ಬಿಬಿಎಂಪಿ 
ರಾಜ್ಯ

ಬಿಬಿಎಂಪಿ ವಿಭಜನೆ: ಸಿಎಂ, ಡಿಸಿಎಂಗೆ ವರದಿ ಸಲ್ಲಿಸಿದ ಸಮಿತಿ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯನ್ನು ಐದು ಭಾಗಗಳಾಗಿ ವಿಭಜಿಸಬೇಕು ಹಾಗೂ ಬೆಂಗಳೂರಿನ ಸಮಗ್ರತೆಯನ್ನು ಕಾಪಾಡಲು ಗ್ರೇಟರ್ ಬೆಂಗಳೂರು ...

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯನ್ನು ಐದು ಭಾಗಗಳಾಗಿ ವಿಭಜಿಸಬೇಕು  ಹಾಗೂ ಬೆಂಗಳೂರಿನ ಸಮಗ್ರತೆಯನ್ನು ಕಾಪಾಡಲು ಗ್ರೇಟರ್ ಬೆಂಗಳೂರು ಕಾರ್ಪೋರೇಷನ್ ಅಡಿಯಲ್ಲಿ ತರಬೇಕು ಎಂದು ಬಿಬಿಎಂಪಿ ಪುನರ್ ವಿಂಗಡನಾ ತಜ್ಞರ ಸಮಿತಿ ಸರ್ಕಾರಕ್ಕೆ ವರದಿ ಸಲ್ಲಿಸಿದೆ.
ನಿವೃತ್ತ ಐಎಎಸ್ ಅಧಿಕಾರಿ ಬಿ.ಎಸ್ ಪಾಟೀಲ್ ನೇತೃತ್ವದ ತಜ್ಞರ ಸಮಿತಿ ಮುಖ್ಯಮಂತ್ರಿ ಕುಮಾರ ಸ್ವಾಮಿ ಮತ್ತು ಡಿಸಿಎಂ ಪರಮೇಶ್ವರ್ ಅವರಿಗೆ ವರದಿ ಸಲ್ಲಿಸಿದೆ,
ನವೆಂಬರ್ 2014ರಲ್ಲಿ ಸಿದ್ದರಾಮಯ್ಯ ಸರ್ಕಾರ ಬಿಬಿಎಂಪಿ ವಿಭಜನೆ ಸಂಬಂಧ ಅಧ್ಯಯನ ನಡೆಸಲು ಸಮಿತಿ ರಚಿಸಿತ್ತು, ನಿವೃತ್ತ ಐಎಎಸ್ ಅಧಿಕಾರಿಗಳಾದ ಪಾಟೀಲ್, ನಗರ ತಜ್ಞ ವಿ. ರವಿಚಂದ್ರ ಮತ್ತು ವಿ ಮಣಿವಣ್ಣನ್ ಇದರ ಸದಸ್ಯರಾಗಿದ್ದರು, 
ಹಳೆ ನಗರ ಪ್ರದೇಶದಲ್ಲಿ 30000 ಜನಸಂಖ್ಯೆಗೆ ಅನುಗುಣವಾಗಿ ವಾರ್ಡ್ ಪುನರ್ ವಿಂಗಡಣೆ ಮಾಡಿ 400 ವಾರ್ಡ್ ರಚನೆಗೂ ಸಮಿತಿ ಶಿಫಾರಸ್ಸು ಮಾಡಿದೆ. ಗ್ರೇಟರ್ ಬೆಂಗಳೂರು ಅಥಾರಿಟಿ ಆಫ್ ಇಂಡಿಯಾಗೆ ಜನರಿಂದಲೇ ನೇರವಾಗಿ ಮೇಯರ್ ಇನ್ ಕೌನ್ಸಿಲ್ ಆಯ್ಕೆಯಾಗಬೇಕು ಎಂದು ಪಾಟೀಲ್ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West-Asia war: ಅಮೆರಿಕಾ-ಇರಾನ್ ಸಂಘರ್ಷ ಮತ್ತಷ್ಟು ತೀವ್ರ; ಹಾರ್ಮುಜ್ ಜಲಸಂಧಿ ಮೇಲೆ ನೌಕಾ ದಿಗ್ಬಂಧನ, ಜಾಗತಿಕ ಮಾರುಕಟ್ಟೆಗಳಲ್ಲಿ ಹೆಚ್ಚಿದ ಆತಂಕ

'ಅಲ್ಪಸಂಖ್ಯಾತರ ಚಾಂಪಿಯನ್‌ ಎನಿಸಿಕೊಂಡವರ ಡಬಲ್‌ ಗೇಮ್‌: ದಾವಣಗೆರೆಯಲ್ಲಿ ನಮ್ಮ ಅಭ್ಯರ್ಥಿಯನ್ನೇ ಸೋಲಿಸಲು ಯತ್ನ'

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

SCROLL FOR NEXT