಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿ ಬಳಿಯಲ್ಲಿ ಸಮರ್ಪಕವಾದ ಹಣ ಲಭ್ಯವಿರುವುದಾಗಿ ಕಂದಾಯ ಸಚಿವ ಆರ್. ವಿ. ದೇಶಪಾಂಡೆ ತಿಳಿಸಿದ್ದಾರೆ.
ಚಿಕ್ಕಮಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ಜೂನ್ ತಿಂಗಳಲ್ಲಿ  ಜಿಲ್ಲೆಯಲ್ಲಿ 393 ಮಿಲಿ ಮೀಟರ್ ಮಳೆಯಾಗಿದೆ. ರಾಜ್ಯದ ಎಲ್ಲಾ ಕಡೆಗಳಲ್ಲಿಯೂ ಉತ್ತಮ ಮಳೆಯಾಗಿದ್ದು,  ಪರಿಹಾರ ಕಾರ್ಯ ಕೈಗೊಳ್ಳಲು ಜಿಲ್ಲಾಧಿಕಾರಿಗಳ ಪಿಡಿ ನಿಧಿಯಲ್ಲಿ 5.90 ಕೋಟಿ ರೂ. ಹಣ ಇರಿಸಲಾಗಿದೆ.  ಪ್ರತಿ ತಾಲೂಕುಗಳಿಗೂ 20 ಲಕ್ಷ ರೂಪಾಯಿ ನೀಡಲಾಗಿದ್ದು,  ಏಲ್ಲಿಯೂ ನಿಧಿಯ ಕೊರತೆ ಇಲ್ಲ ಎಂದು ಸ್ಪಷ್ಪಪಡಿಸಿದರು.
 ಮಳೆಯಿಂದಾಗಿ  ಮಾನವ ಪ್ರಾಣಿ ಹಾನಿ ಕುರಿತು ಎಲ್ಲಿಯೂ ವರದಿಯಾಗಿಲ್ಲ, ಆದರೆ, ಶೃಂಗೇರಿ ಶಾಸಕರು  ಒಬ್ಬರು ಸಾವನ್ನಪ್ಪಿರುವುದಾಗಿ ತಿಳಿಸಿದ್ದಾರೆ. ಮಳೆಯಿಂದಾಗಿ  ಮೃತ ಕುಟುಂಬ ಸದಸ್ಯರಿಗೆ 5 ಲಕ್ಷ ರೂ. ಶೇ. 75 ರಷ್ಟು ಮನೆ ಹಾನಿಗೊಳಗಾದವರಿಗೆ 95 ಸಾವಿರ, ಪೂರ್ತಿ ಹಾನಿಯಾಗಿದ್ದರೆ 1 ಲಕ್ಷದ  1 ಸಾವಿರ ರೂಪಾಯಿ ನೀಡಲಾಗುತ್ತಿದ್ದು, ಒಟ್ಟಾರೇ, ಮಳೆಯಿಂದಾದ ಸಾರ್ವಜನಿಕ ಆಸ್ತಿಪಾಸ್ತಿ ಮೊತ್ತ ಅಂದಾಜು 24. 19 ಕೋಟಿಯಷ್ಟಿದೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್ ಮತ್ತೊಮ್ಮೆ ಕತಾರ್ ಮೇಲೆ ದಾಳಿ ಮಾಡಿದರೆ, ಸೌತ್ ಪಾರ್ಸ್ ಅನಿಲ ಸ್ಥಾವರ ಮೇಲೆ ಯುದ್ಧ ಖಂಡಿತ: Donald Trump

ಉಪಚುನಾವಣೆ: ಯುಗಾದಿ ಹಬ್ಬದ ದಿನವೇ ಬಾಗಲಕೋಟೆ, ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿಗಳ ಘೋಷಣೆ

ನಮ್ಮ ರಾಜ್ಯಕ್ಕೆ 44 ಸಾವಿರ ವಾಣಿಜ್ಯ ಸಿಲಿಂಡರ್ ಅವಶ್ಯಕತೆಯಿದೆ, ಪೂರೈಕೆಯಾಗುತ್ತಿರುವುದು ಕೇವಲ 9 ಸಾವಿರ: ಸಚಿವ ಕೆ ಹೆಚ್ ಮುನಿಯಪ್ಪ

ಯುಗಾದಿ, ರಂಜಾನ್ ರಜೆ: ಬೆಂಗಳೂರಿನಿಂದ ವಿವಿಧೆಡೆ ಸಂಚಾರಕ್ಕೆ ವಿಶೇಷ ರೈಲು ಸೇವೆ, ವೇಳಾಪಟ್ಟಿ ಹೀಗಿದೆ...

ನಾಡಿನೆಲ್ಲೆಡೆ ಯುಗಾದಿ ಸಂಭ್ರಮ-ಪೂಜೆ, ಹಬ್ಬದೂಟ ತಯಾರಿಯಲ್ಲಿ ಜನತೆ, ವ್ಯಾಪಾರ ಭರಾಟೆ ಜೋರು

SCROLL FOR NEXT