ಭಾರೀ ಮಳೆ: ಆಗುಂಬೆ ಘಾಟ್ ನಲ್ಲಿ ಭೂ ಕುಸಿತ, ಸಂಚಾರ ಅಸ್ತವ್ಯಸ್ಥ 
ರಾಜ್ಯ

ಭಾರೀ ಮಳೆ: ಆಗುಂಬೆ ಘಾಟ್ ನಲ್ಲಿ ಭೂ ಕುಸಿತ, ಸಂಚಾರ ಅಸ್ತವ್ಯಸ್ಥ

ಕಳೆದೆರಡು ದಿನಗಳಿಂದ ಸುರ್ರಿಯುತ್ತಿರುವ ಭಾರೀ ಮಳೆಗೆ ಕರ್ನಾಟಕ ಕರಾವಳಿ, ಮಲೆನಾಡಿನ ಭಾಗದ ಜನ ಕಂಗಾಲಾಗಿದ್ದಾರೆ.

ಶಿವಮೊಗ್ಗ: ಕಳೆದೆರಡು ದಿನಗಳಿಂದ ಸುರ್ರಿಯುತ್ತಿರುವ ಭಾರೀ ಮಳೆಗೆ ಕರ್ನಾಟಕ ಕರಾವಳಿ, ಮಲೆನಾಡಿನ ಭಾಗದ ಜನ ಕಂಗಾಲಾಗಿದ್ದಾರೆ. ಮಳೆಯ ಕಾರಣ ಶಿವಮೊಗ್ಗ ಹಾಗೂ ಉಡುಪಿಯನ್ನು ಸಂಪರ್ಕಿಸುವ ಆಗುಂಬೆ ಘಾಟ್ ನಲ್ಲಿ ಭೂ ಕುಸಿತ ಉಂಟಾಗಿದೆ,
ಆಗುಂಬೆ ಘಾಟಿಯ 7ನೇ ತಿರುವಿನಲ್ಲಿ ಭಾರೀ ಪ್ರಮಾಣದಲ್ಲಿ ಭೂ ಕುಸಿತ ಸಂಭವಿಸಿದ್ದು ರಸ್ತೆ ಸಂಚಾರ ಅಸ್ತವ್ಯಸ್ಥವಾಗಿದೆ. ಗುರುವಾರ ಬೆಳಿಗ್ಗೆ ಈ ಘಟನೆ ನಡೆದಿದೆ.
ಭೂ ಕುಸಿತದ ಪರಿಣಾಮ ಕೆಲ ಕಾಲ ವಾಹನ ಸಂಚಾರಕ್ಕೆ ಅಡಚಣೆಯಾಗಿದ್ದು ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಹಾಗೂ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಇದೀಗ ಈ ಮಾರ್ಗದಲ್ಲಿ ಭಾರೀ ವಾಹನ ಸಂಚಾರವನ್ನು ಸಂಪೂರ್ಣ ನಿಷೇಧಿಸಲಾಗಿದೆ.
ಇದೇ ರೀತಿ ಮಳೆ ಮುಂದುವರಿದಲ್ಲಿ 7ನೇ ತಿರುವಿನ ಮುಂಭಾಗಸ್ ಸಂಪೂರ್ಣವಾಗಿ ಕುಸಿಯುವ ಸಾಧ್ಯತೆ ದಟ್ಟವಾಗಿದೆ. 
ಇನ್ನು ಇಲ್ಲಿ ನಿರ್ಮಾಣವಾಗಿರುವ ತಡೆಗೋಡೆ ಸಹ ಅವೈಜ್ಞಾನಿಕವಾಗಿದೆ.  ಇದಾಗಲೇ ಹಲವು ವಾಹನಗಳು ಘಾಟ್ ಮೇಲಿನಿಂದ ಕೆಳಗುರುಳಿದೆ. ಅಲ್ಲದೆ ಘಾಟ್ ನ ಕೆಲವು ಕಡೆ ಹಾಕಿರುವ  ಸ್ಟೀಲ್ ತಡೆಗೋಡೆ ಸಹ ದುರ್ಬಲವಾಗಿದೆ. ಈ ಕುರಿತಂತೆ ಸ್ಥಳೀಯರು ಸಾಕಷ್ಟು ಬಾರಿ ಎಚ್ಚರಿಸಿದ್ದರೂ ಪ್ರಯೋಜನವಾಗಿಲ್ಲ.
ಸಧ್ಯ ಗುಡ್ಡ ಕುಸಿದ ಸ್ಥಳದಲ್ಲಿ ಕೆಂಪು ರಿಬ್ಬನ್ ಪಟ್ಟಿ ಕಟ್ಟಿದ್ದು ಅಪಾಯದ ಸ್ಥಳ ಎಂದು ಸಾರ್ವಜನಿಕರಿಗೆ ತಿಳಿಯುವಂತೆ ಮಾಡಲಾಗಿದೆ. ಈ ಘಾಟ್ ಮೂಲಕ ಸಂಚರಿಸುವಾಗ ಪ್ರಯಾಣಿಕರು  ಅತೀ ಜಾಗರೂಕತೆಯಿಂದ ಸಂಚರಿಸಬೇಕಾಗಿದೆ.
ಒಟ್ಟಾರೆ ಕಳೆದ ಕೆಲವು ದಿನಗಳ ಹಿಂದೆ ಸುರಿದ ಮಳೆಗೆ ಚಾರ್ಮಾಡಿ ಘಾಟ್ ನಲ್ಲಿ ಭೂ ಕುಸಿತವಾಗಿ ಭಾರೀ ಹಾನಿಯಾಗಿದ್ದ ನೆನಪು ಮಾಸುವ ಮುನ್ನವೇ ಆಗುಂಬೆ ಘಾಟ್ ನಲ್ಲಿ ಸಹ ಇದೇ ಪರಿಸ್ಥಿತಿ ಮರುಕಳಿಸಿರುವುದು ವಿಪರ್ಯಾಸವೇ ಸರಿ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

SCROLL FOR NEXT