ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು; ಪೊಲೀಸರ ವೇಷದಲ್ಲಿ ದರೋಡೆ ಮಾಡುತ್ತಿದ್ದ 4 ಖದೀಮರ ಬಂಧನ

ಪೊಲೀಸರ ವೇಷದಲ್ಲಿ ಹಗಲು ದರೋಡೆ ಮಾಡುತ್ತಿದ್ದ ಖತರ್ನಾಕ್ ಖದೀಮರನ್ನು ಬಂಧನಕ್ಕೊಳಪಡಿಸುವಲ್ಲಿ ಪೊಲೀಸು ಯಶಸ್ವಿಯಾಗಿದ್ದಾರೆ...

ಬೆಂಗಳೂರು: ಪೊಲೀಸರ ವೇಷದಲ್ಲಿ ಹಗಲು ದರೋಡೆ ಮಾಡುತ್ತಿದ್ದ ಖತರ್ನಾಕ್ ಖದೀಮರನ್ನು ಬಂಧನಕ್ಕೊಳಪಡಿಸುವಲ್ಲಿ ಪೊಲೀಸು ಯಶಸ್ವಿಯಾಗಿದ್ದಾರೆ. 
ಬಂಧಿತರನ್ನು ರಾಜಾಜಿ ನಗರದ ನಿವಾಸಿ ಹೇಮಂತ್, ವಡ್ಡರಪಾಳ್ಯದ ಮನೋಜ್. ಬಿ, ಮುದಲಪಾಳ್ಯದ ಲೋಕೇಶ್ ಎಂ, ಸುಂಕದಕಟ್ಟೆಯ ಚೇತನ್ ಆರ್ ಎಂದು ಗುರ್ತಿಸಲಾಗಿದೆ. 
ವಾಹನಗಳಲ್ಲಿ ದೇವಾಲಯಕ್ಕೆ ಬರುತ್ತಿದ್ದ ಜನರನ್ನು ನಿರ್ಜನ ಪ್ರದೇಶಗಳಲ್ಲಿ ನಿಲ್ಲಿಸುತ್ತಿದ್ದ ಖದೀಮರು ದರೋಡೆ ಮಾಡುತ್ತಿದ್ದರು. ಕದ್ದ ವಾಹನಗಳಿಗೆ ನಕಲಿ ನಂಬರ್ ಪ್ಲೇಟ್'ಗಳನ್ನು ಬಳಸಿ, ಪೊಲೀಸರಿಗೆ ಚಳ್ಳೆ ಹಣ್ಣು ತಿನ್ನಿಸುತ್ತಿದ್ದರು. ಹಲವು ಕಾನೂನು ಬಾಹಿರ ಚಟುವಟಿಕೆಗಳಲ್ಲಿ ಭಾಗಿಯಾಗಿರುವ ಖದೀಮರ ಗುಂಪಿನ ವಿರುದ್ಧ ಈವರೆಗೂ 8 ಪ್ರಕರಣಗಳು ದಾಖಲಾಗಿವೆ. 
ದರೋಡೆಕೋರರನ್ನು ಹಿಡಿಯುವ ಸಲುವಾಗಿ ಮಾದನಾಯಕನಹಳ್ಲಿ ಪೊಲೀಸರು ವಿಶೇಷ ತಂಡವವನ್ನು ರಚನೆ ಮಾಡಿದ್ದರು. ಇದರಂತೆ ಆರೋಪಿಗಳು ಬಳಕೆ ಮಾಡುತ್ತಿದ್ದ ವಾಹನವನ್ನು ಟ್ರ್ಯಾಕ್ ಮಾಡಿ, ಮೊದಲು ಹೇಮಂತ್ ಎಂಬ ಆರೋಪಿಯನ್ನು ಬಂಧನಕ್ಕೊಳಪಡಿಸಿದ್ದಾರೆ. 
ವಿಚಾರಣೆ ವೇಳೆ ಹೇಮಂತ್ ಗುಂಪಿನಲ್ಲಿದ್ದ ಮೂವರು ಆರೋಪಿಗಳ ಬಗ್ಗೆ ಬಾಯ್ಬಿಟ್ಟಿದ್ದಾನೆ. ವಿಚಾರಣೆ ಸುಲಭವಾಗಿ ಹಣ ಮಾಡುವ ಸಲುವಾಗಿ ದರೋಡೆ ಹಾದಿ ಹಿಡಿದಿರುವುದಾಗಿ ಖದೀಮರು ಹೇಳಿಕೊಂಡಿದ್ದಾರೆ. 
ಪ್ರಕರಣ ಸಂಬಂಧ ಆರೋಪಿಗಳಿಂದ 2 ಕಾರು, 5 ದ್ವಿಚಕ್ರ ವಾಹನಗಳು, ಮೊಬೈಲ್ ಫೋನ್ ಗಳು, ಲ್ಯಾಪ್ ಟಾಪ್'ಗಳು ಮತ್ತು ಚಿನ್ನದ ಆಭರಣಗಳು, ರೂ.9 ಲಕ್ಷ ಹಣವನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

SCROLL FOR NEXT