ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: 30 ಸಾವಿರ ಲಂಚ ಪಡೆಯುತ್ತಿದ್ದ ಕಸ್ಟಮ್ಸ್‌ ಅಧೀಕ್ಷಕ ಸಿಬಿಐ ಬಲೆಗೆ

ವಿದೇಶದಿಂದ ತರಲಾಗಿದ್ದ ಎಲೆಕ್ಟ್ರಾನಿಕ್‌ ಸರಕುಗಳನ್ನು ರಿಲೀಸ್ ಮಾಡಲು 30 ಸಾವಿರ ರೂ.ಲಂಚ ಪಡೆದ ಆರೋಪದಲ್ಲಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ...

ಬೆಂಗಳೂರು: ವಿದೇಶದಿಂದ ತರಲಾಗಿದ್ದ ಎಲೆಕ್ಟ್ರಾನಿಕ್‌ ಸರಕುಗಳನ್ನು ರಿಲೀಸ್ ಮಾಡಲು 30 ಸಾವಿರ ರೂ.ಲಂಚ ಪಡೆದ ಆರೋಪದಲ್ಲಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ (ಕೆಐಎ) ಕಸ್ಟಮ್ಸ್‌ ಅಧೀಕ್ಷಕನನ್ನು ಪೊಲೀಸರು ಬಂಧಿಸಿದ್ದಾರೆ.
ನ್ಯೂ ತಿಪ್ಪಸಂದ್ರ ನಿವಾಸಿ ಬಿ.ಎಸ್‌ ಸಿಸ್ಟಮ್ಸ್‌ನ ಮಾಲೀಕರಾದ ಮುತ್ತುಕೃಷ್ಣನ್‌ ಎಂಬುವರು 11 ಕಾರು ಸ್ಟಿರಿಯೋಗಳು, 1 ಪಿಯಾನೋ ಮತ್ತು ಎರಡು ಮದರ್‌ಬೋರ್ಡ್‌ಗಳನ್ನು ಬ್ಯಾಂಕಾಕ್‌ನಲ್ಲಿ ಖರೀದಿಸಿದ್ದರು. ಬ್ಯಾಂಕಾಕ್‌ನಿಂದ ಶ್ರೀಲಂಕಾದ ಕೊಲಂಬೋಗೆ ತೆರಳಿ ಅಲ್ಲಿಂದ ಶ್ರೀಲಂಕನ್‌ ಏರ್‌ವೇಸ್‌ ಮೂಲಕ ಕೆಐಎ ಗೆ ಮಾರ್ಚ್ 1ರ ರಾತ್ರಿ ಬಂದಿದ್ದರು. 
ವಲಸೆ ವಿಭಾಗದಲ್ಲಿ ದಾಖಲೆಗಳ ಪರಿಶೀಲನೆ ಬಳಿಕ ತಮ್ಮ ಸರಕುಗಳನ್ನು ಸ್ವೀಕರಿಸಿ ಹೊರ ಬರುತ್ತಿದ್ದರು. ಈ ವೇಳೆ ಮುತ್ತುಕೃಷ್ಣನ್‌ ಅವರನ್ನು ತಡೆದ ಕರ್ತವ್ಯನಿರತ ಕಸ್ಟಮ್ಸ್‌ ಅಧೀಕ್ಷಕ ಶಫೀವುಲ್ಲಾ, ಸರಕನ್ನು ಬಿಡುಗಡೆ ಮಾಡಲು 30 ಸಾವಿರ ರೂ. ಲಂಚ ನೀಡಬೇಕು ಎಂಬ ಬೇಡಿಕೆ ಇಟ್ಟಿದ್ದರು.
ಲಂಚ ನೀಡಲು ತಮ್ಮ ಬಳಿ ಹಣ ಇಲ್ಲ ಎಂದು ಹೇಳಿದ ಮುತ್ತುಕೃಷ್ಣನ್‌, ಸ್ನೇಹಿತರು ಹಾಗೂ ಕುಟುಂಬ ಸದಸ್ಯರಿಂದ ಹಣ ಪಡೆದುಕೊಂಡು ಬರುವುದಾಗಿ ಹೇಳಿ ಸರಕುಗಳನ್ನು ಅಲ್ಲೇ ಇಟ್ಟು ಹೊರಗೆ ಬಂದಿದ್ದರು. ಅಲ್ಲಿಂದ ಸಿಬಿಐ ಕಚೇರಿಗೆ ತೆರಳಿ ಲಂಚದ ಕುರಿತು ಲಿಖಿತ ದೂರು ನೀಡಿದ್ದರು.
ಪ್ರಕರಣ ದಾಖಲಿಸಿಕೊಂಡ ಸಿಬಿಐ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ, ದೂರುದಾರನಿಂದ ಲಂಚ ಪಡೆಯುವ ವೇಳೆ ಅಧೀಕ್ಷಕ ಶಫೀವುಲ್ಲಾ ಅವರನ್ನು ಬಂಧಿಸಿ ನ್ಯಾಯಾಲಯದ ಎದುರು ಹಾಜರುಪಡಿಸಿದ್ದಾರೆ. ಸಿಬಿಐ ಅಧಿಕಾರಿಗಳು ಯಾವುದೇ ಹೆಚ್ಚಿನ ಮಾಹಿತಿಯನ್ನು ಬಹಿರಂಗ ಪಡಿಸಿಲ್ಲ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು, Video!

ಅಧಿಕೃತವಾಗಿ 'ಹೊಸ ಗರ್ಲ್‌ ಫ್ರೆಂಡ್‌' ಪರಿಚಯಿಸಿದ ಹಾರ್ದಿಕ್ ಪಾಂಡ್ಯ! Video

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

BBk 12: ಟಾಸ್ಕ್‌ನೇ ಮರೆತುಬಿಟ್ರಾ ಅಸುರಾಧಿಪತಿ ಕಾಕ್ರೋಚ್? ಬಾಗಿಲನ್ನು ಓಪನ್ ಮಾಡಿ ಎಂದ ಕಿಚ್ಚ ಸುದೀಪ್!

SCROLL FOR NEXT