ಮೊಹಮ್ಮದ್ ಹ್ಯಾರಿಸ್ ನಲಪಾಡ್ 
ರಾಜ್ಯ

ವಿದ್ವತ್ ಮೇಲೆ ಹಲ್ಲೆ: ಜಾಮೀನು ಅರ್ಜಿ ವಜಾ, ಮೊಹಮ್ಮದ್ ನಲಪಾಡ್‍ಗೆ ಜೈಲೇ ಗತಿ!

ವಿದ್ವತ್ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಂತಿನಗರ ಶಾಸಕ ಎನ್ಎ ಹ್ಯಾರಿಸ್ ಪುತ್ರ ಎ1 ಆರೋಪಿ ಮೊಹಮ್ಮದ್ ನಲಪಾಡ್ ಜಾಮೀನು ಅರ್ಜಿಯನ್ನು...

ಬೆಂಗಳೂರು: ವಿದ್ವತ್ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಂತಿನಗರ ಶಾಸಕ ಎನ್ಎ ಹ್ಯಾರಿಸ್ ಪುತ್ರ ಎ1 ಆರೋಪಿ ಮೊಹಮ್ಮದ್ ನಲಪಾಡ್ ಜಾಮೀನು ಅರ್ಜಿಯನ್ನು ನ್ಯಾಯಾಧೀಶರು ವಜಾ ಮಾಡಿದ್ದಾರೆ. 
ಪ್ರಕರಣ ಸಂಬಂಧ 63ನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯದಲ್ಲಿ ಜಾಮೀನು ಅರ್ಜಿಯ ವಿಚಾರಣೆ ನಡೆದಿತ್ತು. ವಿದ್ವತ್ ಪರ ವಕೀಲ ಶ್ಯಾಮ್ ಸುಂದರ್ ಅವರು ನಲಪಾಡ್ ಗೆ ಜಾಮೀನು ನೀಡದಂತೆ ಮನವಿ ಮಾಡಿದರು. ಇದಕ್ಕೆ ಪ್ರತಿಯಾಗಿ ನಲಪಾಡ್ ವಕೀಲ ಟಾಮಿ ಸೆಬಾಸ್ಟಿಯನ್ ಜಾಮೀನು ನೀಡುವಂತೆ ನ್ಯಾಯಧೀಶರಲ್ಲಿ ಮನವಿ ಮಾಡಿದರು. ಇನ್ನು ವಾದ-ವಿವಾದ ಆಲಿಸಿದ್ದ ನ್ಯಾಯಾಧೀಶರು ಆದೇಶವನ್ನು ಇಂದಿಗೆ ಮುಂದೂಡಿದ್ದರು. 
ಇಂದು ನ್ಯಾಯಾಧೀಶರು ಆದೇಶವನ್ನು ಪ್ರಕಟಿಸಿದ್ದು ಮೊಹಮ್ಮದ್ ನಲಪಾಡ್ ಸೇರಿದಂತೆ ಇತರ 6 ಮಂದಿ ಜಾಮೀನು ಅರ್ಜಿಯನ್ನು ವಜಾ ಮಾಡಿದ್ದಾರೆ. ವಿದ್ವತ್ ಮೇಲಿನ ಹಲ್ಲೆ ಪ್ರಕರಣ ಇದೊಂದು ಗಂಭೀರ ಪ್ರಕರಣವಾಗಿದೆ. ಹಲ್ಲೆ ನಂತರ ಆರೋಪಿಗಳು ಆಸ್ಪತ್ರೆಯವರೆಗೂ ಹೋಗಿ ಅಲ್ಲಿ ದಾಂದಲೆ ನಡೆಸಿರುವುದು ಗಂಭೀರ ವಿಚಾರವಾಗಿದೆ. ಇದನ್ನೆಲ್ಲಾ ಮನಗಂಡು ಪ್ರಕರಣ ತನಿಖೆ ಹಂತದಲ್ಲಿರುವುದರಿಂದ ಆರೋಪಿಗೆ ಜಾಮೀನು ನೀಡಿದರೆ ಸಾಕ್ಷ್ಯ ನಾಶ ಮಾಡುವ ಸಂಭವ ಇರುವುದರಿಂದ ಆರೋಪಿಗಳಿಗೆ ಜಾಮೀನು ನಿರಾಕರಣೆ ಮಾಡಿರುವುದಾಗಿ ನ್ಯಾಯಾಧೀಶರು ತಿಳಿಸಿದ್ದಾರೆ. 
ಇಂದು ಜಾಮೀನು ಸಿಗುತ್ತದೆ ಎಂದು ಆಶಯದಲ್ಲಿದ್ದ ಮೊಹಮ್ಮದ್ ನಲಪಾಡ್ ಜೈಲು ಅಧೀಕ್ಷಕರ ಕೊಠಡಿಯಲ್ಲಿ ಕುಳಿತು ಟಿವಿಯಲ್ಲಿ ನೋಡಿದ್ದು ಜಾಮೀನು ಅರ್ಜಿ ವಜಾಗೊಳ್ಳುತ್ತಿದ್ದಂತೆ ಕೊಠಡಿಯಲ್ಲಿ ಕುಸಿದು ಬಿದ್ದಿದ್ದಾನೆ. ನಂತರ ಜೈಲು ಸಿಬ್ಬಂದಿಗಳು ಆತನಿಗೆ ನೀರು ಕುಡಿಸಿದ್ದಾರೆ. ಬಳಿಕ ಆತ ನನ್ನ ಹಣೆ ಬರಹ ಸರಿಯಿಲ್ಲ ಎಂದುಕೊಂಡು ಜೈಲು ಕೋಣೆಗೆ ತೆರಳಿದ್ದಾನೆ. 
ಕಳೆದ ಫೆಬ್ರವರಿ 17ರಂದು ರಾತ್ರಿ ಯುಬಿ ಸಿಟಿ ಕಟ್ಟಡದ ಫರ್ಜಿ ಕೆಫೆಯಲ್ಲಿ ವಿದ್ವತ್ ಮೇಲೆ ಗಂಭೀರ ಹಲ್ಲೆ ನಡೆದಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊಹಮ್ಮದ್ ನಲಪಾಡ್ ಸೇರಿದಂತೆ 7 ಮಂದಿ ನ್ಯಾಯಾಂಗ ಬಂಧನದಲ್ಲಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT