ಮೈಸೂರು: ಅರಣ್ಯ ಪ್ರದೇಶದಲ್ಲಿ ಅಗ್ನಿ ಅವಗಢ ಸಂಭವಿಸಿದ್ದರ ಬಗ್ಗೆ ತಪಾಸಣೆ ನಡೆಸುತ್ತಿದ್ದ ಅರಣ್ಯಾಧಿಕಾರಿ ಮೇಲೆ ಆನೆ ದಾಳಿ ನಡೆಸಿದ್ದು, ಅರಣ್ಯಾಧಿಕಾರಿ ಮೃತಪಟ್ಟಿರುವ ಘಟನೆ ನಾಗರಹೊಳೆ ಅಭಯಾರಣ್ಯದಲ್ಲಿ ನಡೆದಿದೆ.
ಡಿಬಿ ಕುಪ್ಪೆ ಫಾರೆಸ್ಟ್ ರೇಂಜ್ ನಲ್ಲಿ ಈ ಘಟನೆ ನಡೆದಿದ್ದು, ಎಸ್ ಮಣಿಕಂಠನ್ (45) ಮೃತಪಟ್ಟ ಅಧಿಕಾರಿಯಾಗಿದ್ದಾರೆ. ಪೊದೆಯ ಹಿಂದೆ ನಿಂತಿದ್ದ ಆನೆಯನ್ನು ಗಮನಿಸದೇ ಮಣಿಕಂಠನ್ ಪೊದೆಯ ಬಳಿ ಹೋಗಿದ್ದಾರೆ. ಈ ವೇಳೆ ದಾಳಿ ನಡೆದಿದ್ದು, ಅರಣ್ಯಾಧಿಕಾರಿ ಜೊತೆಗಿದ್ದ ರೇಂಜ್ ಫಾರೆಸ್ಟ್ ಅಧಿಕಾರಿ ಸುಬ್ರಹ್ಮಣ್ಯಸ್ವಾಮಿ ಸಹ ಗಾಯಗೊಂಡಿದ್ದಾರೆ. ಗಾಯಗೊಂಡ ಅಧಿಕಾರಿಗೆ ಹೆಚ್ ಡಿ ಕೋಟೆ ಬಳಿ ಇರುವ ಪ್ರಾಥಮಿಕ ಚಿಕಿತ್ಸಾ ಕೇಂದ್ರದಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.