ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡಿದ್ದ ಶಾಸಕ ಉಮೇಶ್ ಜಾಧವ್ 
ರಾಜ್ಯ

ಕಾರ ಹುಣ್ಣಿಮೆ ಸಂಭ್ರಮಾಚರಣೆ ವೇಳೆ ಚಿಂಚೋಳಿ ಶಾಸಕ ಉಮೇಶ್ ಜಾಧವ್ ಗೆ ಗಾಯ

ಕಾರಹುಣ್ಣಿಮೆ ಸಂಭ್ರಮಾಚರಣೆ ವೇಳೆ ವೇಗವಾಗಿ ಬಂದ ಬಂಡಿ ಶಾಸಕ ಡಾ.ಉಮೇಶ್ ಜಾಧವ್ ಕಾಲು ಮೇಲೆ ಹಾಯ್ದ ಪರಿಣಾಮ ಶಾಸಕರು ಗಾಯಗೊಂಡಿರುವ ...

ಕಲಬುರಗಿ: ಕಾರಹುಣ್ಣಿಮೆ ಸಂಭ್ರಮಾಚರಣೆ ವೇಳೆ ವೇಗವಾಗಿ ಬಂದ ಬಂಡಿ ಶಾಸಕ ಡಾ.ಉಮೇಶ್ ಜಾಧವ್ ಕಾಲು ಮೇಲೆ ಹಾಯ್ದ ಪರಿಣಾಮ ಶಾಸಕರು ಗಾಯಗೊಂಡಿರುವ ಘಟನೆ ಕಲಬುರ್ಗಿ ಜಿಲ್ಲೆ ಚಿಂಚೋಳಿ ಪಟ್ಟಣದಲ್ಲಿ ನಡೆದಿದೆ.
ಚಿಂಚೋಳಿ ಶಾಸಕರಾಗಿರುವ ಉಮೇಶ್ ಜಾಧವ್, ಚಿಂಚೋಳಿ ಪಟ್ಟಣದಲ್ಲಿ ನಡೆದ ಕಾರ ಹುಣ್ಣಿಮೆ ಉತ್ಸವದಲ್ಲಿ ಪಾಲ್ಗೊಂಡಿದ್ದರು.  ಮೊದಲು ಪೂಜೆ ಸಲ್ಲಿಸಿ  ಚಕ್ಕಡಿ ಓಡಿಸಿ ಸಂಭ್ರಮಿಸಿದ ಜಾಧವ್, ನಂತರ ಮೊಬೈಲ್ ನಲ್ಲಿ ಮಾತನಾಡುತ್ತಾ ನಿಂತಿದ್ದರು, ಈ ವೇಳೆ ವೇಗವಾಗಿ ಒಡಿ ಬಂದ ಎತ್ತಿನ ಬಂಡಿ ನಿಂತಿದ್ದ ಗುಂಪಿನ ಮೇಲೆ ನುಗ್ಗಿದೆ.
ಈ ವೇಳೆ ಉಮೇಶ್ ಜಾಧವ್ ಅವರ ಮೇಲೆ ಬಂಡಿ ಹಾಯ್ದಿದ್ದು, ಬಲಗಾಲು ಮತ್ತು ಭುಜಕ್ಕೆ ಗಾಯಗಳಾಗಿವೆ. ಸ್ವಲ್ಪದರಲ್ಲಿಯೇ ಜಾಧವ್ ಅವರು, ಭಾರಿ ಅಪಾಯದಿಂದ ಪಾರಾಗಿದ್ದಾರೆ. ಘಟನೆಯಲ್ಲಿ ಇಬ್ಬರಿಗೆ ಸಣ್ಣ-ಪುಟ್ಟ ಗಾಯಗಳಾಗಿವೆ. ಇನ್ನೂ ಇಬ್ಬರಿಗೆ ಗಾಯಗಳಾಗಿವೆ. 
ಇದೇ ವೇಳೆ ಎತ್ತಿನ ಬಂಡಿ ಮೇಲಿಂದ ಬಿದ್ದು 35 ವರ್ಷದ ರಾಜು ಚೌಹಾನ್ ಎಂಬಾತ ಮೃತ ಪಟ್ಟಿದ್ದಾನೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಮ ಮಂದಿರ ದೇಣಿಗೆ ಲೂಟಿ: BJP, RSSಗೆ, 'ಡೊನೇಷನ್ ಫಸ್ಟ್', 'ದೇಶ ನಂತರ': ಮೋದಿ ಮೌನ ಪ್ರಶ್ನಿಸಿದ ಪ್ರಿಯಾಂಕ್ ಖರ್ಗೆ

ನರ್ಸ್ ಸರಳಾ ಭಟ್ ಅತ್ಯಾಚಾರ, ಕೊಲೆ: 36 ವರ್ಷಗಳ ಬಳಿಕ ಚಾರ್ಜ್‌ಶೀಟ್‌ನಲ್ಲಿ ಮಾಸ್ಟರ್ ಮೈಂಡ್ ಯಾಸಿನ್ ಮಲಿಕ್!

Cabinet Expansion: ಇನ್ನು 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ; ಸಚಿವ ಎಂಬಿ ಪಾಟೀಲ್

Video ಮುಂಬೈನಲ್ಲಿ ಭಾರೀ ಮಳೆ: ಶಾಲಾ ಬಸ್‌ ಮೇಲೆ ಬಿದ್ದ ಬೃಹತ್‌ ಮರ; ಓರ್ವ ವಿದ್ಯಾರ್ಥಿ ಸಾವು, 10 ಮಂದಿಗೆ ಗಾಯ

ಭಾರತೀಯ ಸೈನಿಕರ ಸಾವಿನ ಬಗ್ಗೆ ಸಂಸತ್ ಗೆ ತಪ್ಪು ಮಾಹಿತಿ ಆರೋಪ: ರಕ್ಷಣಾ ಸಚಿವ ರಾಜನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್ ಹಕ್ಕುಚ್ಯುತಿ ನೋಟಿಸ್