ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡಿದ್ದ ಶಾಸಕ ಉಮೇಶ್ ಜಾಧವ್ 
ರಾಜ್ಯ

ಕಾರ ಹುಣ್ಣಿಮೆ ಸಂಭ್ರಮಾಚರಣೆ ವೇಳೆ ಚಿಂಚೋಳಿ ಶಾಸಕ ಉಮೇಶ್ ಜಾಧವ್ ಗೆ ಗಾಯ

ಕಾರಹುಣ್ಣಿಮೆ ಸಂಭ್ರಮಾಚರಣೆ ವೇಳೆ ವೇಗವಾಗಿ ಬಂದ ಬಂಡಿ ಶಾಸಕ ಡಾ.ಉಮೇಶ್ ಜಾಧವ್ ಕಾಲು ಮೇಲೆ ಹಾಯ್ದ ಪರಿಣಾಮ ಶಾಸಕರು ಗಾಯಗೊಂಡಿರುವ ...

ಕಲಬುರಗಿ: ಕಾರಹುಣ್ಣಿಮೆ ಸಂಭ್ರಮಾಚರಣೆ ವೇಳೆ ವೇಗವಾಗಿ ಬಂದ ಬಂಡಿ ಶಾಸಕ ಡಾ.ಉಮೇಶ್ ಜಾಧವ್ ಕಾಲು ಮೇಲೆ ಹಾಯ್ದ ಪರಿಣಾಮ ಶಾಸಕರು ಗಾಯಗೊಂಡಿರುವ ಘಟನೆ ಕಲಬುರ್ಗಿ ಜಿಲ್ಲೆ ಚಿಂಚೋಳಿ ಪಟ್ಟಣದಲ್ಲಿ ನಡೆದಿದೆ.
ಚಿಂಚೋಳಿ ಶಾಸಕರಾಗಿರುವ ಉಮೇಶ್ ಜಾಧವ್, ಚಿಂಚೋಳಿ ಪಟ್ಟಣದಲ್ಲಿ ನಡೆದ ಕಾರ ಹುಣ್ಣಿಮೆ ಉತ್ಸವದಲ್ಲಿ ಪಾಲ್ಗೊಂಡಿದ್ದರು.  ಮೊದಲು ಪೂಜೆ ಸಲ್ಲಿಸಿ  ಚಕ್ಕಡಿ ಓಡಿಸಿ ಸಂಭ್ರಮಿಸಿದ ಜಾಧವ್, ನಂತರ ಮೊಬೈಲ್ ನಲ್ಲಿ ಮಾತನಾಡುತ್ತಾ ನಿಂತಿದ್ದರು, ಈ ವೇಳೆ ವೇಗವಾಗಿ ಒಡಿ ಬಂದ ಎತ್ತಿನ ಬಂಡಿ ನಿಂತಿದ್ದ ಗುಂಪಿನ ಮೇಲೆ ನುಗ್ಗಿದೆ.
ಈ ವೇಳೆ ಉಮೇಶ್ ಜಾಧವ್ ಅವರ ಮೇಲೆ ಬಂಡಿ ಹಾಯ್ದಿದ್ದು, ಬಲಗಾಲು ಮತ್ತು ಭುಜಕ್ಕೆ ಗಾಯಗಳಾಗಿವೆ. ಸ್ವಲ್ಪದರಲ್ಲಿಯೇ ಜಾಧವ್ ಅವರು, ಭಾರಿ ಅಪಾಯದಿಂದ ಪಾರಾಗಿದ್ದಾರೆ. ಘಟನೆಯಲ್ಲಿ ಇಬ್ಬರಿಗೆ ಸಣ್ಣ-ಪುಟ್ಟ ಗಾಯಗಳಾಗಿವೆ. ಇನ್ನೂ ಇಬ್ಬರಿಗೆ ಗಾಯಗಳಾಗಿವೆ. 
ಇದೇ ವೇಳೆ ಎತ್ತಿನ ಬಂಡಿ ಮೇಲಿಂದ ಬಿದ್ದು 35 ವರ್ಷದ ರಾಜು ಚೌಹಾನ್ ಎಂಬಾತ ಮೃತ ಪಟ್ಟಿದ್ದಾನೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತದ ಚುನಾವಣಾ ವ್ಯವಸ್ಥೆಯ ವಿಶ್ವಾಸಾರ್ಹತೆ ಬಗ್ಗೆ ಜಾಗತಿಕವಾಗಿ ಅತ್ಯುತ್ತಮ ಸ್ಪಷ್ಟ ಅಭಿಪ್ರಾಯ- ಟ್ರಂಪ್ ಹೇಳಿಕೆ ಬೆನ್ನಲ್ಲೇ MEA ಪ್ರತಿಕ್ರಿಯೆ!

ಮಾಜಿ ಸಚಿವ ಬಿ. ಸಿ. ನಾಗೇಶ್ ನಿಧನ: ನಾಳೆ ತಿಪಟೂರಿನಲ್ಲಿ ಅಂತ್ಯಕ್ರಿಯೆ!

ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ನಕಲಿ ಔಷಧಿ ಮರುಪ್ಯಾಕಿಂಗ್ ಬೃಹತ್ ಜಾಲ ಪತ್ತೆ: 5 ಕೋಟಿ ರೂ. ಮೌಲ್ಯದ ವಸ್ತುಗಳು ವಶಕ್ಕೆ!

ಪಸಿಂದು ಗೋಲ್ಡನ್ ಡಕೌಟ್: ಆಡಿದ 2ನೇ ಪಂದ್ಯದಲ್ಲೇ ಕುಂಬ್ಳೆ ದಾಖಲೆ ಸರಿಗಟ್ಟಿದ Team India ಯುವ ಸ್ಪಿನ್ನರ್ ಮಾನವ್ ಸುತಾರ್!

ದೇವೇಗೌಡರ ಕೂಸನ್ನು ಹಾದಿ ತಪ್ಪಿಸಿ ಯಾರಪ್ಪನಿಗೆ ಕೊಡಲು ಹೊರಟಿದ್ದೀರಿ ಮಿಸ್ಟರ್ ಡಿ.ಕೆ. ಶಿವಕುಮಾರ್? ತಾಕತ್ ಇದ್ರೆ ಚರ್ಚೆಗೆ ಬನ್ನಿ, ಕುಮಾರಸ್ವಾಮಿ ಸವಾಲು!