ಮೈಸೂರು: ಖಾಸಗಿ ಬಸ್-ಆಟೋ ಮುಖಾಮುಖಿ ಡಿಕ್ಕಿ, ಮೂವರು ಸಾವು 
ರಾಜ್ಯ

ಮೈಸೂರು: ಖಾಸಗಿ ಬಸ್-ಆಟೋ ಮುಖಾಮುಖಿ ಡಿಕ್ಕಿ, ಮೂವರು ಸಾವು

ಖಾಸಗಿ ಬಸ್ ಹಾಗೂ ಗೂಡ್ಸ್ ಆಟೋ ರಿಕ್ಷಾ ಪರಸ್ಪರ ಡಿಕ್ಕಿಯಾದ ಪರಿಣಾಮ ಇಬ್ಬರು ಮಹಿಳೆಯರು ಸೇರಿ ಮೂವರು ಮೃತಪಟ್ಟು 6 ಮಂದಿ ಗಾಯಗೊಂಡಿರುವ ಘಟನೆ......

ಮೈಸೂರು: ಖಾಸಗಿ ಬಸ್ ಹಾಗೂ ಗೂಡ್ಸ್ ಆಟೋ ರಿಕ್ಷಾ ಪರಸ್ಪರ ಡಿಕ್ಕಿಯಾದ ಪರಿಣಾಮ ಇಬ್ಬರು ಮಹಿಳೆಯರು ಸೇರಿ ಮೂವರು ಮೃತಪಟ್ಟು 6 ಮಂದಿ ಗಾಯಗೊಂಡಿರುವ ಘಟನೆ ಮೈಸೂರು ಜಿಲ್ಲೆ ಟಿ.ನರಸೀಪುರ ತಾಲೂಕು ಮೂಗೂರು ಗ್ರಾಮದಲ್ಲಿ ನಡೆದಿದೆ.
ಶಿವಮ್ಮ ((70),  ರತ್ನಮ್ಮ (50) ಹಾಗೂ ರಿಕ್ಷಾ ಚಾಲಕ  ಮಹಾದೇವ ಸ್ವಾಮಿ ಅಲಿಯಾಸ್ ಸುರೇಶ್ (24)  ಮೃತ ದುರ್ದೈವಿಗಳಾಗಿದ್ದು ಇವರೆಲ್ಲರೂ ಚಾಮರಾಜನಗರ ಜಿಲ್ಲೆ ಹಾನಪುರ ನಿವಾಸಿಗಳಾಗಿದ್ದಾರೆಂದು ತಿಳಿದುಬಂದಿದೆ.
ಹಾನಪುರದ ಅನ್ನಪೂರ್ಣ ಮತ್ತು ಶಂಕರ್, ಚೆನ್ನೇನನಿಂಗನಹಳ್ಳಿಯ ಬೃಂದಾ ಹಾಗೂ ಕಮಲಮ್ಮ, ನಿಂಗನಾಪುರ ಗ್ರಾಮದ ನಂದಿನಿ ಮತ್ತು ಚೇತನ್. ಗಾಯಗೊಂಡಿದ್ದಾರೆ.
ಶಿವಮ್ಮ ಹಾಗೂ ಆಟೋ ಚಾಲಕ ಸ್ವಾಮಿ ಸ್ಥಳದಲ್ಲಿ ಸಾವನ್ನಪ್ಪಿದ್ದರೆ ರತ್ನಮ್ಮ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಗಾಯಾಳುಗಳನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅನಾಪುರದ ಮಹಾದೇವ ಸ್ವಾಮಿ ಅಲಿಯಾಸ್ ರವಿ ಅವರ ಸಂಬಂಧಿಗಳು ಆಟೋದಲ್ಲಿ ನಂಜನಗೂಡಿಗೆ ತೆರಳುತ್ತಿದ್ದರು. ಆಟೋ ಮೂಗೂರು ಗ್ರಾಮದತ್ತ ಧಾವಿಸುತ್ತಿದ್ದಾಗ ಬಿ.ಆರ್. ಹಿಲ್ಸ್ ಕಡೆಯಿಂದ ಟಿ. ನರಸಿಪುರಕ್ಕೆ ಬರುತ್ತಿದ್ದ ಖಾಸಗಿ ಬಸ್ ಮುಖಾಮುಖಿ ಡಿಕ್ಕಿಯಾಗಿದೆ.
ಘಟನೆ ಕುರಿತಂತೆ ಟಿ. ನರಸೀಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

ಅಭಿಷೇಕ್ ಶರ್ಮಾನನ್ನು ಮೂರೇ ಎಸೆತಗಳಲ್ಲಿ ಔಟ್ ಮಾಡುತ್ತೇನೆ: ಪಾಕ್ ನ 152.65 kmph ವೇಗಿಯ ಉದ್ಧಟತನದ ಮಾತು

ಡಿಕೆ ಶಿವಕುಮಾರ್ ಇದ್ದ ವೇದಿಕೆಯಲ್ಲೇ ಹೈಡ್ರಾಮಾ: RSS ಸಮವಸ್ತ್ರದಲ್ಲಿ ಬಿಜೆಪಿ ಶಾಸಕ ಮುನಿರತ್ನ ಧರಣಿ! Video

SCROLL FOR NEXT