ಸಂಗ್ರಹ ಚಿತ್ರ 
ರಾಜ್ಯ

ಮಹಾಮಳೆಯಿಂದ ಆಗುಂಬೆ ಘಾಟ್‌ನಲ್ಲಿ ಸ್ಥಗಿತಗೊಂಡಿದ್ದ ಬಸ್ ಸಂಚಾರ ಪುನಾರಂಭ

ಮಹಾಮಳೆಯಿಂದಾಗಿ ಭೂ ಕುಸಿತ ಸಂಭವಿಸಿದ್ದರಿಂದ ಆಗುಂಬೆ ಘಾಟ್‌ನಲ್ಲಿ ಸ್ಧಗಿತಗೊಂಡಿದ್ದ ಬಸ್ ಸಂಚಾರ ಪುನಾರಂಭಗೊಂಡಿದೆ...

ಉಡುಪಿ: ಮಹಾಮಳೆಯಿಂದಾಗಿ ಭೂ ಕುಸಿತ ಸಂಭವಿಸಿದ್ದರಿಂದ ಆಗುಂಬೆ ಘಾಟ್‌ನಲ್ಲಿ ಸ್ಧಗಿತಗೊಂಡಿದ್ದ ಬಸ್ ಸಂಚಾರ ಪುನಾರಂಭಗೊಂಡಿದೆ. 
ಭಾರೀ ಮಳೆಯಿಂದಾಗಿ ರಾಷ್ಟ್ರೀಯ ಹೆದ್ದಾರಿ 169ಎ ಆಗುಂಬೆ ಘಾಟ್ ನ ರಸ್ತೆಯ 7ನೇ ತಿರುವಿನಲ್ಲಿ ಭೂಕುಸಿತ ಸಂಭವಿಸಿತ್ತು. ಇದರಿಂದಾಗಿ ಟ್ರಾಫಿಕ್ ಸಮಸ್ಯೆ ಎದುರಾಗಿದ್ದು ಮುಂಜಾಗೃತ ಕ್ರಮವಾಗಿ ಬೃಹತ್ ಲಾರಿಗಳು ಸೇರಿದಂತೆ ಬಸ್ ಸಂಚಾರವನ್ನು ಸ್ಥಗಿತಗೊಳಿಸಲಾಗಿತ್ತು. 
ಆಗುಂಬೆ ಘಾಟ್ನ ತಡೆಗೋಡೆ ಜರಿದಿದ್ದು ತಾತ್ಕಾಲಿಕವಾಗಿ ಮರಳಿನ ಚೀಲವನ್ನು ಸೇರಿಸಿ ತಡೆಗೋಡೆ ಪುನರ್ ನಿರ್ಮಾಣ ಮಾಡಲಾಗಿದೆ. ಸದ್ಯ ಮಳೆ ಕಡಿಮೆಯಾಗಿದ್ದರಿಂದ ಬಸ್ ಸಂಚಾರ ಆರಂಭಿಸುವಂತೆ ಉಡುಪಿ ಜಿಲ್ಲೆಯ ಉಪ ಆಯುಕ್ತರಾದ ಪ್ರಿಯಾಂಕಾ ಮೇರಿ ಫ್ರಾನ್ಸಿಸ್ ಸೂಚಿಸಿದ್ದಾರೆ. 
ಸದ್ಯ ಉಡುಪಿ-ಶಿವಮೊಗ್ಗ ಮತ್ತು ಉಡುಪಿ-ಚಿಕ್ಕಮಗಳೂರು ಮಾರ್ಗದಲ್ಲಿ ಮಿನಿ ಬಸ್ ಸೇವೆಯನ್ನು ಆರಂಭಿಸಲಾಗಿದ್ದು ಬೃಹತ್ ವಾಹನಗಳ ಸಂಚಾರ ನಿಲ್ಲಿಸಲಾಗಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

ಬೆಂಗಳೂರು: ರಾತ್ರಿಯಿಡೀ ಸುರಿದ ಮಳೆಯಿಂದ ಹಲವೆಡೆ ಜಲಾವೃತ, ಸಂಚಾರ ದಟ್ಟಣೆ, ಇಂದಿನ IMD ವರದಿ!

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

ಬೆಳಗಾವಿ: ಬೀದಿ ನಾಯಿಗಳ ಅಟ್ಟಹಾಸ, 2 ವರ್ಷದ ಬಾಲಕಿ ಮೇಲೆ ಭೀಕರ ದಾಳಿ

SCROLL FOR NEXT