ಸಾಂದರ್ಭಿಕ ಚಿತ್ರ 
ರಾಜ್ಯ

ರಾಜ್ಯ ಸರ್ಕಾರಿ ನೌಕರರಿಗೆ ಮೂಲ ವೇತನದಲ್ಲಿ ಶೇ.30ರಷ್ಟು ಹೆಚ್ಚಳ

ಆರನೇ ವೇತನ ಆಯೋಗದ ಶಿಫಾರಸಿನಂತೆ ಸರ್ಕಾರಿ ನೌಕರರ ವೇತನ ಪರಿಷ್ಕರಣೆಯ ...

ಬೆಂಗಳೂರು; ಆರನೇ ವೇತನ ಆಯೋಗದ ಶಿಫಾರಸಿನಂತೆ ಸರ್ಕಾರಿ ನೌಕರರ ವೇತನ ಪರಿಷ್ಕರಣೆಯ ಅಧಿಸೂಚನೆಯನ್ನು ರಾಜ್ಯ ಸರ್ಕಾರ ಹೊರಡಿಸಿದೆ. ನೌಕರರ ಮೂಲ ವೇತನ ಮತ್ತು ಇತರ ಭತ್ಯೆ ಸೇರಿಸಿ ಶೇಕಡಾ 30ರಷ್ಟು ಹೆಚ್ಚಳ ಮಾಡುವಂತೆ 6ನೇ ವೇತನ ಆಯೋಗ ಶಿಫಾರಸು ಮಾಡಿದೆ.

ಇದು ಜುಲೈ 1, 2017ರಿಂದ ಪೂರ್ವಾನ್ವಯವಾಗಲಿದೆ. ಆದರೆ ವೇತನ ಹೆಚ್ಚಳ ಪ್ರಯೋಜನ ನೌಕರರಿಗೆ ಮುಂದಿನ ಏಪ್ರಿಲ್ 1ರಿಂದ ಜಾರಿಗೆ ಬರಲಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ರಾಜ್ಯ ಸರ್ಕಾರಿ ನೌಕರರ 2017 ಜುಲೈ 1ರ ವೇತನದ ಮೂಲಭತ್ಯೆ ಮತ್ತು ಡಿಎ ಆಧಾರದಲ್ಲಿ ಮುಂದಿನ ತಿಂಗಳು ಏಪ್ರಿಲ್ 1ರಿಂದ ಶೇಕಡಾ 30ರಷ್ಟು ವೇತನ ಪರಿಷ್ಕರಣೆಯಾಗಲಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಅದೇ ರೀತಿ ಪಿಂಚಣಿದಾರರಿಗೆ ಈಗಿರುವ ಕನಿಷ್ಠ ಮೊತ್ತ 4,800ರಿಂದ ಗರಿಷ್ಠ 8,500 ರೂಪಾಯಿಗಳಿಗೆ, 39,900 ರೂಪಾಯಿಗಳಿಂದ 75,300 ರೂಪಾಯಿಗಳಿಗೆ ಹಾಗೂ ಕೌಟುಂಬಿಕ ಪಿಂಚಣಿ ಮೊತ್ತ 4,800 ರೂಪಾಯಿಗಳಿಂದ 8,500 ರೂಪಾಯಿಗಳಿಗೆ ಮತ್ತು 23,940ರೂಪಾಯಿಗಳಿಂದ 45,180 ರೂಪಾಯಿಗಳಿಗೆ ಏರಿಕೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಮೂಲ ಪಿಂಚಣಿ/ಕೌಟುಂಬಿಕ ಪಿಂಚಣಿ ಮತ್ತು ಡಿಎಗಳನ್ನು ಲೆಕ್ಕ ಹಾಕಿ ಜುಲೈ 1,2017ರಿಂದ ಪೂರ್ವಾನ್ವಯವಾಗುವಂತೆ ಶೇಕಡಾ 30ರಷ್ಟು ಮೂಲ ಪಿಂಚಣಿ/ಕೌಟುಂಬಿಕ ಪಿಂಚಣಿಯಲ್ಲಿ ಕೂಡ ಏರಿಕೆ ಮಾಡಲಾಗಿದೆ.

ವೇತನ ಮತ್ತು ಭತ್ಯೆಯಲ್ಲಿ ಹೆಚ್ಚಳವನ್ನು ಏಪ್ರಿಲ್ 1ರಿಂದ ನಗದು ರೂಪದಲ್ಲಿ ನೀಡಲಾಗುತ್ತದೆ. ಇದು ರಾಜ್ಯದ 5.2 ಲಕ್ಷ ನೌಕರರು, 5.73 ಲಕ್ಷ ಪಿಂಚಣಿದಾರರು ಮತ್ತು ಕೌಟುಂಬಿಕ ಪಿಂಚಣಿದಾರರು, 73 ಸಾವಿರ ಅನುದಾನಿತ ಸಂಸ್ಥೆಗಳು, ಸ್ಥಳೀಯ ಸಂಸ್ಥೆಗಳು ಮತ್ತು ವಿಶ್ವವಿದ್ಯಾಲಯಗಳ ಬೋಧಕೇತರ ಸಿಬ್ಬಂದಿಗೆ ಅನ್ವಯವಾಗಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT