ಗಂಗಾವತಿ: ಹೋಳಿ ಆಚರಣೆ ವೇಳೆ ನದಿಯಲ್ಲಿ ಮುಳುಗಿ ಯುವಕ ಸಾವು 
ರಾಜ್ಯ

ಗಂಗಾವತಿ: ಹೋಳಿ ಆಚರಣೆ ವೇಳೆ ನದಿಯಲ್ಲಿ ಮುಳುಗಿ ಯುವಕ ಸಾವು

ನಾಡಿನೆಲ್ಲೆಡೆ ಹೋಳಿ ಹಬ್ಬದ ಸಡಗರ ಮನೆ ಮಾಡಿದೆ. ಆದರೆ ಇದೇ ಸಂಭ್ರಮಾಚರಣೆಗಾಗಿ ಬೆಂಗಳೂರಿನಿಂದ ತನ್ನ ಊರಿಗೆ ಬಂದಿದ್ದ ಯುವಕನೊಬ್ಬ ನದಿಯಲ್ಲಿ ಮುಳುಗಿ ಸಾವನ್ನಪ್ಪಿರುವ...........

ಗಂಗಾವತಿ: ನಾಡಿನೆಲ್ಲೆಡೆ ಹೋಳಿ ಹಬ್ಬದ ಸಡಗರ ಮನೆ ಮಾಡಿದೆ. ಆದರೆ ಇದೇ ಸಂಭ್ರಮಾಚರಣೆಗಾಗಿ ಬೆಂಗಳೂರಿನಿಂದ ತನ್ನ ಊರಿಗೆ ಬಂದಿದ್ದ ಯುವಕನೊಬ್ಬ ನದಿಯಲ್ಲಿ ಮುಳುಗಿ ಸಾವನ್ನಪ್ಪಿರುವ ದಾರುಣ ಘಟನೆ ಕೊಪ್ಪಳ ಜಿಲ್ಲೆ ಗಂಗಾವತಿಯಲ್ಲಿ ನಡೆದಿದೆ.
ಗಂಗಾವತಿ ನಗರದ  13ನೇ ವಾರ್ಡ್ ನಿವಾಸಿ ಸಾಗರ್ ಕುಮಾರ್ (21) ಮೃತ ದುರ್ದೈವಿಯಾಗಿದ್ದು ಬೆಂಗಳೂರಿನಲ್ಲಿ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದ. ಹೋಳಿ ಹಬ್ಬಕ್ಕೆಂದು ಮಾ.1ರಂದು ಗಂಗಾವತಿಗೆ ಬಂದಿದ್ದ. 
ಮಾ.2ರಂದು ಸ್ನೇಹಿತರೊಡನೆ ಹೋಳಿ ಆಚರಣೆಯಲ್ಲಿ ತೊಡಗಿದ್ದು ಬಣ್ಣದ ನೀರೆರಚಿ ಸಂಭ್ರಮಿಸಿದ್ದ. ಆ ನಂತರ ಸ್ನೇಹಿತರೊಡನೆ ಕಂಪ್ಲಿ ಬಳಿಯ ತುಂಗಭದ್ರಾ ನದಿಗೆ ಸ್ನಾನಕ್ಕೆಂದು ಇಳಿದಿದ್ದ ಸಾಗರ್ ಸ್ನಾನ ಮಾಡುತ್ತಿದ್ದಾಗಲೇ ಕಾಲು ಜಾರಿ ಮುಳುಗಿದ್ದಾನೆ.  
ಇದನ್ನು ನೋಡಿದ ಸ್ಥಳೀಯ ಮೀನುಗಾರರು ಯುವಕನನ್ನು ನೀರಿನೆಂದೆತ್ತಿ ಸ್ಥಳೀಯ ಆಸ್ಪತ್ರೆಗೆ ದಾಕಲಿಸಲು ಮುಂದಾಗಿದ್ದಾರೆ. ಆದರೆ ಹೀಗೆ ಆಸ್ಪತ್ರೆಗೆ ಸಾಗಿಸುವ ಸಮಯದಲ್ಲಿ ಮಾರ್ಗ ಮಧ್ಯೆಯೇ ಸಾಗರ್ ಪ್ರಾಣ ಬಿಟ್ಟಿದ್ದಾನೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಹಾಸನಾಂಬ ದರ್ಶನಕ್ಕೆ ಭಕ್ತರ ಸಂಖ್ಯೆ ಹೆಚ್ಚಳ: ಎರಡೇ ದಿನಗಳಲ್ಲಿ ರೂ. 2.24 ಕೋಟಿ ಆದಾಯ, ಆರು ಸಿಬ್ಬಂದಿ ಅಮಾನತು!

ಸರ್ಕಾರಿ ಸಂಸ್ಥೆಗಳು, ಸಾರ್ವಜನಿಕ ಸ್ಥಳಗಳಲ್ಲಿ RSS ಚಟುವಟಿಕೆಗಳನ್ನು ನಿಷೇಧಿಸಿ: ಮುಖ್ಯಮಂತ್ರಿಗೆ ಪ್ರಿಯಾಂಕ್ ಖರ್ಗೆ ಪತ್ರ

RSS ನಿಷೇಧಕ್ಕೆ ಕರೆ: ಸಚಿವ ಪ್ರಿಯಾಂಕ್ ಖರ್ಗೆ ಬೌದ್ಧಿಕ ದಾರಿದ್ರ್ಯತನ ತೋರಿಸುತ್ತದೆ, ಯತ್ನಾಳ್ ಕಿಡಿ!

SCROLL FOR NEXT