ಬಿಬಿಎಂಪಿ 
ರಾಜ್ಯ

ಡೆಬ್ರಿ ತ್ಯಾಜ್ಯ ನಿರ್ವಹಣಾ ಘಟಕ ಕಾಮಗಾರಿ ಸ್ಥಗಿತ-ಬಿಬಿಎಂಪಿ ಭರವಸೆ

ವೈಟ್ ಪೀಲ್ಡ್ ನ ಪಟ್ಟಂದೂರು ಅಗ್ರಹಾರ ಕೆರೆ ಬಳಿ ನಿರ್ಮಿಸಲಾಗುತ್ತಿರುವ ಡೆಬ್ರಿ ತ್ಯಾಜ್ಯ ನಿರ್ವಹಣಾ ಘಟಕ ಕಾಮಗಾರಿಯನ್ನು ಸ್ಥಗಿತಗೊಳಿಸಲಾಗುವುದು ಎಂದು ಬಿಬಿಎಂಪಿ ಭರವಸೆ ನೀಡಿದೆ.

ಬೆಂಗಳೂರು: ವೈಟ್ ಪೀಲ್ಡ್ ನ  ಪಟ್ಟಂದೂರು ಅಗ್ರಹಾರ ಕೆರೆ ಬಳಿ ನಿರ್ಮಿಸಲಾಗುತ್ತಿರುವ ಡೆಬ್ರಿ ತ್ಯಾಜ್ಯ ನಿರ್ವಹಣಾ ಘಟಕ ಕಾಮಗಾರಿಯನ್ನು ಸ್ಥಗಿತಗೊಳಿಸಲಾಗುವುದು ಎಂದು ಬಿಬಿಎಂಪಿ ಭರವಸೆ ನೀಡಿದೆ.

ಕಾಮಗಾರಿ ನಿಲ್ಲಿಸುವಂತೆ ಒತ್ತಾಯಿಸಿ  ಪಟ್ಟಂದೂರು ಸುತ್ತಮುತ್ತಲಿನ ನೂರಾರು ನಿವಾಸಿಗಳು ಪ್ರತಿಭಟನೆ ನಡೆಸಿ, ಬಿಡಿಎ ಹಾಗೂ ಬಿಬಿಎಂಪಿಗೆ ಮನವಿ ಸಲ್ಲಿಸಿದ್ದರು.

ಈ  ಮನವಿಗೆ ಸ್ಪಂದಿಸಿದ ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ , ಡೆಬ್ರಿ ತ್ಯಾಜ್ಯ ನಿರ್ವಹಣಾ ಘಟಕ ಕಾಮಗಾರಿ ನಿಲ್ಲಿಸಲಾಗುವುದು ಎಂದು ಭರವಸೆ ನೀಡಿದ್ದಾರೆ ಎಂದು ಸ್ಥಳೀಯ ನಿವಾಸಿಗಳು ತಿಳಿಸಿದ್ದಾರೆ.

ಕೆರೆಯ ಬಪರ್ ವಲಯದಲ್ಲಿ ನಿಯಮಬಾಹಿರವಾಗಿ ರಸ್ತೆ  ಹಾಗೂ ಡೆಬ್ರಿ ತ್ಯಾಜ್ಯ ನಿರ್ವಹಣಾ ಘಟಕ ನಿರ್ಮಾಣದಿಂದ ಕೆರೆ ನಾಶ ಹೊಂದಲಿದೆ ಎಂಬುದು ಇಲ್ಲಿನ  ನಿವಾಸಿಗಳ ಆರೋಪವಾಗಿದೆ.

 ಅವೈಜ್ಞಾನಿಕ ಡೆಬ್ರಿ ತ್ಯಾಜ್ಯ ನಿರ್ವಹಣಾ ಘಟಕ ಕಾಮಗಾರಿ ನಿರ್ಮಾಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೂ ಮನವಿ ಸಲ್ಲಿಸಲಾಗಿದೆ.
ರಸ್ತೆ ನಿರ್ಮಾಣದಲ್ಲಿ ಹಸಿರು ನ್ಯಾಯಮಂಡಳಿ ನಿಯಮಗಳನ್ನು ಉಲ್ಲಂಘಿಸಲಾಗಿದೆ ಎಂದು ಸ್ಥಳೀಯ ನಿವಾಸಿ ಸಂದೀಪ್ ಅನಿರುದ್ಧೀನ್ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಹೆಸರು ಬಹುತೇಕ ಫೈನಲ್? ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ..!

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ? ಆಫ್ರಿಕಾದಿಂದ ಬಂದ ಮಹಿಳೆಯಲ್ಲಿ ಸೋಂಕಿನ ಲಕ್ಷಣ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್

SCROLL FOR NEXT